ಅನಂತಕುಮಾರ್ ಹೆಗಡೆಗೆ ಆನಂದ್ ಅಸ್ನೋಟಿಕರ್‌ ಕಿವಿಮಾತು

ಕಾರವಾರ, ಅಕ್ಟೋಬರ್‌ 07: "ಜಿಲ್ಲೆಯ ಅಭಿವೃದ್ದಿ ಬಗ್ಗೆ ಚಿಂತನೆ ನಡೆಸುತ್ತಿರುವ ಅನಂತಕುಮಾರ್ ಹೆಗಡೆಯವರ ತೀರ್ಮಾನಕ್ಕೆ ಸ್ವಾಗತವಿದೆ. ಸ್ಥಳೀಯ ಮೀನುಗಾರರನ್ನು, ಸಾರ್ವಜನಿಕರನ್ನ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಚಟುವಟಿಕೆ ಮಾಡಲಿ," ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್‌ ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಂಸದ ಅನಂತಕುಮಾರ್ ಹೆಗಡೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅಸ್ನೋಟಿಕರ್‌, "ಜಿಲ್ಲೆಯಲ್ಲಿ ಬಂದರುಗಳು ಅಭಿವೃದ್ದಿಯಾಗಬೇಕಾಗಿದೆ. ಈ ಬಗ್ಗೆ ಜಿಲ್ಲೆಯ ಜನರು ಸಹ ಅವಲೋಕನ ಮಾಡಬೇಕು. ಬಂದರು ಅಭಿವೃದ್ಧಿಯಾದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ," ಎಂದಿದ್ದಾರೆ.

"ಗುಜರಾತ್ ಭಾಗದಲ್ಲಿ ಮೀನುಗಾರರ ಸಂಖ್ಯೆ ಕಡಿಮೆಯಿದ್ದು, ಅಲ್ಲಿ ಸುಲಭವಾಗಿ ಬಂದರುಗಳು ಅಭಿವೃದ್ಧಿಯಾಗಿದೆ. ಅಲ್ಲದೇ ದೊಡ್ಡ ಪ್ರಮಾಣದಲ್ಲಿ ವ್ಯವಹಾರ ಪ್ರದೇಶ ಸಹ ಅಭಿವೃದ್ಧಿಯಾಗಿದೆ. ಆದರೆ ಜಿಲ್ಲೆಯಲ್ಲಿ ಬಂದರು ಪ್ರದೇಶದ ಸಮೀಪದಲ್ಲಿಯೇ ಸಾಕಷ್ಟು ಸಂಖ್ಯೆಯಲ್ಲಿ ಮೀನುಗಾರರು ಮೀನುಗಾರಿಕೆ ಮೂಲಕ ತಮ್ಮ ಜೀವನ ಕಂಡುಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಂದರು ಪ್ರದೇಶ ಅಭಿವೃದ್ಧಿಯಾಗಬೇಕು, ಜನರ ಸಮಸ್ಯೆಯೂ ಬಗೆಹರಿಯಬೇಕಾಗಿದೆ. ಬಂದರು ಅಭಿವೃದ್ಧಿ ಮಾಡುವುದಕ್ಕೆ ನನ್ನ ಬೆಂಬಲವಿದೆ. ಆದರೆ ಬಂದರು ಪ್ರದೇಶದಲ್ಲಿ ವಾಸವಿರುವ ಮೀನುಗಾರರ ಸಮಸ್ಯೆಯನ್ನೂ ಸಹ ನಾವು ಅರಿಯಬೇಕು. ಸಂಸದ ಅನಂತಕುಮಾರ್ ಹೆಗಡೆ ಬಂದರು ಅಭಿವೃದ್ಧಿ ಮಾಡಲು ಹಣ ಮಂಜೂರಾದಾಗ ಮೀನುಗಾರರನ್ನ ಕರೆಸಿ ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕಾರ್ಯ ಮಾಡಿದ್ದರೆ ಬಂದರು ಇಷ್ಟರೊಳಗೆ ಇನ್ನಷ್ಟು ಅಭಿವೃದ್ಧಿಯಾಗುತ್ತಿತ್ತು," ಎಂದು ಹೇಳಿದ್ದಾರೆ.

Congress former Minister Anand Asnotikar Slams BJP leader Anant Kumar Hegde

"ಎಲ್ಲಾ ಜನಪ್ರತಿನಿಧಿಗಳು ಸ್ಥಳೀಯ ಮೀನುಗಾರರನ್ನು, ಸಾರ್ವಜನಿಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಬಂದರು ಅಭಿವೃದ್ಧಿ ಮಾಡುವ ಕಾರ್ಯವನ್ನು ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಎಂದು ಬಂದಾಗ ಯಾತಕ್ಕಾಗಿ ವಿರೋಧವಾಗುತ್ತಿದೆ ಎನ್ನುವ ಕಾರಣ ತಿಳಿಯಬೇಕು. ಮುಂದಿನ ದಿನದಲ್ಲಿ ಬೇಲೇಕೇರಿ, ಹೊನ್ನಾವರ ಬಂದರು ಅಭಿವೃದ್ಧಿ ಬಗ್ಗೆ ಸಹ ಅನಂತಕುಮಾರ್ ಹೇಳಿದ್ದು, ಅಲ್ಲಿನ ಜನರನ್ನ ಸಹ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ. ಕೊರೊನಾ ಹಿನ್ನಲೆಯಲ್ಲಿ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಂದರು ಅಭಿವೃದ್ಧಿಯಾಗಲಿ, ವಿಮಾನ ನಿಲ್ದಾಣವಾಗಲಿ ಮುಂದಿನ ದಿನದಲ್ಲಿ ಸ್ಥಳೀಯರಿಗಿಂತ ಹೊರಗಿನವರಿಗೆ ಉದ್ಯೋಗ ಕೊಡುವ ಕಾರ್ಯ ಆಗುತ್ತದೆ. ಇದನ್ನ ತಪ್ಪಿಸಬೇಕು. ಸ್ಥಳೀಯರಿಗೆ ಈ ಯೋಜನೆಯಿಂದ ಆಗುವ ಲಾಭವನ್ನ ಮುಂಚೆಯೇ ತಿಳಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳು ವಾಪಸ್ ಹೋಗದಂತೆ ಜನರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸಂಸದರು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿ," ಎಂದು ಆನಂದ್ ಒತ್ತಾಯಿಸಿದ್ದಾರೆ.

ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ ಇತ್ತೀಚೆಗೆ ತಮ್ಮ ಮನದಾಳ‌ ಬಿಚ್ಚಿಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮುಂದಿನ ಐದು- ಹತ್ತು ವರ್ಷಗಳಲ್ಲಿ ಉತ್ತರ ಕನ್ನಡ ಹೇಗಾಗಲಿದೆ ಮತ್ತು ಅದಕ್ಕಾಗಿ ಜಿಲ್ಲೆಯ ಜನರು ಹೇಗೆ ತಯಾರಿರಬೇಕೆಂಬುದನ್ನು ತೆರೆದಿಟ್ಟಿದ್ದರು.

'ಸಾಗರಮಾಲಾ ಯೋಜನೆಯಡಿ ಕಾರವಾರದಲ್ಲಿ ಬೃಹತ್ ಪ್ರಮಾಣದ ಬಂದರು ಮಾಡಬೇಕೆಂದು ಕೇಂದ್ರ ಸರ್ಕಾರ ತೀರ್ಮಾನ ಮಾಡಿತು. ಅದಕ್ಕೆ ವಿರೋಧ ಶುರುವಾಯಿತು. ಸಾಗರಮಾಲಾ ಯೋಜನೆಯಡಿಯಲ್ಲಿ ಇಡೀ‌ ಜಿಲ್ಲೆಯನ್ನು ಜೋಡಿಸುವ ಬೃಹತ್ ಹೆದ್ದಾರಿಗಳ ಸಮುಚ್ಛಯ ನಿರ್ಮಿಸಲು ತೀರ್ಮಾನವಾಯಿತು, ಅದಕ್ಕೂ ವಿರೋಧ ವ್ಯಕ್ತವಾಯಿತು.

ಹೊನ್ನಾವರದಲ್ಲಿ ಬಂದರು ಕೆಲಸ ಪ್ರಾರಂಭವಾಗಿದೆ, ಅಲ್ಲೂ ವಿರೋಧ. ಇನ್ನೇನು ಬೇಲೇಕೇರಿ ಕೆಲಸ ಶುರುವಾಗಲಿಕ್ಕಿದೆ, ಗೊತ್ತಿಲ್ಲ ಮುಂದೆ ಏನಾಗುತ್ತದೆಂದು. ಒಟ್ಟಾರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ತುಂಬಾ ದೊಡ್ಡ ಪ್ರಮಾಣದಲ್ಲಿ ತೆಗೆದುಕೊಂಡು ಬರಬೇಕೆಂದು ತೀರ್ಮಾನ ಮಾಡಿದ ಹೊಸ್ತಿಲಲ್ಲೇ ಅಲ್ಲಲ್ಲಿ ಈ ರೀತಿಯ ಅಭಿವೃದ್ಧಿ ವಿರೋಧಿ ಗುಂಪುಗಳು ಕೆಲಸವನ್ನು ಶುರು ಮಾಡಿ ತಮ್ಮ ಚಟುವಟಿಕೆಗಳನ್ನು ಜಾಸ್ತಿ ಮಾಡಿವೆ' ಎಂದು ಸಂಸದ ಹೆಗಡೆ ಹೇಳಿದ್ದರು. ಈ ಹೇಳಿಕೆ ಜಿಲ್ಲೆಯಲ್ಲೀಗ ಚರ್ಚೆಗೆ ಕಾತಣವಾಗಿದ್ದು, ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

(ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+