Earthquake: ಶಿರಸಿ, ಕುಮಟಾ ಸೇರಿ ಹಲವೆಡೆ ಭೂಕಂಪನ; ಭಯಭೀತರಾದ ಜನ
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಶಿರಸಿಯ ಹಲವು ಕಡೆಗಳಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದ್ದು ಜನ ಭಯಭೀತರಾಗಿದ್ದಾರೆ. ಕುಮಟಾ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಹಳ್ಳಿ, ಕಸಗೆ ಮತ್ತು ಬಂಡಳದಲ್ಲಿ ಭೂಕಂಪನದ ಅನುಭವವಾಗಿದೆ. 3 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ್ದು ಅನೇಕ ಜನ ಒಂದು ಕ್ಷಣ ಕಂಗಾಲಾಗಿದ್ದಾರೆ.
ಕುಮಟಾ-ಶಿರಸಿ ನಡುವೆ ರಾಷ್ಟ್ರೀಯ ಹೆದ್ದಾರಿ ಕೆಲಸ ನಡೆಯುತ್ತಿದ್ದು, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಕೊರೆಯುತ್ತಿರುವುದರಿಂದ ಬಂಡೆ ಕಲ್ಲುಗಳನ್ನು ಸಿಡಿಸಿರಬಹುದು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು, ಆದರೆ ಇದು ಭೂಕಂಪನ ಎನ್ನುವುದು ಬಳಿಕ ತಿಳಿದುಬಂದಿದೆ.

ಹಿಂದೂ ಮಹಾಸಾಗರದಲ್ಲಿ 10 ಕಿಲೋಮೀಟರ್ ಆಳದ ರಿಡ್ಜ್ ಮಧ್ಯದಲ್ಲಿ ಭೂಕಂಪನವಾಗಿದ್ದು ಅದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಕಂಪನದ ಅನುಭವವಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ಕೈಗಾ ಅಣುವಿದ್ಯುತ್ ಘಟಕದ ಆತಂಕ
ಇದೇ ಪ್ರದೇಶದಲ್ಲಿ ಕೈಗಾ ಅಣುವಿದ್ಯುತ್ ಸ್ಥಾವರ ಇರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಪಶ್ಚಿಮಘಟ್ಟದಂತಹ ಸೂಕ್ಷ್ಮ ಪ್ರದೇಶದಲ್ಲಿ ಅಣುವಿದ್ಯುತ್ ಘಟಕ ಸ್ಥಾಪನೆ ಮಾಡಿರುವುದು ಅದರ ಜೊತೆಗೆ ಇತ್ತೀಚೆಗೆ ನಡೆಯುತ್ತಿರುವ ಭೂಕುಸಿತದಂತ ಘಟನೆಗಳು ಇಲ್ಲಿನ ಜನರನ್ನು ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿವೆ.
Uttara Kannada ghats specifically Sirsi and Siddapura felt earthquake or shake for 2-5seconds with big sound.
— Gurumoorti hegde (@guru3ti) December 1, 2024
Not sure abt the event but everyone felt it.
Scary times as we are carrying ‘KAIGA’ a cruse with us 😔 any damage, can’t imagine what will happen 🙃#Sirsi
ಗುರುಮೂರ್ತಿ ಹೆಗ್ಡೆ ಎನ್ನುವವರು ಎಕ್ಸ್ ಖಾತೆಯಲ್ಲಿ ಭೂಕಂಪನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. "ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ಧಾಪುರ ಭಾಗದ ಘಟ್ಟಪ್ರದೇಶಗಳಲ್ಲಿ ದೊಡ್ಡ ಶಬ್ದದೊಂದಿಗೆ 2 ರಿಂದ 5 ಸೆಕೆಂಡ್ಗಳ ಕಾಲ ಭೂಕಂಪನದ ಅನುಭವವಾಗಿದೆ. ಇದು ಏನು ಎಂದು ಯಾರಿಗೂ ಗೊತ್ತಿಲ್ಲವಾದರೂ, ಎಲ್ಲರಿಗೂ ಭೂಕಂಪನ ಅನುಭವಕ್ಕೆ ಬಂದಿದೆ. 'ಕೈಗಾ ಅಣುಸ್ಥಾವರ ಇಲ್ಲೇ ಇದ್ದು ಆತಂಕದಲ್ಲೇ ಬದುಕುವಂತಾಗಿದೆ, ಏನಾದರೂ ಅನಾಹುತ ಸಂಭವಿಸಿದರೆ ಮುಂದೇನಾಗುತ್ತದೆ ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications