ಉತ್ತರ ಕನ್ನಡ: ಬದುಕಿನ ಹಾಡು ಮುಗಿಸಿದ ‘ಹನುಮಿ ಗೌಡ’
ಕಾರವಾರ, ಜೂನ್ 22: ಎಳೆ ಬದುಕಿನ ಮುಂಜಾನೆಯಿಂದ ಇಳಿ ಬದುಕಿನ ಮುಸ್ಸಂಜೆಯವರೆಗೂ ಸಾಲು ಸಾಲು ನೋವು, ಸವಾಲುಗಳಿಂದ ಜರ್ಝರಿತವಾಗುತ್ತಲೇ ಸಾಗಿದರೂ ನಾನು ಹಾಡುವುದು ನನಗೆಂದು, ಎದೆಯ ಭಾರ ಇಳಿಯಲೆಂದು ಎಂದುಕೊಳ್ಳುತ್ತಾ ಸಾವಿರಕ್ಕೂ ಹೆಚ್ಚು ಜಾನಪದ ಹಾಡುಗಳನ್ನು ನಾಲಿಗೆಯ ತುದಿಯಲ್ಲಿಟ್ಟುಕೊಂಡು ಕೇಳುಗರನ್ನು ಮೂಕವಿಸ್ಮಿತರನ್ನಾಗಿಸುತ್ತಲೇ ಸಾಧನೆಯ ಪಥದಲ್ಲಿ ಹೆಜ್ಜೆಹಾಕಿದ್ದ ಗ್ರಾಮೊಕ್ಕಲ ಸಮಾಜದ ಹೆಮ್ಮೆಯೆನಿಸಿದ್ದ ಜಾನಪದಶ್ರೀ ಹನುಮಿ ಗೌಡ ಇನ್ನು ನೆನಪು ಮಾತ್ರ.
ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಹನುಮಜ್ಜಿ ಜೂನ್ 21ರಂದು ತಮ್ಮ 74ರ ಹರೆಯದಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾಳೆ. ಕೇವಲ 4ನೇ ತರಗತಿ ಓದಿಕೊಂಡು, 13 ಹರೆಯದಲ್ಲಿ ಮದುವೆಯ ಬಂಧನಕಕ್ಕೊಳಗಾಗಿ, 40 ಜನರಿದ್ದ ಅವಿಭಕ್ತ ಕುಟುಂಬದಲ್ಲಿ ಹಿರಿ- ಕಿರಿಯರೊಂದಿಗೆ ಏಗಬೇಕಾದ ಸವಾಲುಗಳೊಂದಿಗೆ ಜೀಕುತ್ತಲೇ ಜಾನಪದ ಹಾಡುಗಳ ಕಣಜವೆನ್ನಿಸಿಕೊಂಡಿದ್ದೊಂದು ಅದ್ಭುತವೇ ಸರಿ.
2002ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜ್ಞಾನ ವಿಜ್ಞಾನ ಪ್ರಶಸ್ತಿ, ಕರ್ನಾಟಕ ಸರ್ಕಾರದ ಜಾನಪದ ಶ್ರೀ ಗೌರವಗಳನ್ನು ಮುಡಿಗೇರಿಸಿಕೊಂಡಿರುವ 73 ವರ್ಷದ ಹಿರಿಯ ಜೀವ ಹನುಮಜ್ಜಿ. ಈಶಾನ್ಯ ರಾಜ್ಯ ಮೇಘಾಲಯದ ಶಿಲ್ಲಾಂಗ್ನಲ್ಲಿ ನಡೆದ ರಾಷ್ಟ್ರೀಯ ಜಾನಪದ ಉತ್ತೇಜನ ಕೇಂದ್ರದ ಕಾರ್ಯಕ್ರಮದಲ್ಲಿಯೂ ಭಾಗವಹಿಸಿ ಗ್ರಾಮೊಕ್ಕಲ ಜಾನಪದ ಲೋಕದ ವೈಭವವನ್ನು ಶಕ್ತಿಯುತವಾಗಿ ಹಾಡುಗಳ ಮೂಲಕ ತೆರೆದಿಟ್ಟ ಸಾಧನೆ ಮಾಡಿದ್ದಾಳೆ.

ಎಲೆಮರೆಯ ಕಾಯಿಯಂತಿದ್ದ ಹನುಮಜ್ಜಿಯ ಜಾನಪದ ಪ್ರತಿಭೆಯ ಮೇಲೆ ಬೆಳಕು ಚೆಲ್ಲಿ ಹೊರ ಜಗತ್ತಿಗೆ ಪರಿಚಯಿಸಿದ್ದು, ಖ್ಯಾತ ಜಾನಪದ ವಿದ್ವಾಂಸ ಡಾ.ಎನ್.ಆರ್. ನಾಯಕ, ಡಾ.ಶಾಂತಿ ನಾಯಕ ದಂಪತಿ ಒಡನಾಟ ಮತ್ತು ಅವರ ಮಗಳಾದ ಸವಿತಾ ಉದಯ ಅವರ ಸಹಕಾರ ಎನ್ನುವುದು ಸ್ಮರಣೀಯ.
ಜೀವನ ವೃತ್ತಾಂತ
ದಿ.ಗಣಪಿ ಮತ್ತು ದಿ.ನಾರಾಯಣ ಗೌಡರ ಮಗಳಾಗಿ ಜನಿಸಿದ ಹನುಮಿ ಅಜ್ಜಿಯ ತವರು ಹೊನ್ನಾವರ ತಾಲೂಕಿನ ಅಳ್ಳಂಕಿ ಯರ್ಜಿನಮೂಲೆ ಎನ್ನುವ ಪುಟ್ಟ ಊರಾದರೂ ಆಕೆ ಹುಟ್ಟಿ ಬೆಳೆದಿದ್ದು ಮಾತ್ರ ತಾಯಿಯ ತವರುಮನೆ ಇದ್ದ ಶರಾವತಿಯ ನಡುಗಡ್ಡೆ ಹೈಗುಂದದಲ್ಲಾಗಿತ್ತು. 13ರ ಹರೆಯದಲ್ಲಿ ಮದುವೆಯಾಗಿ ಮಾಳಕೋಡಿನ ಗಂಡನ ಮನೆ ಸೇರಿದ ಈಕೆ ಐದು ಗಂಡು ಒಂದು ಹೆಣ್ಣುಮಗುವಿಗೆ ಜನ್ಮವಿತ್ತು ಸಾಕಿ ಸಲಹುತ್ತಲೇ ಹೆತ್ತವ್ವಳಿಂದ ಬಳುವಳಿಯಾಗಿ ಬಂದಿದ್ದ ಜಾನಪದ ಹಾಡುಗಳನ್ನು ಗುನುಗುನಿಸುತ್ತಾ ಕಲಾಲೋಕದಲ್ಲಿ ಬೆಳೆದ ಪರಿ ಅನನ್ಯ.
ನೆರೆ ಹೊರೆಯ ಹಿರಿಯರು ಹೇಳುತ್ತಿದ್ದ ಹಾಡುಗಳು ಕಿವಿದರೆಗೆ ತಾಕಿದರೆ ತಕ್ಷಣ ಅದನ್ನು ನೆನಪಿಟ್ಟುಕೊಂಡು ಊರುಕೇರಿಯಲ್ಲಿ ಯಾರ ಮನೆಯಲ್ಲಿ ಮದುವೆ, ಮುಂಜಿ, ಸೀಮಂತ, ನಾಮಕರಣ, ದೇವರ ಕಾರ್ಯ, ಹಬ್ಬ ಹರಿದಿನ ಶುಭ ಕಾರ್ಯವಿರಲಿ ಅಲ್ಲಿ ಹನುಮಜ್ಜಿ ಮತ್ತವಳ ಬಳಗದ ಹಾಡಿನ ಸುಗ್ಗಿ ನಡೆಯುತ್ತಿತ್ತು.
ಬಹುಮುಖ ಪ್ರತಿಭೆ ಹನುಮಜ್ಜಿ ತನ್ನನ್ನು ಕೇವಲ ಜಾನಪದ ಹಾಡುಗಳಿಗೆ ಮಾತ್ರ ಸೀಮಿತವಾಗಿಸಿಕೊಂಡವಳಲ್ಲ. ಕೇದಿಗೆ ಎಲೆಗಳಿಂದ ಚಾಪೆ ನೇಯುವುದು, ಶೇಡಿ (ಜೇಡಿ ಮಣ್ಣಿನ ಹುಡಿ) ಕಲೆಯಲ್ಲಿಯೂ ನಿಷ್ಣಾತರಾಗಿದ್ದಾಳೆ ಈಕೆ. ಅಡಿಕೆ ಸಿಪ್ಪೆಯನ್ನು ಕುಂಚಗಳನ್ನಾಗಿ ಮಾಡಿಕೊಂಡು ಬಾಗಿಲ ತೋರಣ, ಕೊಡೆಶೇಡಿ, ಕಳಸದ ಶೇಡಿ, ಸರ್ಪ ಶೇಡಿ, ಪೆಟ್ಟಿಗೆ ಶೇಡಿ, ಹಸಗಾರ (ಮಧು ಮಕ್ಕಳು ಕುಳಿತುಕೊಳ್ಳುವ ಸ್ಥಳದ ಹಿಂದಿನ ಗೋಡೆಯ ಮೇಲೆ ಬಿಡಿಸಲಾಗುವ ಕಲೆ) ತಳಕಲ ಶೇಡಿ, ಬಾಸಿಂಗ, ತೊಂಡ್ಲ ಹೀಗೆ ನಾನಾ ಬಗೆಯ ಚಿತ್ತಾರಗಳನ್ನು ಸೃಷ್ಟಿಸುವ ಕಲೆಯನ್ನೂ ಕರಗತ ಮಾಡಿಕೊಂಡಿದ್ದಳು.
Recommended Video
ತನ್ನ ಹಾಡುಗಳಿಂದ ಜಾನಪದ ಲೋಕವನ್ನು ಶ್ರೀಮಂತಗೊಳಿಸಿದ ಹನಮಿ ಗೌಡ ನಿಧನಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ, ತಾಲೂಕು ಪಂಚಾಯತಿ ಸದಸ್ಯ ಗಣಪಯ್ಯ ಗೌಡ, ಜಾನಪದ ವಿದ್ವಾಂಸರಾದ ಡಾ.ಎನ್.ಆರ್. ನಾಯಕ, ಡಾ.ಶಾಂತಿ ನಾಯಕ, ನಿವೃತ್ತ ಉಪನ್ಯಾಸಕ ಸಾಹಿತಿ ಡಾ.ಶ್ರೀಪಾದ ಶೆಟ್ಟಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ತಿಮ್ಮಪ್ಪ ಗೌಡ, ಶಿಕ್ಷಕರಾದ ಗಣಪಯ್ಯ ಗೌಡ ಮಾಳ್ಕೋಡ ಸೇರಿದಂತೆ ಸಾವಿರಾರು ಮಂದಿ ಸಂತಾಪ ಸೂಚಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications