ಕದಂಬೋತ್ಸವ ಬಿಜೆಪಿ ಪಕ್ಷದ ಉತ್ಸವವಾಗುತ್ತಿದೆ: ಸಿಎಂ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಆಗಮಿಸುತ್ತಿದ್ದ ರಸ್ತೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಬನವಾಸಿಯಲ್ಲಿ ನಡೆದಿದೆ.
ಕಾರವಾರ, ಫೆಬ್ರವರಿ 28: ಪಕ್ಷಾತೀತವಾಗಿ ನಡೆಸಬೇಕಾದ ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಆಗಮಿಸುತ್ತಿದ್ದ ರಸ್ತೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪರಿಣಾಮ ಕೆಲ ನಿಮಿಷ ಸಿಎಂ ಸಂಚಾರಕ್ಕೆ ಅಡ್ಡಿಯಾದ ಘಟನೆ ಬನವಾಸಿಯಲ್ಲಿ ನಡೆದಿದೆ.
ಬನವಾಸಿಯಲ್ಲಿ ಆಯೋಜಿಸಲಾಗಿರುವ ಕದಂಬೋತ್ಸವ ಹಾಗೂ ಕೆರೆ ತುಂಬಿಸುವ ಯೋಜನೆ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದ ವೇಳೆ ಅದೇ ಮಾರ್ಗದ ರಸ್ತೆಯಲ್ಲಿಯೇ ವಿಎಸ್ ಪಾಟೀಲ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡಲಾಗುತ್ತಿದೆ. ಕೇವಲ ಪಕ್ಷದ ಕಾರ್ಯಕರ್ತರನ್ನು ಆಹ್ವಾನಿಸಿ ಮಾಡಲಾಗುತ್ತಿದೆ. ಸಚಿವರು ಬಿಜೆಪಿ ಚಿಹ್ನೆಯಿರುವ ಟೀ ಶರ್ಟ್ ಹಂಚಿ ಪಕ್ಷದ ಉತ್ಸವ ಮಾಡುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಗೆ ಈ ಹಿಂದೆ ಸಿದ್ದರಾಮಯ್ಯ ಅವರು ಅನುದಾನ ಒದಗಿಸಿದ್ದರು. ಆದರೆ ಇದೀಗ ಕರೆಂಟ್ ಹಾಗೂ ನೀರಿಲ್ಲದೆ ಇದ್ದರೂ ಏತ ನೀರಾವರಿ ಯೋಜನೆ ಉದ್ಘಾಟನೆ ಮಾಡಲಾಗುತ್ತಿದೆ. ಯೋಜನೆಯನ್ನು ಸಿಎಂ ಉದ್ಘಾಟನೆ ಮಾಡಿ ಅದರ ಕ್ರೆಡಿಟ್ ಪಡೆಯಲು ಶಿವರಾಮ್ ಹೆಬ್ಬಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಸರ್ಕಾರಿ ನೌಕರರ ಮುಷ್ಕರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆ ಮಾಡಿದ್ದು ಆಯೋಗದ ಸಂಪರ್ಕದಲ್ಲಿದ್ದೇವೆ. ಬುಧವಾರದೊಳಗೆ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸರಕಾರಿ ನೌಕರರು ನಮ್ಮವರು, ವೇತನ ಆಯೋಗದ ಜೊತೆ ಸಂಪರ್ಕದಲ್ಲಿದ್ದೇವೆ. ವರದಿ ತರಿಸಿ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಂಜೆ ಹೊರಟು ಹಿರಿಯ ಅಧಿಕಾರಿಗಳು ಹಾಗೂ ಆಯೋಗದ ಜೊತೆಗೆ ಮಾತನಾಡಿ ಸಮಸ್ಯೆ ಇತ್ಯರ್ಥಪಡಿಸುವ ಪ್ರಯತ್ನ ಮಾಡುತ್ತೇನೆ. ಎಸ್ಮಾ ಜಾರಿ ಮಾಡುವಂಥ ಪರಿಸ್ಥಿತಿ ಬಂದಿಲ್ಲ, ಆ ಬಗ್ಗೆ ಯೋಚನೆ ಮಾಡಿಲ್ಲ. ಆಯೋಗ ರಚನೆ ಆದಮೇಲೆ ವೇತನ ಕೊಡಲೇಬೇಕಾಗುತ್ತದೆ. ನಾಳೆ ಎಲ್ಲವೂ ಬಗೆಹರಿಯುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.
ಅಬಕಾರಿ ಹಗರಣ ದಾಖಲೆ ನೀಡಲಿ, ತನಿಖೆಗೆ ಸಿದ್ಧ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಆರೋಪದ ಬಗ್ಗೆ ವಿವರ ಕೊಡಲಿ. ತನಿಖೆ ಮಾಡೋಣ. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ. ಈ ಬಗ್ಗೆ ಪ್ರಶ್ನೆಯೇ ಇಲ್ಲ. ಆಧಾರವಿಲ್ಲದೆ ಆರೋಪ ಮಾಡಬಾರದು. ಪ್ರಿಯಾಂಕ್ ಖರ್ಗೆಯವರ ಮೇಲೂ ಬಹಳಷ್ಟು ಆರೋಪವಿದೆ. ಲೋಕಾಯುಕ್ತಕ್ಕೆ ದೂರು ನೀಡಲಿ, ತನಿಖೆಯಾಗಲಿ ಎಂದಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications