ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಕರ್ಣ ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

|
Google Oneindia Kannada News

ಕಾರವಾರ, ಮಾರ್ಚ್ 11: ಶಿವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಸ್ನಾನಕ್ಕೆ ಇಳಿದು, ಅಲೆಗೆ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಗುರುವಾರ ನಡೆದಿದೆ.

ಮಹಾರಾಷ್ಟ್ರದಿಂದ ಶಿವರಾತ್ರಿ ನಿಮಿತ್ತ ಗೋಕರ್ಣಕ್ಕೆ ಆಗಮಿಸಿದ್ದ 15 ಜನ ಪ್ರವಾಸಿಗರು, ಶಿವ ದರ್ಶನಕ್ಕೂ ಮೊದಲು ಸಮುದ್ರ ಸ್ನಾನಕ್ಕೆ ತೆರಳಿದ್ದರು.

ಯಲ್ಲಾಪುರದಲ್ಲಿ ಧರೆ‌ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು! ಯಲ್ಲಾಪುರದಲ್ಲಿ ಧರೆ‌ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು!

ಈ ವೇಳೆ ನೀರಿನಲ್ಲಿ ಈಜಾಡುತ್ತಿರುವಾಗ ಅಲೆಗಳಿಗೆ ಸಿಲುಕಿದ ಭೂಪೇಂದ್ರ ಸಿಂಗ್ (48) ಶಿವಸಿಂಗ್ ರಜಪೂತ್ (52), ಯುವರಾಜ್ (45), ಯೋಗೇಂದ್ರ ರಜಪೂತ್ (38) ಕೊಚ್ಚಿ ಹೋಗುತ್ತಿದ್ದರು.

Karwar: Four Tourists Rescued from Drowning in Gokarna Sea

ತಕ್ಷಣ ಈ ಬಗ್ಗೆ ತಿಳಿದ ಲೈಫ್ ಗಾರ್ಡ್ ರಾಜು ಅಂಬಿಗ, ಮಾರುತಿ ವಿಶ್ವಾಸ್, ಶೇಖರ್ ಎಂಬುವವರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recommended Video

ಕೋರೋನ ಹಾವಳಿ ಜಾಸ್ತಿ ಆದ ಕಾರಣ ! ಲಾಕ್ ಡೌನ್ | Oneindia Kannada

ಕರ್ನಾಟಕದ ದಕ್ಷಿಣ ಕಾಶಿ ಖ್ಯಾತಿಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲೂ ಸಹ ಶಿವರಾತ್ರಿ ವೈಭವ ಕಳೆಕಟ್ಟಿದೆ. ಶಿವನ ಆತ್ಮಲಿಂಗವಿರುವ ಕ್ಷೇತ್ರವಾಗಿರುವ ಹಿನ್ನಲೆ ಶಿವರಾತ್ರಿಯಂದು ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಆದರೆ ಈ ಬಾರಿ ಕೊರೊನಾ ಅಬ್ಬರದಿಂದಾಗಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಹೆಚ್ಚಿನ ಜನಜಂಗುಳಿ ಇಲ್ಲದೇ ಶಿವರಾತ್ರಿ ಆಚರಣೆ ನಡೆದಿದೆ.

English summary
In the main beach of Gokarna on Thursday four tourists were rescued from drowning in the sea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X