ಕಾರವಾರ: ಭೀಕರ ದೋಣಿ ದುರಂತ 9 ಮಂದಿ ಸಾವು
ಕಾರವಾರ, ಜನವರಿ 21: ಕಾರವಾರದಲ್ಲಿ ಭಾರಿ ದೋಣಿ ದುರಂತವೊಂದು ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಇದೆ.
ಕಾರವಾರದ ಬಳಿಯ ಅರಬ್ಬಿ ಸಮುದ್ರದಲ್ಲಿ ಪ್ರಯಾಣಿಕರ ಸಣ್ಣ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಗಿಚಿಕೊಂಡಿದೆ. ಅದರ ಅಡಿಗೆ ಸಿಕ್ಕ ಪ್ರಯಾಣಕರು ಅಸುನೀಗಿದ್ದಾರೆ.
ದೋಣಿಯ ಒಳಗೆ ಒಟ್ಟು 26 ಮಂದಿ ಇದ್ದರು, ಅದರಲ್ಲಿ ಕೆಲವರನ್ನು ರಕ್ಷಿಸಲಾಗಿದೆ. 8 ಶವಗಳನ್ನು ಹೊರತೆಗೆಯಲಾಗಿದ್ದು, ಇಒಂದು ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕಾರವಾರ ಕಡಲತಡಿಯಿಂದ ಆರು ಕಿ.ಮೀ ದೂರ ಇರುವ ಕೂರ್ಮಗಡ ಎಂಬ ದ್ವೀಪದಲ್ಲಿ ನಡೆಯುತ್ತಿದ್ದ ಜಾತ್ರೆಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ದೋಣಿಯಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು ಜನರಿದ್ದರು. ಜೊತೆಗೆ ಸಮುದ್ರದಲ್ಲಿ ಅಲೆಗಳ ಅಬ್ಬರ ಬಹು ಜೋರಾಗಿತ್ತು. ಹಾಗಾಗಿ ದೋಣಿಯು ಅಲೆಗಳ ಅಬ್ಬರ ತಡೆಯಲಾರದೆ ಮುಗುಚಿಕೊಂಡಿದೆ.

ಕಡಲು ರಕ್ಷಣಾ ದಳ, ಪೊಲೀಸರು ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ಕೆಲವರನ್ನು ರಕ್ಷಿಸಲಾಗಿದೆ. ಇನ್ನಷ್ಟು ಮಂದಿ ಕಾಣೆ ಆಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ.

ಉಡುಪಿ ಜಿಲ್ಲಾಧಿಕಾರಿ ನಕುಲ್, ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿದ್ದಾರೆ. ಕಂದಾಯ ಇಲಾಖೆ ಸಚಿವ ದೇಶಪಾಂಡೆ ಸಹ ಕಾರವಾರದತ್ತ ತೆರಳುತ್ತಿರುವುದಾಗಿ ಮಾಧ್ಯಮಗಳಿಗೆ ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications