'ಶಾಸಕರು ಮುಂಬೈಗೆ ತೆರಳುವುದು ಸಾಮಾನ್ಯ, ಬೇರೆ ಅರ್ಥ ಕಲ್ಪಿಸಬೇಡಿ'
ಕಾರವಾರ, ಸೆಪ್ಟೆಂಬರ್.24: ಶಾಸಕರುಗಳು ಪಕ್ಷಾಂತರ ಮಾಡುತ್ತಿದ್ದಾರೆ ಎನ್ನುವುದು ಮಾಧ್ಯಮಗಳ ಸೃಷ್ಟಿ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.
ಕಾರವಾರದಲ್ಲಿ ಇಂದು ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸರಕಾರ ಸುಭದ್ರವಾಗಿದೆ. ಸ್ವತಃ ರಮೇಶ ಜಾರಕಿಹೊಳಿ ಕೂಡ ಸರಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ ಎಂದು ಹೇಳಿದ್ದಾರೆ. ಈ ವಿಷಯಕ್ಕೆ ಅನಾವಶ್ಯಕವಾಗಿ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ.
ಇನ್ನು ಶಾಸಕರುಗಳು ಮುಂಬೈ ಅಥವಾ ಇನ್ನಿತರ ಭಾಗಗಳಿಗೆ ತೆರಳುವುದು ಸಾಮಾನ್ಯ. ಆದರೆ ಅದಕ್ಕೆ ಇನ್ನಿತರ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ ಸಚಿವರಾಗುವುದಾದರೆ ಆಗಲಿ. ಅವರು ಇನ್ನು ಯಂಗ್. ಚೈತನ್ಯದಿಂದ ಕೆಲಸ ಮಾಡುತ್ತಿದ್ದಾರೆ. ನಾನು ಮಂತ್ರಿ ಸ್ಥಾನ ಬಿಡಲು ಸಿದ್ಧನಿದ್ದೇನೆ. ಇದುವರೆಗೆ ಯಾರಿಗೂ ಸಚಿವರನ್ನಾಗಿ ಮಾಡಿ ಎಂದು ಹೇಳಿಲ್ಲ.
ಯಾವುದನ್ನು ಗಟ್ಟಿ ಹಿಡಿದುಕೊಂಡಿಲ್ಲ. ಆದರೆ ಶಿವರಾಂ ಹೆಬ್ಬಾರ ಈ ಬಗ್ಗೆ ಪ್ರಯತ್ನ ನಡೆಸಲಿ ಎಂದು ಪ್ರಶ್ನೆಯೊಂದಕ್ಕೆ ನಗುತ್ತಲೇ ಉತ್ತರಿಸಿದ್ದಾರೆ.
ಸ್ವಚ್ಛತಾ ಸಪ್ತಾಹಕ್ಕೆ ಚಾಲನೆ
ಇದಕ್ಕೂ ಮೊದಲು ತಾಲೂಕಿನ ತೋಡೂರಿನಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ವಚ್ಛತಾ ಹೀ ಸೇವಾ ಹಾಗೂ ಸ್ವಚ್ಛತಾ ಸಪ್ತಾಹಕ್ಕೆ ದೇಶಪಾಂಡೆ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಆರೋಗ್ಯ ಮತ್ತು ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ. ಸ್ವಚ್ಛತಾ ಅಭಿಯಾನ ಗಾಂಧೀಜಿ ಅವರ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಸ್ವಚ್ಛತೆ ಬಗ್ಗೆ ಸಂತೃಪ್ತಿ ಇಲ್ಲ. ಆದ್ದರಿಂದ ಪ್ರತಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳು, ಮುಖಂಡರು, ಸಂಘ ಸಂಸ್ಥೆಗಳು ಮುಂದೆ ಬರಬೇಕು.
ಇದು ಸರಕಾರಿ ಕೆಲಸವಾದರೆ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಜಾಗದಲ್ಲಿ ಮೊದಲು ಸ್ವಚ್ಛಗೊಳಿಸಿ. ಭವ್ಯ ರಾಷ್ಟ್ರ ನಿರ್ಮಿಸಲು ಸಹಕಾರ ನೀಡಬೇಕು ಎಂದರು.
ಸ್ವಚ್ಛ ಭಾರತ್ ಮಿಷನ್ ಸಹಯೋಗದಲ್ಲಿ ಸೆ.24 ರಿಂದ ಅ.2 ರವರೆಗೆ ಮೊದಲ ಹಂತದ ಸ್ವಚ್ಛತಾ ಸಪ್ತಾಹದಲ್ಲಿ ಸಚ್ಛಾಗೃಹಿಯೋ ಕೆ ಸ್ವಚ್ಛಾಗ್ರಹಿ ಏಕ್ ಸೇ ಅನೇಕ್ ದಿವಸವನ್ನು ಸೆ. 25 ರಂದು ಎಲ್ಲಾ ಗ್ರಾ.ಪಂನಲ್ಲಿ ಆಚರಿಸಲಾಗುತ್ತಿದೆ.
ಬಳಿಕ ಸ್ವಚ್ಛತೆ ಬಗ್ಗೆ ಬೀದಿನಾಟಕ, ಶಾಲಾ, ಕಾಲೇಜು ಆಸ್ಪತ್ರೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಶ್ರಮದಾನ, ಗಾಂಧಿ ಜಯಂತಿಯಂದು ಸ್ವಚ್ಛತಾ ಶಪತ್ ಕಾರ್ಯಕ್ರಮ ನಡೆಯಲಿದೆ.
ಇನ್ನು ಅ. 3 ರಿಂದ ಅ.8ರವರೆಗೆ ಎರಡನೇ ಹಂತದ ಸ್ವಚ್ಛತಾ ಸಪ್ತಾಹ ನಡೆಯಲಿದ್ದು, ಎಲ್ಲ ತಾಲೂಕು ಪಂಚಾಯಿತಿ ಕೇಂದ್ರಗಳಲ್ಲಿ ಸ್ವಚ್ಛತಾ ರಾಲಿ ನಡೆಯಲಿದೆ. ಅಲ್ಲದೆ ಸ್ವಸಹಾಯ ಗುಂಪುಗಳನ್ನು ಒಗ್ಗೂಡಿಸಿಕೊಂಡು ತ್ಯಾಜ್ಯಗಳ ವಿಲೇವಾರಿ, ಪ್ರಾಥಮಿಕ ರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಂದ ತಪಾಸಣಾ ಶಿಬಿರ, ಗ್ರಾ. ಪಂ ವ್ಯಾಪ್ತಿಯ ಕುಡಿಯುವ ನೀರಿನ ಟ್ಯಾಂಕ್ ಗಳ ಹೀಗೆ ಹಲವು ಕಾರ್ಯಕ್ರಮಗಳನ್ನು ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications