ದ್ವೀಪದ ನಡುವಿನ ಕಾಳಿಮಾತೆಯ ಜಾತ್ರೆ ಕಣ್ತುಂಬಿಕೊಂಡವರೇ ಧನ್ಯ
ಕಾರವಾರ, ಜನವರಿ 8: ಜಿಲ್ಲೆಯ ಕಾಳಿ ನದಿಯಲ್ಲಿನ ಪುಟ್ಟ ದ್ವೀಪದಲ್ಲಿರುವ ಕಾಳಿಮಾತಾ ದೇವಿಯ ಮೂರು ದಿನಗಳ ಜಾತ್ರೆಯು ಬುಧವಾರ ಸಂಭ್ರಮ ಸಡಗರದಿಂದ ಸಂಪನ್ನಗೊಂಡಿತು. ಭಕ್ತರು ದೋಣಿಯ ಮೂಲಕ ತೆರಳಿ ದೇವರ ದರ್ಶನ ಪಡೆದರು.
ಕಾಳಿ ನದಿಯಿಂದ ಸುತ್ತುವರಿದಿರುವ ಈ ದ್ವೀಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಕಾಳಿ ಮಾತೆಯನ್ನು ಅನಾದಿ ಕಾಲದಿಂದಲೂ ಪೂಜಿಸಲಾಗುತ್ತಿದೆ. ಪ್ರತಿವರ್ಷ ನಡೆಯುವ ಜಾತ್ರೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಕುಟುಂಬ ಸಮೇತ ಇಲ್ಲಿಗೆ ಬಂದು ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ.
ರಂಗೋಲಿಗಳೇ ಈ ಜಾತ್ರೆಯ ಸ್ಪೆಷಲ್; ಅನ್ಯ ರಾಜ್ಯದವರಿಂದಲೂ ವೀಕ್ಷಣೆ
ದೋಣಿಯಲ್ಲಿ ಪಯಣ: ಕಾಳಿ ಮಾತೆಯ ದೇಗುಲಕ್ಕೆ ತೆರಳಲು ನಂದನಗದ್ದಾದ ಸಂತೋಷಿ ಮಾತಾ ದೇವಸ್ಥಾನ ಬಳಿಯ ಕಾಳಿನದಿಯ ದಡದಿಂದ ದೋಣಿಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು ಎರಡು ಕಿ.ಮೀ. ದೂರವಿದ್ದ ದ್ವೀಪವನ್ನು ದೋಣಿಯಲ್ಲಿ ತಲುಪಿದರು.
ಮಾರ್ಚ್ 3ರಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ
ಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಸ್ಥಳೀಯರಲ್ಲದೇ ಗೋವಾ ರಾಜ್ಯದಿಂದ ಕೂಡ ಸಾವಿರಾರು ಭಕ್ತರು ಬರುತ್ತಾರೆ. ಪ್ರತಿನಿತ್ಯ ಬೆಳಿಗ್ಗೆ ಇಲ್ಲಿ ಪೂಜೆ ಜರುಗುತ್ತದೆ. ಭಾನುವಾರ ವಿಶೇಷ ಪೂಜೆ ಇರುತ್ತದೆ. ಎಲ್ಲ ದಿನವೂ ದೋಣಿ ವ್ಯವಸ್ಥೆಯಿದೆ. ಹಿಂದೆ ವಿದ್ಯುದ್ದೀಪ, ಜನರೇಟರ್ ವ್ಯವಸ್ಥೆ ಹಾಗೂ ಹೆಚ್ಚಿನ ಪ್ರಚಾರ ಇಲ್ಲದ ಕಾರಣ ಇಲ್ಲಿಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಆದರೆ ಇತ್ತೀಚೆನ ವರ್ಷಗಳಲ್ಲಿ ದೇವಸ್ಥಾನವನ್ನು ಅಭಿವೃದ್ಧಿಪಡಿಸಲಾಗಿದೆ ಎನ್ನುತ್ತಾರೆ ದೇವಸ್ಥಾನದ ಟ್ರಸ್ಟಿ.