ಉತ್ತರ ಕನ್ನಡ ಜಿ.ಪಂ ಅಭಿಲೇಖಾಲಯ ಕಟ್ಟಡಕ್ಕೆ ಬೆಂಕಿ: ಕೆ-ಸ್ವಾನ್ ಕೊಠಡಿ ಭಸ್ಮ
ಕಾರವಾರ, ಜೂನ್ 5: ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿನ ಅಭಿಲೇಖಾಲಯ ಕಚೇರಿ ಕಟ್ಟಡದೊಳಗೆ ಶನಿವಾರ ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ.
ಶನಿವಾರ ಬೆಳಿಗ್ಗೆ 8.30ರ ಸುಮಾರಿಗೆ ಇದ್ದಕ್ಕಿದ್ದಂತೆ ಕಟ್ಟಡದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಎರಡು ಅಂತಸ್ತಿನವರೆಗೂ ವ್ಯಾಪಿಸಿತು. ತಕ್ಷಣವೇ ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಪಟ್ಟರು. ಒಂದು ವಾಹನದ ಟ್ಯಾಂಕ್ ನೀರು ಖಾಲಿಯಾದರೂ ಬೆಂಕಿ ಮಾತ್ರ ನಂದಿರಲಿಲ್ಲ. ಮತ್ತಿನ್ನೊಂದು ವಾಹನವನ್ನು ಸ್ಥಳಕ್ಕೆ ಕರೆಯಿಸಿ ನಂದಿಸುವ ಕಾರ್ಯ ಮಾಡಲಾಗಿದೆ.
ಕಟ್ಟಡದ ನೆಲ ಅಂತಸ್ತಿನಲ್ಲಿ (ಗ್ರೌಂಡ್ ಫ್ಲೋರ್) ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ಇದ್ದು, ಈ ಸಭಾಂಗಣ ಸಂಪೂರ್ಣ ಫ್ಲೈವುಡ್ನಿಂದ ಕೂಡಿದ್ದಾಗಿದೆ. ಈ ಕಾರಣದಿಂದಾಗಿ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ ಹೊತ್ತಿಕೊಂಡಿದೆ.

ಮೊದಲ ಅಂತಸ್ತಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಚೇರಿ ಹಾಗೂ ಅಕ್ಷರ ದಾಸೋಹ ಕಚೇರಿ ಇದ್ದು, ಮೂರನೇ ಅಂತಸ್ತಿನಲ್ಲಿ ದಾಖಲೆಗಳ ಕೊಠಡಿ ಇದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮೂರು ಅಂತಸ್ತಿಗೂ ಬೆಂಕಿಯ ಜ್ವಾಲೆ ಆವರಿಸಿದೆಯಾದರೂ ರೆಕಾರ್ಡ್ಸ್ ರೂಮಿಗೆ ಬೆಂಕಿ ತಗುಲಿಲ್ಲ ಎನ್ನಲಾಗಿದೆ.

Recommended Video
ಸುಮಾರು ಮೂರು ವರ್ಷಗಳ ಹಿಂದೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಕೊಠಡಿಯಲ್ಲೂ ಬೆಂಕಿ ಅವಘಡ ಸಂಭವಿಸಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಭೇಟಿ ನೀಡಿ ಪರಿಶೀಲಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications