ಹಳಿಯಾಳದಲ್ಲಿ ಮೆಕ್ಕಾ-ಮದೀನಾದಿಂದ ವಾಪಸ್ಸಾದ 14 ಮಂದಿಗೆ ಗೃಹಬಂಧನ
ಕಾರವಾರ, ಮಾರ್ಚ್ 14: ಹಳಿಯಾಳದಲ್ಲಿ ಮೆಕ್ಕಾ ಮದೀನಾಗೆ ಹೋಗಿ ಬಂದವರಿಗೆ ಕೊರೊನಾ ವೈರಸ್ ತಗುಲಿದೆಯೇ ಎಂಬ ಬಗ್ಗೆ ಶುಕ್ರವಾರ ಪರೀಕ್ಷೆ ಮಾಡಲಾಗಿದೆ.
ಹಳಿಯಾಳದಿಂದ ಮೆಕ್ಕಾಕ್ಕೆ ತೆರಳಿದ್ದ 14 ಜನರು ಫೆ.27, 28ರಂದು ಹಳಿಯಾಳಕ್ಕೆ ವಾಪಸ್ ಬಂದಿದ್ದಾರೆ. ಇವರು ಹಳಿಯಾಳಕ್ಕೆ ಬಂದು 14 ದಿನಗಳು ಕಳೆದಿವೆ. ವಿಶ್ವದೆಲ್ಲೆಡೆ ಕೊರೊನಾ ವೈರಸ್ ವ್ಯಾಪಿಸಿದ್ದು, ಮೆಕ್ಕಾ- ಮದೀನಾದ ಮೇಲೂ ಕೊರೊನಾ ವೈರಸ್ ಪರಿಣಾಮ ಬೀರಿದೆ.
ಹೀಗಾಗಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರ ನಿರ್ದೇಶನದ ಮೇರೆಗೆ ಹಳಿಯಾಳದ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಈ 14 ಜನರ ಮನೆಗಳಿಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಇವರಲ್ಲಿ ರೋಗದ ಯಾವುದೇ ಗುಣಲಕ್ಷಣಗಳು ಕಂಡುಬಂದಿಲ್ಲ ಎಂದು ಹಳಿಯಾಳ ತಾಲೂಕು ವೈದ್ಯಾಧಿಕಾರಿ ಡಾ.ರಮೇಶ ಕದಂ ತಿಳಿಸಿದ್ದಾರೆ.

ರೋಗ ಪರೀಕ್ಷೆಯ ಬಳಿಕ ಇವರನ್ನು ಹೊರಗೆ ಹೋಗದಂತೆ, ಮನೆಯಲ್ಲಿಯೇ ಸ್ವಲ್ಪ ದಿನ ಕಳೆಯುವಂತೆ, ಸ್ವಚ್ಛತೆ ಕಾಪಾಡುವಂತೆ, ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ರಮೇಶ ಕದಂ ತಿಳಿಸಿದ್ದಾರೆ.
ವಿದೇಶದಿಂದ ಇತ್ತೀಚೆಗೆ ವಾಪಸ್ ಬಂದಿರುವ, ಜಿಲ್ಲೆಯಲ್ಲಿರುವ ಎಲ್ಲ ವ್ಯಕ್ತಿಗಳನ್ನು ಅವರ ಮನೆಯಲ್ಲಿಯೇ ಇಟ್ಟು, ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರೀಶಕುಮಾರ್ ತಿಳಿಸಿದ್ದಾರೆ.
-
ಬಿಸಿಲಿನ ಶಾಖದಿಂದ ಮುಕ್ತಿ ಪಡೆಯಲು ರಾಗಿ, ಬಾರ್ಲಿ ಮಾಲ್ಟ್ಗಳೇ ರಾಮಬಾಣ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications