ವದಂತಿಗಳಿಗೆ ಕಿವಿಕೊಡಬೇಡಿ, ವ್ಯಾಕ್ಸಿನ್ ಅತ್ಯಂತ ಸುರಕ್ಷಿತ: ಜಿಲ್ಲಾಧಿಕಾರಿ
ಕಾರವಾರ, ಫೆಬ್ರವರಿ 12: ವದಂತಿಗಳಿಗೆ ಕಿವಿಕೊಡಬೇಡಿ, ಕೊವಿಡ್ ವ್ಯಾಕ್ಸಿನ್ ಅತ್ಯಂತ ಸುರಕ್ಷಿತವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಕಾರವಾರ ಕ್ರಿಮ್ಸಗೆ ಭೇಟಿ ನೀಡಿ ಕೊವಿಡ್ ವ್ಯಾಕ್ಸಿನ್ ನೀಡುವ ಕಾರ್ಯವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಸ್ವತಃ ತಾವೇ ಕೊವಿಡ್ ವ್ಯಾಕ್ಸಿನ್ ಪಡೆದುಕೊಳ್ಳುವ ಮೂಲಕ ಯಾವುದೇ ವದಂತಿಗಳನ್ನು ನಂಬದೇ ಎಲ್ಲಾ ಮೂಂಚೂಣಿ ಕೋವಿಡ್ ವಾರಿಯರ್ಸ್ ಗಳು ಕೋವಿಡ್ ಲಸಿಕೆಯನ್ನು ಸ್ವಯಂ ಪ್ರೇರೇಪಿತರಾಗಿ ಪಡೆದುಕೊಳ್ಳಬೇಕು ಎಂಬ ಸಂದೇಶ ನೀಡಿದರು.
ಕೊರೊನಾ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಕೆಲ ಸಣ್ಣ ಪುಟ್ಟ ಸಾಮಾನ್ಯ ಅಡ್ಡ ಪರಿಣಾಮಗಳು ಕೆಲವರಲ್ಲಿ ಕಂಡು ಬಂದರೂ ಸಹ ಇದರಲ್ಲಿ ಯಾವುದೇ ಅಪಾಯವಿಲ್ಲ ಎಂದು ಅಲ್ಲಿ ಲಸಿಕೆ ಪಡೆದುಕೊಳ್ಳಲು ಬಂದಿದ್ದ ಸಿಬ್ಬಂದಿಗಳಿಗೆ ತಿಳಿಸಿದರು. ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಅವರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಕೂಡಾ ಲಸಿಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಅಲ್ಲಿ ಕ್ರಿಮ್ಸ್ ನಿರ್ದೇಶಕರು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಕ್ರಿಮ್ಸ್ ನ ಬಹುತೇಕ ವೈದ್ಯರು ಹಾಜರಿದ್ದರು. ಜಿಲ್ಲಾಧಿಕಾರಿಗಳು ಲಸಿಕೆ ಪಡೆದುಕೊಳ್ಳವುದನ್ನು ನೋಡಿ ಪ್ರೇರೇಪಿತರಾದ ಕ್ರಿಮ್ಸ್ ನ ನಿರ್ದೇಶಕರಾದ ಡಾ.ಗಜಾನನ ನಾಯಕ ರವರು ತಾವು ಈ ಹಿಂದೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಕೂಡಾ ಲಸಿಕೆಯನ್ನು ಸ್ಥಳದಲ್ಲಿ ಪಡೆದುಕೊಂಡಿರುವದು ವಿಶೇಷವಾಗಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications