ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೈತ್ರಾ ಕೊಠಾರಕರ್‌ ಬಿಜೆಪಿ ಸೇರ್ಪಡೆ?; ಅಮಿತ್ ಶಾ ಪುತ್ರನ ಕರೆ!

By ದೇವರಾಜ್ ನಾಯ್ಕ್
|
Google Oneindia Kannada News

ಕಾರವಾರ, ಏಪ್ರಿಲ್ 07; ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ, ಕಾಂಗ್ರೆಸ್‌ನ ಚೈತ್ರಾ ಕೊಠಾರಕರ್ ಬಿಜೆಪಿ ಸೇರಲಿದ್ದಾರೆ?. ಗೃಹ ಸಚಿವ ಅಮಿತ್ ಶಾ ಪುತ್ರ ಕರೆ ಮಾಡಿ ಬಿಜೆಪಿಗೆ ಆಹ್ವಾನಿಸಿದ್ದಾರಂತೆ.

ಹೌದು, ಚೈತ್ರಾ ಕೊಠಾರಕರ್ ಪತಿ ಚಂದ್ರಹಾಸ ಕೊಠಾರಕರ್ ಈ ಹಿಂದೆ ಕಾರವಾರ ತಾಲೂಕು ಪಂಚಾಯತಿ ಅಧ್ಯಕ್ಷರಾಗಿದ್ದರು. ಪತಿ, ಪತ್ನಿ ಇಬ್ಬರೂ‌ ಕಾಂಗ್ರೆಸ್‌ ಪಕ್ಷದಲ್ಲಿದ್ದು, ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.

ವೈರಲ್ ವಿಡಿಯೋ; ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಸಖತ್ ಡ್ಯಾನ್ಸ್! ವೈರಲ್ ವಿಡಿಯೋ; ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಸಖತ್ ಡ್ಯಾನ್ಸ್!

ಕಳೆದ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾರವಾರದ ಅಮದಳ್ಳಿ ಕ್ಷೇತ್ರದಿಂದ ಹಾಲಿ ಶಾಸಕಿ ರೂಪಾಲಿ ನಾಯ್ಕ ಕಣಕ್ಕೆ ಇಳಿದಿದ್ದರು. ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದ ಅವರಿಗೆ ಚೈತ್ರಾ ಕೊಠಾರಕರ್ ತೀವ್ರ ಸ್ಪರ್ಧೆ ನೀಡಿದ್ದರು.

 ಸ್ಥಳೀಯ ಸಂಸ್ಥೆಗಳ ಚುಕ್ಕಾಣಿ ಹಿಡಿದು 'ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ’ ಹೊಡೆದ ರೂಪಾಲಿ ನಾಯ್ಕ ಸ್ಥಳೀಯ ಸಂಸ್ಥೆಗಳ ಚುಕ್ಕಾಣಿ ಹಿಡಿದು 'ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ’ ಹೊಡೆದ ರೂಪಾಲಿ ನಾಯ್ಕ

ಅಂದು ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಿದ್ದ ಚೈತ್ರಾ ಕೊಠಾರಕರ್ ಗೆಲುವು ಕಂಡು, ರೂಪಾಲಿ ನಾಯ್ಕ ಸೋಲನ್ನು ಕಂಡಿದ್ದರು.

ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಸಂಸದ ಅನಂತಕುಮಾರ ಹೆಗಡೆ? ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಸಂಸದ ಅನಂತಕುಮಾರ ಹೆಗಡೆ?

ಬಿಜೆಪಿ ಸೇರುವ ಇಂಗಿತ

ಬಿಜೆಪಿ ಸೇರುವ ಇಂಗಿತ

ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಓಡಾಟ ಹೆಚ್ಚಿಗೆ ಮಾಡಿ ಬಿಜೆಪಿ ಟಿಕೆಟ್ ಪಡೆದು ಶಾಸಕರಾದ ರೂಪಾಲಿ ನಾಯ್ಕ ಹಾಗೂ ಚೈತ್ರಾ ಕೊಠಾರಕರ್ ನಡುವೆ ಇಂದಿಗೂ ಮುಸುಕಿನ ಗುದ್ದಾಟ ಮುಂದುವರಿದಿದೆ. ಆದರೂ ಇದೀಗ ಬಿಜೆಪಿ ಸೇರುವ ಬಗ್ಗೆ ಸ್ವತಃ ಚೈತ್ರಾ ಕೊಠಾರಕರ್ ಇಂಗಿತ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಪುತ್ರನ ಕರೆ?

ಅಮಿತ್ ಶಾ ಪುತ್ರನ ಕರೆ?

"ಈ ಬಾರಿ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸುತ್ತಿಲ್ಲ. ಆದರೆ ಅಮಿತ್ ಶಾ ಅವರ ಪುತ್ರನೇ ನನಗೆ ಕರೆ ಮಾಡಿ, ಬಿಜೆಪಿಗೆ ಸೇರ್ಪಡೆಯಾಗುವಂತೆ ತಿಳಿಸಿದ್ದಾರೆ. ನಾನು ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ" ಎಂದು ಚೈತ್ರಾ ಕೊಠಾರಕರ್ ಹೇಳಿದ್ದಾರೆ.

ರಾಷ್ಟ್ರ ಮಟ್ಟದ ಹುದ್ದೆ

ರಾಷ್ಟ್ರ ಮಟ್ಟದ ಹುದ್ದೆ

ಶಾಸಕಿ ರೂಪಾಲಿಯವರಿಗೆ ತಮ್ಮ ಮೇಲೆ ಇನ್ನೂ ಮುನಿಸಿದೆ. ಹೀಗಿರುವಾಗ ಹೇಗೆ ಬಿಜೆಪಿ ಸೇರ್ಪಡೆಯಾಗಿವಿರಿ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, "ಸ್ಥಳೀಯವಾಗಿ ಅಲ್ಲ, ರಾಷ್ಟ್ರ ಮಟ್ಟದ ಹುದ್ದೆಯೊಂದನ್ನು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

Recommended Video

ಎರಡನೇ ಬಾರಿ Bus Strike ಮಾಡಿದರು ಕ್ಯಾರೆ ಅನ್ನೋರಿಲ್ಲಾ!! | Oneindia Kannada
ಬಿಜೆಪಿಯವರು ಒಪ್ಪಲಿದ್ದಾರೆಯೇ?

ಬಿಜೆಪಿಯವರು ಒಪ್ಪಲಿದ್ದಾರೆಯೇ?

ಒಟ್ಟಾರೆಯಾಗಿ ಚೈತ್ರಾ ಕೊಠಾರಕರ್ ಮುಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ?, ಸೇರಿದರೆ ಪಕ್ಷ ಯಾವ ಹುದ್ದೆ ನೀಡಲಿದೆ?, ಸ್ಥಳೀಯವಾಗಿ ಬಿಜೆಪಿ ಪದಾಧಿಕಾರಿಗಳು ಅಥವಾ ಕಾರ್ಯಕರ್ತರು ಇವರ ಸೇರ್ಪಡೆ ಒಪ್ಪಲಿದ್ದಾರೆ? ಎಂಬುದನ್ನು ಕಾದು ನೋಡಬೇಕಿದೆ.

English summary
Uttar Kannada district zilla panchayata member and Congress leader Chaitra Kotharkar may join BJP. Home minister and senior BJP leader Amit Shah son invited Chaitra Kotharkar to the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X