ದಾಂಡೇಲಿಯ ಹೋರಾಟಗಾರ, ವಕೀಲ ಅಜಿತ್ ನಾಯ್ಕ ಮೇಲೆ ಹಲ್ಲೆ, ಸಾವು
ಕಾರವಾರ, ಜುಲೈ 27: ದಾಂಡೇಲಿ ತಾಲೂಕು ಹೋರಾಟಗಾರ, ವಕೀಲ ಅಜಿತ್ ನಾಯ್ಕ (57) ಅವರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದ ಸಮೀಪದ ಜೆ.ಎನ್.ರಸ್ತೆಯಲ್ಲಿರುವ ತಮ್ಮ ಕಚೇರಿಯಿಂದ ಕೆಳಗಿಳಿದು ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಬಂದು ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ.
ಅಜಿತ್ ನಾಯ್ಕ, ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ದಾಂಡೇಲಿಯನ್ನು ತಾಲೂಕನ್ನಾಗಿಸಲು ನಡೆಸಿದ ಹೋರಾಟಗಳಲ್ಲಿ ಅವರು ಮುಂಚೂಣಿಯಲ್ಲಿದ್ದರು. ನಗರ ಸಭೆಯ ಮಾಜಿ ಅಧ್ಯಕ್ಷರು, ದಾಂಡೇಲಿ ತಾಲೂಕು ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.

ಈ ಹಿಂದೆ ಸಂಸದರಾಗಿದ್ದ ಮಾರ್ಗರೆಟ್ ಆಳ್ವಾ ಮತ್ತು ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರೀತಿಯ ಶಿಷ್ಯರಾಗಿ ಗಮನ ಸೆಳೆದಿದ್ದರು. ಅನೇಕ ವರ್ಷಗಳ ಕಾಲ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.
2007ನೇ ಸಾಲಿನಲ್ಲಿ ದಾಂಡೇಲಿ ಬಚಾವೋ ಸಮಿತಿಯ ಮೂಲಕ ದಾಂಡೇಲಿ ತಾಲೂಕು ರಚನೆಗಾಗಿ ಅಮೂಲಾಗ್ರ ಹೋರಾಟವನ್ನು ನಡೆಸಿ, ರಾಜ್ಯ ಮಟ್ಟದ ನಾಯಕರನ್ನು ಕರೆಸಿ ಸಂಚಲನ ಮೂಡಿಸಿದ್ದ ಅವರು, ನಗರ ಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅವರಿಗೆ ಬೆಂಬಲಿಗರ ಬಹುದೊಡ್ಡ ಪಡೆ ಇತ್ತು.
ಅವರಿಗೆ ಪತ್ನಿ ಭಾರತಿ, ಪ್ರಜ್ವಲ್ ಮತ್ತು ಅಶೀಸ್ ಎಂಬ ಇಬ್ಬರು ಪುತ್ರರಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications