ಜಿಲ್ಲಾ ಮಟ್ಟದ ಕಚೇರಿಗಳು ಶಿರಸಿಗೆ ಶಿಫ್ಟ್; ಹೋರಾಟದ ಎಚ್ಚರಿಕೆ
ಕಾರವಾರ, ಅಕ್ಟೋಬರ್ 17; " ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗಳನ್ನ ಜಿಲ್ಲೆಯ ಘಟ್ಟದ ಮೇಲಿನ ಬೇರೆ ಯಾವುದೇ ತಾಲೂಕಿಗೆ ತೆಗೆದುಕೊಂಡು ಹೋದರೆ ಕಾರವಾರದವರ ಜೊತೆ ಹೋರಾಟ ಮಾಡುವುದು ಅನಿವಾರ್ಯ" ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನು ಯಲ್ಲಾಪುರಕ್ಕೆ ವರ್ಗಾವಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯತ್ನ ನಡೆಸಿದ್ದಾರೆ ಎನ್ನುವ ವಿಷಯಕ್ಕೆ ಮಾಜಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
"ಘಟ್ಟದ ಮೇಲೆ ಯಾವುದೇ ಕಚೇರಿ ತೆಗೆದುಕೊಂಡು ಹೋಗುವುದಕ್ಕೆ ತನ್ನ ಅಭ್ಯಂತವಿಲ್ಲ. ಆದರೆ ಪ್ರತ್ಯೇಕ ಜಿಲ್ಲೆಯನ್ನು ಮಾಡಿಕೊಂಡು ತೆಗೆದುಕೊಂಡು ಹೋಗಲಿ. ಅದನ್ನ ಬಿಟ್ಟು ಕಾರವಾರದಲ್ಲಿರುವ ಕಚೇರಿ ತೆಗೆದುಕೊಂಡು ಹೋಗುವುದು ಖಂಡನೀಯ" ಎಂದು ತಿಳಿಸಿದ್ದಾರೆ.

'ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ಸಾಕಷ್ಟು ದೊಡ್ಡದಿದೆ. ಜಿಲ್ಲೆಯನ್ನು ಪ್ರತ್ಯೇಕಿಸಿ ಶಿರಸಿ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವುದು ನನ್ನ ಹಿಂದಿನ ಬೇಡಿಕೆ. ತಾನು ಸಚಿವನಾಗಿದ್ದ ವೇಳೆಯಲ್ಲೂ ಇದನ್ನೇ ಹೇಳಿದ್ದೆ. ಈಗಲೂ ಶಿರಸಿ ಪ್ರತ್ಯೇಕ ಜಿಲ್ಲೆಗೆ ತನ್ನ ಬೆಂಬಲವಿದೆ. ಪ್ರತ್ಯೇಕ ಜಿಲ್ಲೆ ಮಾಡಿದರೆ ಅಲ್ಲಿ ಬೇಕಾದ ಕಚೇರಿ ಮಾಡಿಕೊಳ್ಳಲಿ" ಎಂದು ಹೇಳಿದರು.
"ಈಗಾಗಲೇ ಜಿಲ್ಲಾ ಕೇಂದ್ರದಲ್ಲಿದ್ದ ಹಲವು ಕಚೇರಿಗಳಲ್ಲಿ ಘಟ್ಟದ ಮೇಲಿನ ತಾಲೂಕಿಗೆ ತೆಗೆದುಕೊಂಡು ಹೋಗಿದ್ದಾರೆ. ಕಾರವಾರ ಸಾಕಷ್ಟು ಬೆಳೆಯುತ್ತಿದ್ದು ಜಿಲ್ಲೆಯಲ್ಲಿ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕರಾವಳಿ ಭಾಗದಲ್ಲಿಯೇ ಹಾದು ಹೋಗಿದೆ. ಮುಂದಿನ ದಿನದಲ್ಲಿ ರಸ್ತೆ ನಿರ್ವಹಣೆ ಸೇರಿದಂತೆ ಹಲವು ಕಾರ್ಯಕ್ಕೆ ಹೆದ್ದಾರಿ ಪ್ರಾಧಿಕಾರ ಕಚೇರಿ ಕಾರವಾರದಲ್ಲೇ ಇರಬೇಕು" ಎಂದರು.
"ಕಚೇರಿಯನ್ನು ಯಲ್ಲಾಪುರಕ್ಕೆ ತೆಗೆದುಕೊಂಡು ಹೋಗುವ ಕಾರ್ಯಕ್ಕೆ ಶಿವರಾಮ್ ಹೆಬ್ಬಾರ್ ಮುಂದಾಗಬಾರದು. ಸಚಿವ ಹೆಬ್ಬಾರ್ಗೆ ಅಷ್ಟೋಂದು ಅಗತ್ಯವಿದ್ದರೇ ಪ್ರತ್ಯೇಕ ಜಿಲ್ಲೆ ಮಾಡಿಸಿ ಕಚೇರಿಯನ್ನು ಸ್ಥಳಾಂತರ ಮಾಡಲಿ. ಒಂದೊಮ್ಮೆ ಕಾರವಾರದಲ್ಲಿರುವ ಯಾವುದೇ ಜಿಲ್ಲಾ ಮಟ್ಟದ ಕಚೇರಿಯನ್ನ ಘಟ್ಟದ ಮೇಲಿನ ತಾಲೂಕಿಗೆ ತೆಗೆದುಕೊಂಡು ಹೋಗಲು ಮುಂದಾದರೆ ಮುಂದಿನ ದಿನದಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ" ಎಂದು ಅಸ್ನೋಟಿಕರ್ ಎಚ್ಚರಿಕೆ ನೀಡಿದರು.
ಹಣ, ರಾಜಕೀಯಕ್ಕಿಂತ ತಾಯಿ ಮುಖ್ಯ; "ತನ್ನ ತಾಯಿ ಅನಾರೋಗ್ಯದಲ್ಲಿದ್ದು ಅವರು ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ರಾಜಕೀಯ ನಿರ್ಣಯ ತೆಗೆದುಕೊಳ್ಳುವುದಿಲ್ಲ" ಎಂದು ಆನಂದ್ ಅಸ್ನೋಟಿಕರ್ ಸ್ಪಷ್ಟಪಡಿಸಿದರು.
"ತಾಯಿ ಅನಾರೋಗ್ಯದಲ್ಲಿದ್ದಾಗ ರಾಜಕೀಯ ಮಾಡೋದು ಸರಿಯಾದುದ್ದಲ್ಲ. ಹಣವನ್ನು ಯಾವಾಗ ಬೇಕಾದರು ಸಂಪಾದಿಸಬಹುದು. ಹಾಗೇ ತನಗೆ ಇನ್ನೂ ಸಾಕಷ್ಟು ವಯಸ್ಸಿದ್ದು ರಾಜಕೀಯವನ್ನು ಸಹ ಯಾವಾಗ ಬೇಕಾದರು ಮಾಡಬಹುದು. ಆದರೆ ತಾಯಿ ಕಳೆದುಕೊಂಡರೆ ಮತ್ತೆ ಸಿಗುವುದಿಲ್ಲ. ಅವರನ್ನು ಆರೈಕೆ ಮಾಡುವ ಕಾರ್ಯವನ್ನು ಮಾಡುತ್ತಿದ್ದು ಅವರು ಸಂಪೂರ್ಣ ಗುಣಮುಖರಾದ ಮೇಲೆ ರಾಜಕೀಯದ ನಿರ್ಣಯ ತೆಗೆದುಕೊಳ್ಳುತ್ತೇನೆ" ಎಂದರು.
ಪಕ್ಷಾತೀತ ಹೋರಾಟ ಮಾಡಬೇಕು; "ಹಾಲಕ್ಕಿ ಸಮುದಾಯದವರನ್ನು ಪರಿಶಿಷ್ಟ ಪಂಗಡ ಸೇರಿಸಲು ಪಕ್ಷಾತೀತವಾಗಿ ಹೋರಾಟ ಮಾಡುವುದು ಅನಿವಾರ್ಯ. ಇದಕ್ಕೆ ತನ್ನ ಸಂಪೂರ್ಣ ಬೆಂಬಲವಿದೆ" ಎಂದು ಆನಂದ್ ಅಸ್ನೋಟಿಕರ್ ಹೇಳಿದರು.
"ನಾನು ಸಚಿವನಾಗಿದ್ದಾಗ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಅಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ಸಹಕಾರದಿಂದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಗುವಂತೆ ಮಾಡಿದೆ. ನಂತರ ದಿನದಲ್ಲಿ ಹಾಲಕ್ಕಿ ಸಮುದಾಯದ ಮುಖಂಡರು ಆಸಕ್ತಿ ತೋರಿಸದ ಪರಿಣಾಮ ಅಲ್ಲೇ ನಿಂತಿದೆ" ಎಂದರು.
"ಸದ್ಯ ಶಾಸಕಿ ರೂಪಾಲಿ ನಾಯ್ಕ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದು, ಮಾಜಿ ಶಾಸಕ ಸತೀಶ್ ಸೈಲ್ ಬೆಳಗಾವಿಯಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಈ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಯಲಿ. ತಾನು ಕೊನೆಯಲ್ಲಿದ್ದರು ಬೆಂಬಲ ಕೊಡುತ್ತೇನೆ. ಹಾಲಕ್ಕಿ ಸಮುದಾಯದವರಿಗೆ ನ್ಯಾಯ ಕೊಡಿಸುವ ಕಾರ್ಯ ಎಲ್ಲ ನಾಯಕರು ಮಾಡಬೇಕು" ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications