ಸಿದ್ದಾಪುರ : ಅನಿವಾರ್ಯ ಕಾರಣಕ್ಕೆ ನಿಂತಿದ್ದ ದೀಪಾವಳಿ, ಗೋವುಗಳೊಂದಿಗೆ ಸಂಭ್ರಮಿಸಿದ ರೈತರು!
ಕಾರವಾರ, ನವೆಂಬರ್ 29: ಸಂಸ್ಕೃತಿ, ಪರಂಪರೆ, ಆಚರಣೆಗಳನ್ನು ಬೆಳಕಿಗೆ ತರುವ ದೀಪಾವಳಿ ಹಬ್ಬ ಹಿಂದೂಗಳ ಪಾಲಿಗೆ ದೊಡ್ಡ ಹಬ್ಬ. ಅದರಲ್ಲಿಯೂ ರೈತರ ಒಡನಾಡಿ ಗೋವುಗಳಿಗೆ ಪೂಜೆ ಸಲ್ಲಿಸಲು ಸಿಗುವ ಹಬ್ಬವನ್ನು ರೈತರು ವಿಶೇಷವಾಗಿ ಆಚರಣೆ ಮಾಡುತ್ತಾರೆ.
ಅದರಂತೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗ್ರಾಮವೊಂದರಲ್ಲಿ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿದ್ದ ದೀಪಾವಳಿ ಹಬ್ಬವನ್ನು ಗೋವುಗಳೊಂದಿಗೆ ವಿಶಿಷ್ಟವಾಗಿ ಆಚರಿಸಿದ್ದು ಈ ಕುರಿತು ಒಂದು ವಿಶೇಷ ಸುದ್ದಿ ಇಲ್ಲಿದೆ.

ಒಂದೆಡೆ ಕಾಲ್ಕಿತ್ತು ಓಡುತ್ತಿರೋ ಹೋರಿಗಳು . ಇನ್ನೊಂದೆಡೆ ಅವುಗಳನ್ನು ಹಿಡಿಯಲು ಹರಸಾಹಸ ಪಡುತ್ತಿರೋ ಯುವಕರು, ಮತ್ತೊಂದೆಡೆ ಈ ಸಾಹಸಮಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳುತ್ತಿರುವ ಸಾರ್ವಜನಿಕರು. ಇದು ರೈತರ ಪಾಲಿನ ದೊಡ್ಡಹಬ್ಬ ಎಂದೇ ಕರೆಸಿಕೊಳ್ಳುವ ದೀಪಾವಳಿ ಸಂಭ್ರಮವಾಗಿದೆ.
ಸಿದ್ದಾಪುರ ತಾಲೂಕಿನ ದೊಡ್ಮನೆ ವ್ಯಾಪ್ತಿಯ ಉಡಳ್ಳಿ-ಬೀಳೆಗೊಡ ಗ್ರಾಮಗಳ ಜನರ ದೀಪಾವಳಿ ಸಂಭ್ರಮ ಇದು. ಅನಿವಾರ್ಯ ಕಾರಣಗಳಿಂದ ನಿಂತು ಹೋಗಿದ್ದ ದೀಪಾವಳಿ ಹಬ್ಬವನ್ನು ಈ ಹುಣ್ಣಿಮೆ ಪಾಡ್ಯಕ್ಕೆ ಕಳೆದ ಮೂರು ದಿನಗಳಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಬಲೀಂದ್ರನನ್ನು ತಂದು ವಿಶೇಷ ಪೂಜೆ ಸಲಿಸಿದ ರೈತರು ಬಲಿಪಾಡ ದಿನವಾದ ಇಂದು ಗೋವುಗಳಿಗೆ ಸಿಂಗಾರ, ರೊಟ್ಟಿ , ಪತ್ತೆ ತೆನ್ನೆ ಎಲೆಗಳಿಂದ ಮಾಡಿದ ದಂಡೆಗಳನ್ನು ಕಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವುಗಳನ್ನು ಚೌಲೂ, ಬಲೂನ್, ಬಾಸಿಂಗ ಸೇರಿದಂತೆ ಬಣ್ಣದ ಕಾಗದ ಹೂವುಗಳಿಂದ ಶೃಂಗರಿಸಿ ಬೆದರಿಸಲಾಯಿತು. ಈ ವೇಳೆ ಹೋರಿಗಳ ಓಟ ಹಾರಾಟ ನೆರೆದವರ ಆಕರ್ಷಣೆಗೆ ಕಾರಣವಾಯಿತು.

ಇನ್ನು ಹುಣ್ಣಿಮೆ ಪಾಡ್ಯದ ವೇಳೆ ಆಚರಣೆ ಮಾಡುವ ದೀಪಾವಳಿ ಹಬ್ಬವನ್ನು ಊರಿನ ಜನರು ಒಟ್ಟುಗೂಡಿ ವಿಜೃಂಭಣೆಯಿಂದ ಆಚರಿಸಿದರು. ಅದರಲ್ಲಿಯೂ ನಮ್ಮೊಂದಿಗೆ ದುಡಿದು ನಮ್ಮ ಮನೆಗೆ ಆಧಾರವಾಗಿರುವ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷವಾಗಿ ಸಿದ್ದಾಪುರದ ಬಾನ್ಕುಳಿ ಮಠ ಹಾಗೂ ಸುತ್ತಮುತ್ತಲಿನ ಸಂಬಂಧಿಕರ ಮನೆಗಳಿಂದ ಹೋರಿಗಳನ್ನು ತಂದು ಅವುಗಳನ್ನು ಶೃಂಗರಿಸಿ ಮೆರವಣಿಗೆ ನಡೆಸಲಾಯಿತು. ಹೀಗೆ ಸದಾ ನಮ್ಮ ಒಡನಾಡಿಯಾಗಿರುವ ಗೋವುಗಳಿಗೆ ಈ ದಿನದಂದು ವಿಶೇಷ ಪೂಜೆ ಸಲ್ಲಿಸಿದ ಸಂತೃಪ್ತಿ ನಮ್ಮದಾಗಿದೆ ಎಂದು ಸ್ಥಳೀಯರು ಸಂಭ್ರಮಿಸಿದ್ದಾರೆ.
ಇನ್ನು ಗ್ರಾಮದಲ್ಲಿ ಬಹುತೇಕರು ಕೃಷಿಯನ್ನೇ ನಂಬಿ ಬದುಕುತ್ತಿದ್ದವರು. ಸದಾ ಗೋವುಗಳೊಂದಿಗೆ ಒಡನಾಟ ಹೊಂದಿರುವ ಕಾರಣ ನಿಂತು ಹೋಗಿದ್ದ ದೀಪಾವಳಿಯನ್ನು ಈ ಬಾರಿ ಹುಣ್ಣಿಮೆಗೆ ವಿಶೇಷವಾಗಿ ಆಚರಿಸಲಾಯಿತು. ಗೋವುಗಳನ್ನು ಅಲಂಕರಿಸಿ ಬೆದರಿಸುವ ಮೂಲಕ ಸಂಭ್ರಮಿಸುವುದಲ್ಲದೆ ನೆರೆದವರ ಆಕರ್ಷಣೆಗೂ ಕಾರಣವಾಯಿತು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications