ಕೈಗಾ ಸುತ್ತಮುತ್ತ ಕ್ಯಾನ್ಸರ್ : ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲವೆಂದ ಜಿಲ್ಲಾಧಿಕಾರಿ
ಕಾರವಾರ, ಜೂನ್.24: ಕೈಗಾ ಸುತ್ತಮುತ್ತ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಇತ್ತೀಚೆಗೆ ಸುದ್ದಿ ಬಿತ್ತರಿಸಲಾಗಿತ್ತು. ಇದರಿಂದ ಕೈಗಾದ ಸುತ್ತಲಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.
ಈ ಹಿನ್ನಲೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಶೇ. 200ರಷ್ಟು ಕ್ಯಾನ್ಸರ್ ಪ್ರಕರಣಗಳು ಕೈಗಾ ಸುತ್ತಮುತ್ತ ಹೆಚ್ಚಾಗಿವೆ ಎಂಬ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈನ ಟಾಟಾ ಮೆಮೋರಿಯಲ್ ಸಂಸ್ಥೆ ಸಿದ್ಧಪಡಿಸಿರುವ 'ಕಾರವಾರ ಕ್ಯಾನ್ಸರ್ ರಿಜಿಸ್ಟ್ರಿ 2010-13'ರ ವರದಿಯನ್ನು ತಪ್ಪಾಗಿ ಗ್ರಹಿಸಿ ವರದಿ ಮಾಡಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.

ಟಾಟಾ ಮೆಮೊರಿಯಲ್ ಸಂಸ್ಥೆಯ ಮುಖ್ಯಸ್ಥ ಡಾ.ಗಣೇಶ್ ಬಿ. ಅವರು ತಮ್ಮ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಎಲ್ಲಿಯೂ ಶೇ 200ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ, ಅಥವಾ ಕೈಗಾ ಸುತ್ತಮುತ್ತ ಗ್ರಾಮಗಳಲ್ಲೇ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ ಎಂದಾಗಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಟಾ ಮೆಮೊರಿಯಲ್ ಸೆಂಟರ್ 2010ರಿಂದ 2013ರವರೆಗೆ ಮೊದಲ ಹಂತದಲ್ಲಿ ಕಾರವಾರ ತಾಲೂಕಿನಲ್ಲಿ ಕ್ಯಾನ್ಸರ್ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿತ್ತು.

ಇದು ಕ್ಯಾನ್ಸರ್ ಪ್ರಕರಣ ಪತ್ತೆಯಾದ ಆಸ್ಪತ್ರೆ ಮತ್ತು ರೋಗದ ಲಕ್ಷಣ ಇರುವ ರೋಗಿಗಳ ಆಯ್ದ ಪ್ರಕರಣಗಳಿಂದ ಸಂಗ್ರಹಿಸಿದ ಪ್ರಾಥಮಿಕ ಹಂತದ ಮಾಹಿತಿಯಾಗಿರುತ್ತದೆ. ಈ ಅಧ್ಯಯನ ವರದಿಯಲ್ಲಿ 316 ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಇದೇ ಸಂಸ್ಥೆ ಎರಡನೇ ಹಂತದಲ್ಲಿ ಅಂಕೋಲಾ, ಯಲ್ಲಾಪುರ, ಜೊಯಿಡಾ ಹಾಗೂ ಕಾರವಾರ ತಾಲೂಕಿನಲ್ಲಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಆ ವರದಿ ನಂತರವೇ ಈ ಹಿಂದಿಗಿಂತ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆಯೇ ಅಥವಾ ಕಡಿಮೆಯಾಗಿವೆ ಅಥವಾ ಯಾವ ಕಾರಣಕ್ಕೆ ಕ್ಯಾನ್ಸರ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂಬ ಅಧ್ಯಯನ ವರದಿ ನೀಡಲಿದೆ.

ಅಲ್ಲದೆ ಕೈಗಾದಿಂದ ಹೊರ ಸೂಸುವ ವಿಕಿರಣಗಳಿಂದಾಗಿ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುವ ಬಗ್ಗೆಯೂ ಅಧ್ಯಯನ ವರದಿ ಹೇಳಿಲ್ಲ. ಈ ಸಂಬಂಧ ವರದಿಯೇ ಹೇಳಿರುವಂತೆ ವಿವಿಧ ರಾಜ್ಯ ಮತ್ತು ದೇಶಗಳಲ್ಲಿ ಕ್ಯಾನ್ಸರ್ ಪ್ರಕರಣ ಪ್ರಮಾಣವನ್ನು ಹೋಲಿಸಿದಾಗ ಕಾರವಾರ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ. ಅತ್ಯಂತ ಕಡಿಮೆ ಪ್ರಕರಣಗಳು ಇಲ್ಲಿವೆ ಎಂಬುದು ಸ್ಪಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟಾಟಾ ಮೆಮೋರಿಯಲ್ ಸೆಂಟರ್ ವೈದ್ಯಕೀಯ ಪ್ರತಿನಿಧಿ ಡಾ.ಚೇತನ ಮತ್ತಿತರರು ಇದ್ದರು.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications