Get Updates
Get notified of breaking news, exclusive insights, and must-see stories!

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಕಾರವಾರ, ಮೇ 14: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೇ 15 ಹಾಗೂ 16 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದೆ.

ಉತ್ತರ ಕನ್ನಡ ಜಿಲ್ಲೆಯ ಎಲ್ಲ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬಾರದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಗಾಳಿ, ಮಳೆ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು.

Karwar: Depression Alert In Arabian Sea; Notice For Preventive Action

Recommended Video

      Covidನಿಂದ ಗುಣಮುಖರಾದವರು ತಕ್ಷಣ ಲಸಿಕೆ ತೆಗೆದುಕೊಳ್ಳಬೇಡಿ | Oneindia Kannada

      ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+