ಯಾವುದೇ ಪಕ್ಷಕ್ಕೆ ಹೋದರೂ ಯಾವ ಜಾತಿ, ಎಷ್ಟು ದುಡ್ಡು ತರುತ್ತಿಯಾ ಎಂದು ಕೇಳುತ್ತಾರೆ: ಹೊರಟ್ಟಿ
ಕಾರವಾರ, ಜೂನ್ 6: ಎಲ್ಲಾ ರಾಜಕೀಯ ಪಕ್ಷಗಳಲ್ಲಿಯೂ ಜಾತಿ ಇದೆ. ಯಾವುದೇ ಪಕ್ಷಕ್ಕೆ ಹೋದರೂ ನಿಂದು ಯಾವ ಜಾತಿ, ಎಷ್ಟು ದುಡ್ಡು ತರುತ್ತಿಯಾ ಇದನ್ನೇ ಕೇಳುತ್ತಾರೆ ಎಂದು ಪಶ್ಚಿಮ ಪಧವೀದರ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹೇಳಿದರು.
ಕಾರವಾರದಲ್ಲಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾವ ರಾಜಕೀಯ ಪಕ್ಷಗಳು ಜಾತಿ ಬಿಟ್ಟಿಲ್ಲ. ಕೆಲವೊಬ್ಬರು ಕೋಮುವಾದಿ ಪಕ್ಷ ಎಂದು ಕರೆಯುತ್ತಾರೆ. ಆದರೆ ಎಲ್ಲಾ ಪಕ್ಷಗಳು ಜಾತಿ ಮಾಡುತ್ತವೆ ಎಂದ ಅವರು, 42 ವರ್ಷಗಳಿಂದ ಏನು ಕೆಲಸ ಮಾಡಲಿಲ್ಲ. ಶಿಕ್ಷಕರಿಗೆ ಹೆದರಿದಿ ಆರಿಸಿ ಬರುತ್ತಿದ್ದಾರೆ ಎಂದು ನನ್ನ ಬಗ್ಗೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಶಿಕ್ಷಕರನ್ನ ಯಾರಾದರೀ ಹೆದರಿಸಿ ಆರಸಿ ಬರುವುದಕ್ಕೆ ಆಗುತ್ತಾ? ಸುಮ್ಮನೆ ಟೀಕೆ ಮಾಡಬೇಕು ಎಂದು ಟೀಕೆ ಮಾಡುತ್ತಾರೆ ಅಷ್ಟೇ. ಎಥಿಕ್ಸ್ ಇಲ್ಲದೆ ಟೀಕೆ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಪಕ್ಷದ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆದರು. ಆಕಸ್ಮಿಕವಾಗಿ ಬಿಜೆಪಿಗೆ ಬಂದೆ. ಬೆಂಬಲಿಗರು, ಯುವ ಶಿಕ್ಷಕರು ಬಿಜೆಪಿಯಿಂದ ನಿಲ್ಲಿ ಎಂದು ಒತ್ತಾಯ ಮಾಡುತ್ತಿದ್ದರು, ಹೀಗಾಗಿ ಬಂದೆ. ಜೆಡಿಎಸ್ ನಲ್ಲಿದ್ದವರನ್ನು ನಾನು ಕರ್ಕೊಂಡು ಬಿಜೆಪಿಗೆ ಹೋದರೆ ಪಕ್ಷವನ್ನ ಮುಗಿಸಿದಂತಾಗುತ್ತದೆ. ಹೀಗಾಗಿ ನಾನು ಆ ಕೆಲಸಕ್ಕೆ ಹೋಗಿಲ್ಲ. ಬರುತ್ತೇವೆ ಎಂದವರಿಗೆ ಬೇಡ ಎಂದಿದ್ದೇನೆ ಎಂದು ಕೆಲ ಜೆಡಿಎಸ್ ನಾಯಕರುಗಳ ಬಿಜೆಪಿ ಸೇರ್ಪಡೆ ವಿಚಾರದ ಸಂಬಂಧ ಸ್ಪಷ್ಟಪಡಿಸಿದರು.
ಪಠ್ಯ ಪರಿಷ್ಕರಣೆಯಲ್ಲಿ ಎಲ್ಲಾ ಪಕ್ಷಗಳಿಂದ ರಾಜಕೀಯ
ಪಠ್ಯ ಪರಿಷ್ಕರಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಮಾಡಿವೆ. ಸಮಾಜಕ್ಕೆ, ಮಕ್ಕಳಿಗೆ, ದೇಶಕ್ಕೆ ಒಳ್ಳೆಯದು ಆಗತ್ತೆ ಅನ್ನೋದಿದ್ದರೆ ಪರಿಷ್ಕರಣೆ ಮಾಡಲಿ, ಅದರಲ್ಲಿ ತಪ್ಪೇನಿದೆ. ಆದರೆ ಅದರಲ್ಲಿ ರಾಜಕೀಯ ಮಾಡಬಾರದು. ಸಾವಿತ್ರಿಬಾಯಿ ಫುಲೆ ಅವರ ಪಠ್ಯವನ್ನು ತೆಗೆದಿದ್ದು ತಪ್ಪು, ನಾನು ಇದನ್ನು ಒಪ್ಪುವುದಿಲ್ಲ. ಮಹಿಳಾ ಶಿಕ್ಷಣದಲ್ಲಿ ಅವರ ಕೊಡುಗೆ ಅಪಾರವಿದೆ. ಭಗತ್ ಸಿಂಗ್, ಸಾವಿತ್ರಿಬಾಯಿ ಫುಲೆ ಅವರ ಪಠ್ಯ ತೆಗೆದದ್ದು ತಪ್ಪು, ನಾನು ಯಾವ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪುನರುಚ್ಚರಿಸಿದರು.

ಹೆಡ್ಗೆವಾರ್ ಪಠ್ಯ ಸೇರಿಸಿರುವುದು ತಪ್ಪಲ್ಲ
ಹೆಡ್ಗೆವಾರ್ ಪಠ್ಯವನ್ನು ಸೇರಿಸಿರುವುದನ್ನು ನಾನು ತಪ್ಪು ಎನ್ನಲಾರೆ. ಅದರಲ್ಲಿ ತಪ್ಪೇನಿದೆ? ಒಳ್ಳೆ ಉದ್ದೇಶದಿಂದ ಮಾಡಿದ ಕೆಲಸಗಳು ಯಾವುದೇ ಕಾರಣಕ್ಕೂ ತಪ್ಪಲ್ಲ ಎಂದ ಅವರು, ಯಾವ ಅಧಿಕಾರಿಗಳೂ ಶಿಸ್ತಾಗಿ ಕ್ರಮ ಕೈಗೊಳ್ಳದಿದ್ದರಿಂದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ಬಂದಾಗ ಯಾವ ಮಂತ್ರಿ ಬರುತ್ತಾರೋ ಅವರಿಗೆ ಬೇಕಾಗಿದ್ದನ್ನ ಪಠ್ಯದಲ್ಲಿ ತರುತ್ತಾರೆ. ರಾಜಕಾರಣಿಗಳು ಇದರಲ್ಲಿ ಹಸ್ತಕ್ಷೇಪ ಮಾಡಬಾರದು ಎಂದರು.
ಪಕ್ಷದಲ್ಲಿ ನಿಮ್ಮ ಸ್ಪರ್ಧೆಗೆ ವಿರೋಧವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಸೇರುವುದಕ್ಕೆ ನಡೆದಿರುವ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ. ಜೊತೆಗೆ ಆ ಸಂದರ್ಭದಲ್ಲಿ ಪಕ್ಷದಿಂದ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ನಾನು ಪಕ್ಷ ಸೇರಿದಾಗ, ನೀವು ಮುಂಚೆಯೇ ಬಂದಿದರೆ ಚೆನ್ನಾಗಿತ್ತು ಎಂದು ಆ ಪಕ್ಷದ ನಾಯಕರು ಸ್ವಾಗತಿಸಿದ್ದರು.
(ಒನ್ಇಂಡಿಯಾ ಸುದ್ದಿ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications