ಕೈಗಾ ಸುತ್ತಮುತ್ತ ಕ್ಯಾನ್ಸರ್ : ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲವೆಂದ ಜಿಲ್ಲಾಧಿಕಾರಿ
ಕಾರವಾರ, ಜೂನ್.24: ಕೈಗಾ ಸುತ್ತಮುತ್ತ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಇತ್ತೀಚೆಗೆ ಸುದ್ದಿ ಬಿತ್ತರಿಸಲಾಗಿತ್ತು. ಇದರಿಂದ ಕೈಗಾದ ಸುತ್ತಲಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.
ಈ ಹಿನ್ನಲೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಶೇ. 200ರಷ್ಟು ಕ್ಯಾನ್ಸರ್ ಪ್ರಕರಣಗಳು ಕೈಗಾ ಸುತ್ತಮುತ್ತ ಹೆಚ್ಚಾಗಿವೆ ಎಂಬ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈನ ಟಾಟಾ ಮೆಮೋರಿಯಲ್ ಸಂಸ್ಥೆ ಸಿದ್ಧಪಡಿಸಿರುವ 'ಕಾರವಾರ ಕ್ಯಾನ್ಸರ್ ರಿಜಿಸ್ಟ್ರಿ 2010-13'ರ ವರದಿಯನ್ನು ತಪ್ಪಾಗಿ ಗ್ರಹಿಸಿ ವರದಿ ಮಾಡಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.

ಟಾಟಾ ಮೆಮೊರಿಯಲ್ ಸಂಸ್ಥೆಯ ಮುಖ್ಯಸ್ಥ ಡಾ.ಗಣೇಶ್ ಬಿ. ಅವರು ತಮ್ಮ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಎಲ್ಲಿಯೂ ಶೇ 200ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ, ಅಥವಾ ಕೈಗಾ ಸುತ್ತಮುತ್ತ ಗ್ರಾಮಗಳಲ್ಲೇ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಟಾ ಮೆಮೊರಿಯಲ್ ಸೆಂಟರ್ 2010ರಿಂದ 2013ರವರೆಗೆ ಮೊದಲ ಹಂತದಲ್ಲಿ ಕಾರವಾರ ತಾಲೂಕಿನಲ್ಲಿ ಕ್ಯಾನ್ಸರ್ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿತ್ತು.

ಇದು ಕ್ಯಾನ್ಸರ್ ಪ್ರಕರಣ ಪತ್ತೆಯಾದ ಆಸ್ಪತ್ರೆ ಮತ್ತು ರೋಗದ ಲಕ್ಷಣ ಇರುವ ರೋಗಿಗಳ ಆಯ್ದ ಪ್ರಕರಣಗಳಿಂದ ಸಂಗ್ರಹಿಸಿದ ಪ್ರಾಥಮಿಕ ಹಂತದ ಮಾಹಿತಿಯಾಗಿರುತ್ತದೆ. ಈ ಅಧ್ಯಯನ ವರದಿಯಲ್ಲಿ 316 ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಇದೇ ಸಂಸ್ಥೆ ಎರಡನೇ ಹಂತದಲ್ಲಿ ಅಂಕೋಲಾ, ಯಲ್ಲಾಪುರ, ಜೊಯಿಡಾ ಹಾಗೂ ಕಾರವಾರ ತಾಲೂಕಿನಲ್ಲಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಆ ವರದಿ ನಂತರವೇ ಈ ಹಿಂದಿಗಿಂತ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆಯೇ ಅಥವಾ ಕಡಿಮೆಯಾಗಿವೆ ಅಥವಾ ಯಾವ ಕಾರಣಕ್ಕೆ ಕ್ಯಾನ್ಸರ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂಬ ಅಧ್ಯಯನ ವರದಿ ನೀಡಲಿದೆ.

ಅಲ್ಲದೆ ಕೈಗಾದಿಂದ ಹೊರ ಸೂಸುವ ವಿಕಿರಣಗಳಿಂದಾಗಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುವ ಬಗ್ಗೆಯೂ ಅಧ್ಯಯನ ವರದಿ ಹೇಳಿಲ್ಲ. ಈ ಸಂಬಂಧ ವರದಿಯೇ ಹೇಳಿರುವಂತೆ ವಿವಿಧ ರಾಜ್ಯ ಮತ್ತು ದೇಶಗಳಲ್ಲಿ ಕ್ಯಾನ್ಸರ್ ಪ್ರಕರಣ ಪ್ರಮಾಣವನ್ನು ಹೋಲಿಸಿದಾಗ ಕಾರವಾರ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ. ಅತ್ಯಂತ ಕಡಿಮೆ ಪ್ರಕರಣಗಳು ಇಲ್ಲಿವೆ ಎಂಬುದು ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟಾಟಾ ಮೆಮೋರಿಯಲ್ ಸೆಂಟರ್ ವೈದ್ಯಕೀಯ ಪ್ರತಿನಿಧಿ ಡಾ.ಚೇತನ ಮತ್ತಿತರರು ಇದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications