ಮಂದಿರ ದೇಣಿಗೆ ಭಕ್ತಿಗೆ ಸಂಬಂಧಿಸಿದ್ದು, ಪಕ್ಷ, ಧರ್ಮಕ್ಕಲ್ಲ: ದೇಶಪಾಂಡೆ
ಹಳಿಯಾಳ, ಫೆಬ್ರವರಿ 22: "ಪ್ರಸ್ತುತ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಮಂದಿರಕ್ಕೆ ಜನರು ದೇಣಿಗೆ ನೀಡುತ್ತಿರುವುದು ಯಾವುದೇ ಜಾತಿ, ಧರ್ಮ, ಪಕ್ಷ, ಸಿದ್ಧಾಂತ, ಬಣಗಳ ಕಾರಣಕ್ಕಲ್ಲ. ಬದಲಾಗಿ ಕೇವಲ ರಾಮನ ಮೇಲಿನ ಭಕ್ತಿಯ ಕಾರಣಕ್ಕೆ" ಎಂದು ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಆರ್. ವಿ. ದೇಶಪಾಂಡೆ ಹೇಳಿದರು.
ಭಾನುವಾರ ಹಳಿಯಾಳ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರನ ದೇಗುಲ ನಿರ್ಮಾಣಕ್ಕೆ ದೇಶದ ಉದ್ದಗಲಕ್ಕೂ ಜನ ಮುಕ್ತ ಮನಸ್ಸಿನಿಂದ ದೇಣಿಗೆ ನೀಡಿದ್ದಾರೆ ಮತ್ತು ನೀಡುತ್ತಿದ್ದಾರೆ. ಅದರ ಅರ್ಥ ದೇಣಿಗೆ ನೀಡಿದವರೆಲ್ಲರೂ ಆರ್ಎಸ್ಎಸ್ ಇಲ್ಲವೇ ಬಿಜೆಪಿಯವರು ಎಂದಾಗಲಿ, ಇಲ್ಲವೇ ಅವರೆಲ್ಲರೂ ಹಿಂದುತ್ವ ಪ್ರತಿಪಾದನೆಯ ಒಲವುಳ್ಳವರೂ ಎಂದಾಗಲಿ ಅಲ್ಲ" ಎಂದಿದ್ದಾರೆ.
"ಶ್ರೀ ರಾಮಚಂದ್ರ ಮನುಷ್ಯನಾಗಿ ಹುಟ್ಟಿದಾಗಲೂ ದೇವರಂತೆ ಬದುಕಿದ್ದರು. ಒಬ್ಬ ರಾಜನಾಗಿ ಎಲ್ಲಾ ಕಾಲ, ಸ್ಥಳ, ಸಂದರ್ಭದಲ್ಲಿಯೂ ಜಗತ್ತು ಮೆಚ್ಚಿ ಕೊಂಡಾಡುವಂತಹ ಆಳ್ವಿಕೆ ನೀಡಿದ್ದರು. ಅವರ ಬದುಕು ಮತ್ತು ಸೇವೆಗಳು ಸೂರ್ಯ ಚಂದ್ರರಿರುವವರೆಗೂ ಅಜರಾಮರವಾಗಿರುವಂತಹವು" ಎಂದರು.

"ಪುರಾಣ, ಪುಣ್ಯ ಕತೆಗಳಲ್ಲಿಯೂ ಅವರಿಗೆ ಪೂಜನೀಯವಾದ ಸ್ಥಾನ-ಮಾನಗಳು ದೊರೆತಿವೆ. ಆ ದೈವಾಂಶ ಸಂಭೂತನನ್ನು ದೇವರೆಂದು ಆರಾಧಿಸುವ ಜನ ಸಹಜವಾಗಿಯೇ ಎಲ್ಲಾ ಜಾತಿ, ಧರ್ಮ, ಪಕ್ಷ, ಸಿದ್ಧಾಂತ, ಬಣ, ದೇಶ ಭಾಷೆಗಳಲ್ಲೂ ಇದ್ದಾರೆ. ಹಾಗಾಗಿಯೇ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಮೂಲೆ ಮೂಲೆಯಿಂದಲೂ ಹಣ ಹೊಳೆಯಾಗಿ ಹರಿದು ಹೋಗುತ್ತಿದೆ" ಎಂದು ಆರ್. ವಿ. ದೇಶಪಾಂಡೆ ತಿಳಿಸಿದರು.
"ನಾನೂ ಕೂಡ ಪ್ರಭು ಶ್ರೀರಾಮ ಚಂದ್ರನ ಭಕ್ತ. ನಾನೂ ಕೂಡ ನನ್ನ ಕೈಲಾದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡುತ್ತೇನೆ. ಅದರ ಅರ್ಥ ನಾನೂ ಕೂಡ ಮಾನಸಿಕವಾಗಿ ಬಿಜೆಪಿ, ಇಲ್ಲವೇ ಸಂಘ ಪರಿವಾರವನ್ನು ಒಪ್ಪಿಕೊಂಡಿದ್ದೇನೆ ಎಂದಾಗಲಿ, ಇಲ್ಲವೇ ನಾನೂ ಕೂಡ ಹಿಂದುತ್ವದ ಪ್ರತಿಪಾದಕನಾಗಿದ್ದೇನೆ ಎಂದಾಗಲಿ ಅಲ್ಲ" ಎಂದು ಸ್ಪಷ್ಟಪಡಿಸಿದರು.
Recommended Video
"ವೈಯುಕ್ತಿಕವಾಗಿ ನಾನು ಜ್ಯಾತ್ಯಾತೀತ ನಿಲುವಿನ ಮನುಷ್ಯ. ಅದೇ ನಿಲುವಿನ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ಆದರೂ ದೇಣಿಗೆ ನೀಡಲಿದ್ದೇನೆ. ಈ ವಿಷಯದಲ್ಲಿ ನನ್ನ ಕತೆಗಿಂತ ದೇಣಿಗೆ ಕೊಟ್ಟ ಇತರೇ ಜನಗಳ ಕತೆ ಭಿನ್ನ ಎಂದು ನಾನು ಭಾವಿಸುವುದಿಲ್ಲ" ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications