ರಾಜ್ಯದಲ್ಲಿ ಸದೃಢ ಹಾಗೂ ಪ್ರಗತಿಪರ ಸರ್ಕಾರ: ಡಿಸಿಎಂ ಅಶ್ವತ್ಥ ನಾರಾಯಣ
ಕಾರವಾರ, ಫೆಬ್ರವರಿ 12: ರಾಜ್ಯದಲ್ಲಿ ಸದೃಢ ಹಾಗೂ ಪ್ರಗತಿಪರ ಆಡಳಿತವನ್ನು ನೀಡುವ ಕಾರ್ಯ ಬಿಜೆಪಿ ಸರ್ಕಾರ ಮಾಡಲಿದೆ. ಮುಂದಿನ 3 ವರ್ಷ, ಮೂರು ತಿಂಗಳು ಯಾವುದೇ ಅಡ್ಡಿ ಇಲ್ಲದೇ ಸರ್ಕಾರ ಸೂಸುತ್ರವಾಗಿ ಮುನ್ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಹೊನ್ನಾವರ ತಾಲೂಕಿನ ಕೆಳಗಿನೂರು ಒಕ್ಕಲಿಗ ಸಭಾಭವನ ಉದ್ಘಾಟನೆ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರ, ಪ್ರತಿ ಜಿಲ್ಲೆಗೆ ಆಯಾ ಜಿಲ್ಲೆಯವರೇ ಉಸ್ತುವಾರಿ ಸಚಿವರ ನೇಮಕವಾಗಲಿದೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಕೆಲ ಖಾತೆ ಹಂಚಿಕೆಯಲ್ಲಿ ಅಸಮಧಾನವಿದೆ ಎಂದರು.
ಆದರೆ ಅದನ್ನು ಚರ್ಚಿಸಿ ಖಾತೆ ಬದಲಾವಣೆ ಅಥವಾ ಪುನರ್ ರಚನೆ ಮಾಡುವ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಬಿಜೆಪಿ ಸರ್ಕಾರ ರಚನೆಯಾದ ನಂತರವೂ ಖಾತೆ ಸರ್ಕಸ್ ಮುಂದುವರೆದಿದೆ ಎನ್ನುವ ವಿರೋಧ ಪಕ್ಷದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದರು.

2018 ರ ವಿಧಾನ ಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಕಾರಣ ಮೈತ್ರಿ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿ ಮುಖ್ಯಮಂತ್ರಿ ಅವಧಿಯಲ್ಲಿ ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತೆನೋ ಗೊತ್ತಿಲ್ಲ. ಅವರ ಕೃಪೆ, ಇವರ ಕೃಪೆ ಅಂತ ಹೇಳಿ ಅವರು ಅಧಿಕಾರ ನಡೆಸಿದರೇ ಹೊರತು ಜನಪರ ಆಡಳಿತ ನಡೆಸಲು ವಿಫಲವಾದರು ಎಂದು ಟೀಕಿಸಿದರು.
ಇದರ ಪರಿಣಾಮದಿಂದಾಗಿ ಆ ಪಕ್ಷದಿಂದ ರಾಜೀನಾಮೆ ಹಲವು ಶಾಸಕರು ನೀಡಿ ಬಂದರು. ನಮ್ಮ ಮುಂದಿರುವ ಗುರಿ ಜನಪರ ಆಡಳಿತ ನೀಡುವುದು, ಒಂದೇ ಆಗಿದೆ ಅದನ್ನು ನಾವು ನೀಡಲಿದ್ದೇವೆ ಎಂಬ ಭರವಸೆ ಇದೆ ಎಂದರು.
ದೆಹಲಿ ಫಲಿತಾಂಶ ಬಿಜೆಪಿ ಹಿನ್ನಡೆಯಲ್ಲವೇ ಎಂದು ಪ್ರಶ್ನಿಸಿದಾಗ, ಒಂದು ರಾಜ್ಯದ ಫಲಿತಾಂಶ ಪಕ್ಷಕ್ಕೆ ಹಿನ್ನಡೆಯಲ್ಲ, ಕಳೆದ ಬಾರಿಗಿಂತ ನಾವು ಹೆಚ್ಚು ಸ್ಥಾನ ಗೆಲುವು ಸಾಧಿಸಿದ್ದೇವೆ. ಅಲ್ಲದೇ ಬೆಂಗಳೂರಿನ ಮಹಾನಗರ ಪಾಲಿಕೆಯಷ್ಟು ಚಿಕ್ಕದಾದ ಒಂದು ರಾಜ್ಯದ ಚುನಾವಣೆ ಇಡೀ ರಾಷ್ಟ್ರದ ರಾಜಕಾರಣದಲ್ಲಿ ಪರಿಣಾಮ ಬೀರುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications