ಉತ್ತರ ಕನ್ನಡಕ್ಕೆ ಭೇಟಿ ಕೊಡುವವರಿಗೆ ಮಹತ್ವದ ಸೂಚನೆ
ಉತ್ತರ ಕನ್ನಡ, ಜುಲೈ 06 : ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವ ಜನರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 354.
ಬೇರೆ ರಾಜ್ಯಗಳಿಂದ ಅಥವ ಕರ್ನಾಟಕದ ಹೊರ ಜಿಲ್ಲೆಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವವರು ಕಡ್ಡಾಯವಾಗಿ ಸ್ಥಳೀಯ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಒಂದು ವಾರದ ಕಾಲ ಶಿರಸಿ ಮಾರಿಕಾಂಬಾ ದೇವಾಲಯ ಬಂದ್
ಜಿಲ್ಲೆಗೆ ಮೂರು ಅಥವ ಅದಕ್ಕಿಂತ ಮೇಲ್ಪಟ್ಟ ಅವಧಿಗೆ ವಾಸ್ತವ್ಯ ಮಾಡುವ ಉದ್ದೇಶದಿಂದ ಆಗಮಿಸುವ ಎಲ್ಲರೂ ಸಹ ಸ್ಥಳೀಯ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ.
ಕಾರವಾರ ಕೋವಿಡ್ ವಾರ್ಡ್ ನಿಂದ ಮೊಬೈಲ್ ಕದ್ದು ಸೋಂಕಿತ ಪರಾರಿ! ಹೈರಾಣದ ಪೊಲೀಸರು
2005ರ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ - 19 ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ Fever clinicನಲ್ಲಿ ತಪಾಸಣೆಯನ್ನು ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಹೋಂ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ
14 ದಿನ ಕ್ವಾರಂಟೈನ್ : ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳದಿದ್ದರೆ 14 ದಿನಗಳ ಕಾಲ ಗೃಹ ಕ್ವಾರಂಟೈನ್ಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅವರ ವಿರುದ್ಧ ಕಾನೂನು ಕ್ರಮ ಸಹ ಕೈಗೊಳ್ಳಲಾಗುತ್ತದೆ.