2 ತಿಂಗಳ ಮೀನುಗಾರಿಕೆ ನಿರ್ಬಂಧ ತೆರವು: ಮತ್ಸ್ಯ ಶಿಖಾರಿಗೆ ಕಡಲ ಮಕ್ಕಳ ಕ್ಷಣಗಣನೆ!
ಕಾರವಾರ, ಜುಲೈ 31: ಕಳೆದ ಎರಡು ತಿಂಗಳಿಂದ ಬಂದಾಗಿದ್ದ ಆಳ ಸಮುದ್ರ ಮೀನುಗಾರಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಸುದೀರ್ಘ ಬಿಡುವಿನ ಬಳಿಕ ಕಡಲ ಮಕ್ಕಳು ಮತ್ಸ ಶಿಖಾರಿ ನಡೆಸಲು ಬಲೆ ಬೋಟ್ಗಳೊಂದಿಗೆ ಅಗತ್ಯ ಸಿದ್ದತೆ ಮಾಡಿಕೊಂಡಿದ್ದು, ಮೀನುಗಾರಿಕೆಗೆ ಅನುಕೂಲಕರ ವಾತವರಣವಿರುವುದು ಕೂಡ ಇದೀಗ ಮೀನುಗಾರರ ಉತ್ಸಾಹ ಇಮ್ಮಡಿಗೊಳ್ಳುವಂತೆ ಮಾಡಿದೆ.
ಮೀನುಗಳು ಸಂತಾನೋತ್ಪತ್ತಿಯಲ್ಲಿ ತೊಡಗಿಕೊಳ್ಳುವ ಕಾರಣ ಜೂನ್ 1ರಿಂದ ಎರಡು ತಿಂಗಳು ಕಾಲ ಆಳ ಸಮುದ್ರ ಮೀನುಗಾರಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆದರೆ ಆ.1 ರಿಂದ ನಿರ್ಬಂಧ ತೆರವುಗೊಳ್ಳಲಿದ್ದು ಬಿಡುವಿನ ಅವಧಿಯಲ್ಲಿ ಬೋಟ್ಗಳ ಎಂಜಿನ್ ಸರ್ವೀಸ್, ಮುರಿದು ಹೋಗಿದ್ದ ಹಲಗೆಗಳ ಬದಲಾವಣೆ, ಬಲೆಗಳ ದುರಸ್ಥಿ, ಹೊಸ ಬಲೆಗಳ ಖರೀದಿ, ಬೋಟ್ಗಳಿಗೆ ಬಣ್ಣ ಬಳಿದು ಸ್ವಚ್ಛಗೊಳಿಸುವುದು, ಪರವಾನಗಿ ನವೀಕರಣ, ಡೀಸೆಲ್ ಪಾಸ್ ಪುಸ್ತಕ, ಮೀನುಗಾರಿಕೆಗೆ ಆರಂಭಿಕ ಬಂಡವಾಳ ಕ್ರೂಢೀಕರಣ ಸೇರಿದಂತೆ ಮೀನುಗಾರಿಕೆಗೆ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ.

ಮಾತ್ರವಲ್ಲದೆ ಬೋಟ್ನಲ್ಲಿ ಕೆಲಸ ಮಾಡುವ ಹೊರ ರಾಜ್ಯದ ಕಾರ್ಮಿಕರು ಬಂದರುಗಳತ್ತ ಮುಖ ಮಾಡಿದ್ದಾರೆ. ಬೋಟ್ಗಳ ರಿಪೇರಿ ಕಾರ್ಯದ ಬಳಿಕ ಸುಣ್ಣ ಬಣ್ಣ ಬಳಿದು ತೋರಣಗಳಿಂದ ಶೃಂಗರಿಸಿ, ಹೋಮ ಹವನ ನಡೆಸಲಾಗುತ್ತಿದೆ. ಜೊತೆಗೆ ಎರಡು ತಿಂಗಳುಗಳ ಕಾಲ ಮನೆಗಳಲ್ಲಿ ಸಂಗ್ರಹಿಸಿದ್ದ ಮೀನುಗಾರಿಕಾ ಸಲಕರಣೆ-ಸಾಮಗ್ರಿಗಳನ್ನು ಬೋಟ್ಗೆ ತುಂಬಿಸುವ ಕಾರ್ಯವನ್ನು ಕಾರ್ಮಿಕರು ಮಾಡುತ್ತಿದ್ದಾರೆ.
ಎರಡು ತಿಂಗಳ ನಿರ್ಬಂಧದ ಅವಧಿ ಮುಕ್ತಾಯವಾಗಿದೆ. ಬೋಟ್ ಬಲೆ ರಿಪೇರಿ ಕೂಡ ಆಗಿದ್ದು, ವಾತಾವರಣ ಕೂಡ ಉತ್ತಮವಾಗಿದೆ. ಕಳೆದ ಮೂರು ವರ್ಷದಿಂದ ಕೈಗೂಡದ ಮೀನುಗಾರಿಕೆ ಈ ಬಾರಿಯಾದರೂ ಮೀನುಗಾರರಿಗೆ ಆಗುವ ನಿರೀಕ್ಷೆ ಇದೆ. ಟ್ರಾಲ್ ಬೋಟ್ಗಳು ಆ.1 ರಿಂದ ತೆರಳಲಿದ್ದು, ಪರ್ಸಿಯನ್ ಬೋಟ್ಗಳು ಆ. 6ರ ಬಳಿಕ ತೆರಳಲಿವೆ ಎಂದು ಟ್ರಾಲರ್ ಬೋಟ್ ಮಾಲಿಕ ಶ್ರೀಧರ ಹರಿಕಂತ್ರ ಮಾಹಿತಿ ನೀಡಿದರು.
ನರಸಿಂಹ ದೇವರಿಗೆ ಪೂಜೆ ಬಳಿಕ ಮೀನುಗಾರಿಕೆ
ಇನ್ನು ಪ್ರತಿ ಬಾರಿ ನಿಷೇಧದ ಬಳಿಕ ಆರಂಭವಾಗುವ ಮೀನುಗಾರಿಕೆಗೂ ಮೊದಲು ಸಮುದ್ರ ಮಧ್ಯದ ಕೂರ್ಮಗಡ ದ್ವೀಪದಲ್ಲಿ ನೆಲೆಸಿರುವ ನರಸಿಂಹಸ್ವಾಮಿ ದೇವರಿಗೆ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ಎಲ್ಲ ಬೋಟ್ಗಳು ದ್ವೀಪ ಸುತ್ತಿ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿದ ಬಳಿಕವೇ ಮೀನುಗಾರಿಕೆಗೆ ತೆರಳುವುದು ಮೀನುಗಾರರ ವಾಡಿಕೆಯಾಗಿದೆ.
ಮೀನುಗಾರಿಕೆ ವೇಳೆಗೆ ಬಂದಾದ ರಪ್ತು
ಕಡಲಮಕ್ಕಳು ಮೀನುಗಾರಿಕೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು ಉತ್ತಮ ಮೀನುಗಾರಿಕೆ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲಿಯೂ ಆರಂಭದಲ್ಲಿ ಶೆಟ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೀನುಗಾರಿಕೆ ಆಗುವುದರಿಂದ ಮೀನುಗಾರರು ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ವಿದೇಶಗಳಿಗೆ ರಪ್ತಾಗುತ್ತಿದ್ದ ಮೀನು, ಶೆಟ್ಟಿ ಪ್ರಮಾಣ ಕಡಿಮೆಯಾಗಿದ್ದರಿಂದ ಇದೀಗ ಖರೀದಿ ಕೂಡ ಕಡಿಮೆಯಾಗಿದೆ. ಇದರಿಂದ ಮೀನುಗಾರಿಕೆ ಅವಧಿಯಲ್ಲಿ ಬೆಲೆ ಕೂಡ ಕುಸಿತವಾಗಿದೆ. ಹೀಗಾದಲ್ಲಿ ಮೀನುಗಾರಿಕೆಯಾದರೂ ಕೂಡ ಈ ದುಬಾರಿ ಬೆಲೆಯ ನಡುವೆ ಮೀನುಗಾರರಿಗೆ ಲಾಭ ಸಿಗುವುದು ಕಷ್ಟ ಎಂದು ಟ್ರಾಲರ್ ಬೋಟ್ ಮಾಲಿಕ ಶ್ರೀಧರ ಹರಿಕಂತ್ರ ಹೇಳಿದ್ದಾರೆ.
• ನೋಂದಾಯಿತ ಮೀನುಗಾರರ ಸಂಖ್ಯೆ-68,949
• ಮೀನುಗಾರಿಕಾ ಕಾರ್ಮಿಕರ ಸಂಖ್ಯೆ-42,097
• ಟ್ರಾಲರ್ ಬೋಟ್ಗಳ ಸಂಖ್ಯೆ-3,952
• ಪರ್ಸಿಯನ್ ಬೋಟ್ಗಳ ಸಂಖ್ಯೆ-1,139
• ನಾಡದೋಣಿಗಳ ಸಂಖ್ಯೆ-7,974
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications