ಹೊನ್ನಾವರ; ಮಾಜಿ ಶಾಸಕ ಡಾ. ಎಂ. ಪಿ. ಕರ್ಕಿ ಇನಿಲ್ಲ
ಹೊನ್ನಾವರ, ಅಕ್ಟೋಬರ್ 18; ಕುಮಟಾ- ಹೊನ್ನಾವರ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ, ಪಟ್ಟಣದ ಎಸ್ಡಿಎಂ ಕಾಲೇಜಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಎಂ. ಪಿ. ಕರ್ಕಿ (87) ಸೋಮವಾರ ನಿಧನರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಜನಸಂಘದ ಕಾಲದಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷದ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ಕಾಲ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಒಮ್ಮೆ ರಾಜ್ಯ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿದ್ದರು. 1983 ಹಾಗೂ ಎರಡನೇ ಬಾರಿ 1994ರಲ್ಲಿ ಎರಡು ಬಾರಿ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.
ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಷ್ಟಿತ ಸಂಸ್ಥೆಯಾದಂತಹ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ 40 ವರ್ಷಗಳವರೆಗೆ ಸೇವೆ ಸಲ್ಲಿಸಿರುವ ಹಿರಿಮೆಯನ್ನು ಎಂ. ಪಿ. ಕರ್ಕಿ ಹೊಂದಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ಬಿಜೆಪಿ ತಾಲೂಕ ಅಧ್ಯಕ್ಷ ರಾಜೇಶ ಭಂಡಾರಿ, ಪ.ಪಂ ಅಧ್ಯಕ್ಷ ಶಿವರಾಜ ಮೇಸ್ತ, ಎಂಪಿಐ ಸೊಸೈಟಿ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ ಶಿವಾನಿ, ಪ್ರಾಚಾರ್ಯೆ ವಿಜಯಲಕ್ಷ್ಮಿ ನಾಯಕ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹೊನ್ನಾವರಕ್ಕೆ ಕೊಡುಗೆ; ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ಹೊನ್ನಾವರ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ. ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು. ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ ತಾಲೂಕಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ.
ಹೊನ್ನಾವರದ ಸುಪ್ರಸಿದ್ಧ ನ್ಯಾಯವಾದಿ, ಸ್ವಾತಂತ್ರ್ಯ ಹೋರಾಟಗಾರ ಪರಮೇಶ್ವರ ಗಣೇಶ ಕರ್ಕಿ ಹಾಗೂ ಶ್ರೀಮತಿ ಅನಸೂಯಾ ಕರ್ಕಿ ಅವರ ಮಗನಾಗಿ 16-7-1935ರಂದು ಜನಿಸಿದ ಇವರು ಮುಂಬೈನಲ್ಲಿ 1959ರಲ್ಲಿ ಪ್ರಸಿದ್ಧ ಗ್ರಾಂಯಂಟ್ ಮೆಡಿಕಲ್ ಕಾಲೇಜಿನಲ್ಲಿ ಎಂ. ಬಿ. ಬಿ. ಎಸ್ ಪದವಿ ಗಳಿಸಿ ಆ ಕಾಲದಲ್ಲಿ ತಾಯ್ನೆಲದ ಜನರ ಸೇವೆಗಾಗಿಯೇ ಹೊನ್ನಾವರದಲ್ಲಿ ವೈದ್ಯಕೀಯ ಸೇವೆ ಆರಂಭಿಸಿ ಎರಡು ದಶಕಗಳಿಗೂ ಹೆಚ್ಚುಕಾಲ ಸಂಪೂರ್ಣವಾಗಿ ತಮ್ಮನ್ನು ಸಮರ್ಪಿಸಿಕೊಂಡವರು. ಹಣ ಇರಲಿ, ಇಲ್ಲದಿರಲಿ. ಆಸ್ಪತ್ರೆಗೆ ಬಂದ ರೋಗಿಗಳಿಗೆ ಔಷಧ ಕೊಡದೆ ಕಳಿಸುತ್ತಿರಲಿಲ್ಲ. ಹಗಲು-ರಾತ್ರಿಯೆನ್ನದೆ ಹಳ್ಳಿಹಳ್ಳಿಗೆ ತಿರುಗಿ ವೈದ್ಯಕೀಯ ಸೇವೆ ನೀಡಿದ್ದನ್ನು ಜನ ಎಂದಿಗೂ ಮರೆಯಲಾರರು.

ಸೇವೆ ಮಾಡಲೆಂದೇ ಬಿಜೆಪಿ ಪಕ್ಷ ಸೇರಿಕೊಂಡ ಡಾ. ಕರ್ಕಿ ವಾಜಪೇಯಿಯವರಿಂದ ಪ್ರಭಾವಿತರಾಗಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿದ ಪ್ರಥಮರಲ್ಲಿ ಒಬ್ಬರು. ಪಕ್ಷದ ಸಂಘಟಕರಾಗಿ, ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿ ಚುನಾವಣೆಗೆ ನಿಂತು, ಸೋತು, ನಂತರ ಪುನಃ ಗೆದ್ದು 1983 ಹಾಗೂ 1994ರಲ್ಲಿ ಎರಡು ಅವಧಿಗೆ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದ ಕುಂದುಕೊರತೆಗಳಿಗೆ ಪ್ರಾಮಾಣಿಕವಾಗಿ ಡಾ. ಕರ್ಕಿ ಸ್ಪಂದಿಸಿದ್ದಾರೆ.
ತಮ್ಮ ಶಾಸಕತ್ವದ ಅವಧಿಯಲ್ಲಿ ಲಂಚ ಪಡೆಯುವ, ಕೊಡುವ, ಕೊಡಿಸುವ ಯಾವುದನ್ನೂ ಮಾಡದ ಡಾ. ಕರ್ಕಿಯವರ ಪ್ರಾಮಾಣಿಕತೆ ವಿಧಾನಸೌಧದಲ್ಲಿ ನಿತ್ಯದ ಮಾತಾಗಿತ್ತು. ಹೊನ್ನಾವರ-ಕುಮಟಾ ಪಟ್ಟಣಗಳಿಗೆ ನೀರು ಪೂರೈಸುವ ಮರಾಕಲ್ ಯೋಜನೆ ಇವರ ಅವಧಿಯಲ್ಲಿ ಕಾರ್ಯರೂಪಕ್ಕೆ ಬಂದಿದೆ.
ಹೊನ್ನಾವರ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಉತ್ತಮ ಆಡಳಿತ ನೀಡಿದ್ದರು. ತಾಲೂಕಾ ಬೋರ್ಡಿನ ಸದಸ್ಯರಾಗಿ, ಲ್ಯಾಂಡ್ ಬ್ಯಾಂಕಿನ ಅಧ್ಯಕ್ಷರಾಗಿ, ಭಾರತ್ ಮಜದೂರ್ ಸಂಘದ ಸಂಚಾಲಕರಾಗಿ, ಹವ್ಯಕ ಬ್ಯಾಂಕಿನ ಅಧ್ಯಕ್ಷರಾಗಿ ದುಡಿದಿದ್ದಾರೆ. ಹವ್ಯಕ ಸಭಾಭವನದ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಅದನ್ನು ಎಲ್ಲರೂ ಹೆಮ್ಮೆಪಡುವಂತೆ ನಿರ್ಮಿಸಿ ಎಲ್ಲ ಸಮುದಾಯದವರಿಗೆ ಅರ್ಪಿಸಿದ್ದಾರೆ.
ಮೂಡಗಣಪತಿ ದೇವಾಲಯದ ಮುಖ್ಯ ಟ್ರಸ್ಟಿಯಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಎಂ.ಪಿ.ಇ. ಸೊಸೈಟಿಯ ಅಧ್ಯಕ್ಷರಾಗಿ ಮೂರು ದಶಕಗಳಿಗೂ ಹೆಚ್ಚುಕಾಲ ಕಳಂಕರಹಿತ ಸೇವೆ ಸಲ್ಲಿಸಿದ್ದು ಭೌತಿಕವಾಗಿ ಕಾಲೇಜನ್ನು ವಿಸ್ತರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಜಿಲ್ಲಾ ಅನುದಾನಿತ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ, ಕಾಸರಕೋಡಿನ ಕೋ-ಆಪರೇಟಿವ್ ಹಂಚಿನ ಕಾರ್ಖಾನೆಯ ಅಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯದ 'ಸಿಂಡಿಕೇಟ್'ನ ಸದಸ್ಯರಾಗಿಯೂ ಸಮರ್ಥವಾಗಿ ಕೆಲಸ ಮಾಡಿದ್ದಾರೆ.
ಮನೆಯಲ್ಲಿಯೂ ಶಿಸ್ತು, ಅಚ್ಚುಕಟ್ಟುತನ, ಶುಚಿರುಚಿಯಾದ ಆತಿಥ್ಯಕ್ಕೆ ಹೆಸರಾಗಿದ್ದ ಡಾ. ಕರ್ಕಿಯವರು ಮತ್ತು ಪತ್ನಿ ಲಕ್ಷ್ಮೀ ಬಾಯಿ ಇವರ ಆತಿಥ್ಯವನ್ನು ಬಿಜೆಪಿಯ ಸಣ್ಣ- ದೊಡ್ಡ ಮುಖಂಡರಿಂದ ಆರಂಭಿಸಿ ಅಟಲ್ ಬಿಹಾರಿ ವಾಜಪೇಯಿಯವರವರೆಗೆ ಸಾವಿರಾರು ಜನ ಸವಿದಿದ್ದಾರೆ.
ಮಗ ರವಿ, ಮಗಳು ಕಾಂಚನಾ, ಮೊಮ್ಮಕ್ಕಳೊಂದಿಗೆ ಕೌಟುಂಬಿಕವಾಗಿ ನೆಮ್ಮದಿಯ ಜೀವನ ಕಂಡಿದ್ದಾರೆ. ತಾಲೂಕಿನಲ್ಲಿ ಅಪರೂಪಕ್ಕೆ ಇಂತಹ ಪ್ರಾಮಾಣಿಕ ವ್ಯಕ್ತಿಗಳು ಕಾಣಿಸಿಕೊಂಡು ತಮ್ಮ ಅವಧಿಯಲ್ಲಿ ತಾಲೂಕನ್ನು ಅಭಿವೃದ್ಧಿಪಡಿಸಿದ್ದಾರೆ. ಅವರಲ್ಲಿ ಡಾ.ಎಂ.ಪಿ.ಕರ್ಕಿ ಅಗ್ರಗಣ್ಯರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications