ಕುಮಟಾದಲ್ಲಿ ನಿವೇದಿತ್ ಆಳ್ವಾಗೆ ಕಾಂಗ್ರೆಸ್ ಟಿಕೆಟ್: ಇತರೆ ಆಕಾಂಕ್ಷಿಗಳಿಂದ ಬಂಡಾಯ ಸಾಧ್ಯತೆ
ಕಾರವಾರ, ಏಪ್ರಿಲ್ 15: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನಿವೇದಿತ್ ಆಳ್ವಾ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.
ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ, ಮಂಜುನಾಥ ನಾಯಕ, ಶಿವಾನಂದ ಹೆಗಡೆ ಕಡತೋಕಾ ಸೇರಿದಂತೆ 15ಕ್ಕೂಆಂಕಾಕ್ಷಿಗಳನ್ನು ಹೊಂದಿ ತೀವ್ರ ಪೈಪೋಟಿಗೆ ಕಾರಣವಾಗಿದ್ದ ಕುಮಟಾದಲ್ಲಿ ಕೊನೆಗೂ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಟಿಕೆಟ್ ಗಾಗಿ ಅರ್ಜಿಸಲ್ಲಿಸಿದವರ ಹೊರತಾಗಿ ನಿವೇದಿತ್ ಆಳ್ವಾ ಹೆಸರು ಕೇಳಿಬಂದಿತ್ತು. ಅಂದಿನಿಂದಲೂ ಕ್ಷೇತ್ರದಲ್ಲಿ ಸಾಕಷ್ಟು ರಾಜಕೀಯ ಬದಲಾವಣೆ ಗಾಳಿ ಬೀಸಲಾರಂಭಿಸಿತ್ತು. ನಿವೇದಿತ್ ಆಳ್ವಾ ಅವರಿಗೆ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಅಲ್ಲದೇ, ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಆಗ್ರಹಿಸಿದ್ದರು. ಹೀಗಾಗಿ ಮೊದಲ ಎರಡು ಪಟ್ಟಿಯಲ್ಲಿ ಕುಮಟಾ ಟಿಕೆಟ್ ಘೋಷಣೆ ಮಾಡದೆ ಹಾಗೆ ಉಳಿಸಲಾಗಿತ್ತು. ಆದರೆ ಇದೀಗ ಕೊನೆಗಳಿಗೆಯಲ್ಲಿ ಕಾಂಗ್ರೆಸ್ ಕುಮಟಾ ಕ್ಷೇತ್ರದದಲ್ಲಿ ನಿವೇದಿತಾ ಆಳ್ವಾ ಅವರನ್ನು ಕಣಕ್ಕೆ ಇಳಿಸಿದೆ.

ಇದರೊಂದಿಗೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಶಾಸಕಿ ಶಾರದಾ ಶೆಟ್ಟಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರು ಇದೀಗ ಬಂಡಾಯ ಏಳುವ ಸಾಧ್ಯತೆ ಇದೆ.
ಕುಮಟಾದಲ್ಲಿ ಕಾಂಗ್ರೆಸ್ನಿಂದ 15ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಚುನಾವಣಾ ತಯಾರಿ ನಡೆಸಿದ್ದರು. ಈ ನಡುವೆ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ತಮ್ಮ ಪುತ್ರನಿಗೆ ಕುಮಟಾದಿಂದ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿರುವ ವಿಚಾರ ಬಹಿರಂಗವಾಗುತ್ತಿದ್ದಂತೆ ಇತರೆ ಆಕಾಂಕ್ಷಿಗಳಲ್ಲಿ ಗೊಂದಲ ಉಂಟಾಗಿತ್ತು.
ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಹದಿನೈದು ಮುಖಂಡರು ತಲಾ 2 ಲಕ್ಷವನ್ನು ಕೆಪಿಸಿಸಿಗೆ ತುಂಬಿ ಅರ್ಜಿ ಸಲ್ಲಿಸಿದ್ದರು. ಕುಮಟಾದಿಂದ ಟಿಕೆಟ್ಗಾಗಿ ಅರ್ಜಿಯೇ ಸಲ್ಲಿಸದ ನಿವೇದಿತ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿರುವುದು ಪಕ್ಷದ ವಲಯದಲ್ಲಿಯೇ ದೊಡ್ಡ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಸದ್ಯ ಕಾಂಗ್ರೆಸ್ ಕುಮಟಾ ಕ್ಷೇತ್ರದಲ್ಲಿ ನಿವೇದಿತ್ ಆಳ್ವಾಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರು ಮತ್ತಷ್ಟು ಅಸಮಾಧಾನದಿಂದ ಬಂಡಾಯ ಏಳುವ ಸಾಧ್ಯತೆ ಹೆಚ್ಚಿದೆ.
ಕುಮಟಾ ಕ್ಷೇತ್ರದ ಚುನಾವಣೆ ಕಾವು ರಂಗೇರುವ ಮೊದಲು ನಿವೇದಿತ್ ಆಳ್ವ ಜಿಲ್ಲೆಯ ಶಿರಸಿ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿತ್ತು. ಅಲ್ಲದೇ ಟಿಕೆಟ್ಗಾಗಿ ಶಿರಸಿ ಕ್ಷೇತ್ರದಿಂದಲೇ ನಿವೇದಿತ್ ಅರ್ಜಿ ಸಲ್ಲಿಸಿದ್ದರು. ಆದರೆ ಈಗ ಕಾಂಗ್ರೆಸ್ ನಾಯಕರು ಕುಮಟಾದಿಂದಲೇ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಹೀಗಾಗಿ ಕುಮಟಾ ಕಾರ್ಯಕರ್ತರ ಮುಂದಿನ ನಡೆಯೇನು ಎನ್ನುವುದನ್ನು ಕಾದು ನೋಡಬೇಕಿದೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ











Click it and Unblock the Notifications