ಮೊಸಳೆ ಬಂತು ಮೊಸಳೆ... ಗ್ರಾಮದಲ್ಲಿ ಏಕಾಏಕಿ ಪ್ರತ್ಯಕ್ಷ!
ಕಾರವಾರ, ಜುಲೈ 1: ಬೃಹತ್ ಗಾತ್ರದ ಮೊಸಳೆಯೊಂದು ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಘಟನೆ ಉತ್ತರ ಕನ್ನಡ ಜಿಲ್ಲೆ ದಾಂಡೇಲಿ ತಾಲ್ಲೂಕಿನ ಕೋಗಿಲಬನ ಗ್ರಾಮದಲ್ಲಿ ನಡೆದಿದೆ.
Recommended Video
ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಗ್ರಾಮದಲ್ಲಿ ಮೊಸಳೆ ರಾಜಾರೋಷವಾಗಿ ತಿರುಗಾಡಿದ್ದು, ಅದೃಷ್ಟವಶಾತ್ ಯಾರ ಮೇಲೂ ದಾಳಿ ನಡೆಸಿಲ್ಲ. ಕೋಗಿಲಬನ ಗ್ರಾಮದಲ್ಲಿ ಮೊಸಳೆ ತಿರುಗಾಡಿದ್ದನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಮೊಸಳೆಯೊಂದು ಈ ರೀತಿ ಗ್ರಾಮಕ್ಕೆ ಆಗಮಿಸಿರುವುದು ಸ್ಥಳೀಯರಲ್ಲಿ ಅಚ್ಚರಿಗೂ ಕಾರಣವಾಗಿದೆ.
ಗ್ರಾಮದ ಸಮೀಪಲ್ಲಿರುವ ಕಾಳಿ ನದಿಯಿಂದ ಮೊಸಳೆ ಗ್ರಾಮಕ್ಕೆ ಆಗಮಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಬಳಿಕ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸಿಬ್ಬಂದಿ ಆಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಮತ್ತೆ ಕಾಳಿ ನದಿಗೆ ಸೇರಿಸಿದ್ದಾರೆ.

ಈ ಹಿಂದೆ ಕಾಲಿ ನದಿ ಭಾಗದಲ್ಲಿ ಮೊಸಳೆಗಳು ಮನುಷ್ಯನ ಮೇಲೆ ಎರಗಿ ಸಾವುಗಳಾದ ಘಟನೆ ಸಹ ನಡೆದಿದೆ. ದಾಂಡೇಲಿಯ ಕಾಗದ ಕಾರ್ಖಾನೆ ಬಳಿ ನದಿ ತಡದಲ್ಲಿ ಅತೀ ಹೆಚ್ಚು ಮೊಸಳೆಗಳು ವಾಸಿಸುತ್ತಿವೆ.
ಕಾರ್ಖಾನೆಯ ತ್ಯಾಜ್ಯಗಳೇ ಇವುಗಳಿಗೆ ಆಹಾರವಾಗಿದ್ದು, ಲಾಕ್ಡೌನ್ನಿಂದ ಜನರ ಓಡಾಟ ಸಹ ಈ ಪ್ರದೇಶಗಳಲ್ಲಿ ಇಳಿಮುಖವಾಗಿತ್ತು. ಹೀಗಾಗಿ ಆಹಾರ ಅರಸಿ ಮೊಸಳೆಗಳು ನದಿ ದಡದಿಂದ ಸುತ್ತಮುತ್ತ ಓಡಾಟ ನಡೆಸುತಿದ್ದು, ಇಂದು ಗ್ರಾಮಕ್ಕೆ ಮೊಸಳೆ ನುಗ್ಗಿದ್ದರಿಂದ ಇದೀಗ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications