ಉತ್ತರ ಕನ್ನಡದ ವಿವಿಧ ರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾತಿ: ವಿವರ
ಕಾರವಾರ, ಮಾರ್ಚ್ 20: ಉತ್ತರ ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಉತ್ತರ ಕನ್ನಡದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದು, ಜಿಲ್ಲೆಯ ವಿವಿಧ ರಸ್ತೆ ಅಭಿವೃದ್ಧಿಗೆ ಅನುದಾನ ಪಡೆದಿದ್ದಾರೆ.
ಕೇಂದ್ರ ಸರ್ಕಾರದಿಂದ ಉತ್ತರ ಕನ್ನಡದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಅಂಕೋಲಾದ ವಿಠ್ಠಲ ಘಾಟ್, ಭಟ್ಕಳ ತಾಲೂಕಿನ ಮೂಡ ಭಟ್ಕಳ ಮತ್ತು ಕಾಯ್ಕಿಣಿ ಬಳಿ ಅಂಡರ್ಪಾಸ್ ನಿರ್ಮಾಣಕ್ಕೆ 47.48 ಕೋಟಿ ರೂಪಾಯಿ ಮಂಜೂರಾತಿ ದೊರಕಿದೆ. ಅಲ್ಲದೇ ಕುಮಟಾ ತಾಲೂಕಿನ ಹೊನ್ಮಾಂವ್ ಮತ್ತು ಮಾನೀರ ಸಮೀಪ ಹೊಸ ಸೇತುವೆ ನಿರ್ಮಾಣಕ್ಕೆ 9.1 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.

ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗೆಡೆ ಕಾಗೇರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸವಿವರವಾಗಿ ಹಂಚಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಸಾರಿಗೆ ಸಂಪರ್ಕ ಬಲಪಡಿಸಲು ನೆರವಾಗುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರ ಕಾಮಗಾರಿಗಳು ವೇಗ ಪಡೆದುಕೊಳ್ಳಲು ಸಂಸದನಾಗಿ ನಾನು ನಿರಂತರ ಪ್ರಯತ್ನ ನಡೆಸಿದ್ದೇನೆ. ಕಾಲಕಾಲಕ್ಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆದ್ದಾರಿ ಕಾಮಗಾರಿ ಸಮಪರ್ಕವಾಗಿ ಮುಂದುವರೆಯಲು ನಿರ್ದೇಶನ ನೀಡಿದ್ದೇನೆ.
ಸಂಸದನಾಗಿ ಆಯ್ಕೆಯಾದ ಸಂದರ್ಭದಲ್ಲಿ ಜನರನ್ನು ಭೇಟಿ ಮಾಡಿದ ವೇಳೆ ಕರಾವಳಿ ಭಾಗದ ಜನರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಆಗಬೇಕಾದ ಕೆಲ ಮಾರ್ಪಾಟುಗಳ ಬಗ್ಗೆ ನನ್ನ ಗಮನಕ್ಕೆ ತಂದಿದ್ದರು. ಅಂಕೋಲಾ ತಾಲೂಕಿನ ವಿಠ್ಠಲಘಾಟ್, ಭಟ್ಕಳ ತಾಲೂಕಿನ ಮೂಡಭಟ್ಕಳ, ಕಾಯ್ಕಿಣಿಯಲ್ಲಿ ಅಂಡರ್ಪಾಸ್ ನಿರ್ಮಾಣ ಮಾಡಿಸುವಂತೆ ಒತ್ತಾಯಿಸಿದ್ದರು. ಕುಮಟಾ ತಾಲೂಕಿನ ಜನರು ಹೊನ್ಮಾಂವ್, ಮಾನೀರ ಸಮೀಪ ಹಳೆಯ ಸೇತುವೆ ತೆರವುಗೊಳಿಸಿ, ಹೊಸ ಸೇತುವೆ ನಿರ್ಮಿಸಿಕೊಡಲು ಮನವಿ ಮಾಡಿದ್ದರು.
ಸಂಸದನಾಗಿ ಜನರ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಜನರ ಬೇಡಿಕೆಗಳನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದೆ. ಅಲ್ಲದೇ ಜನರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದೆ. ಅದರ ಫಲವಾಗಿ ಕೇಂದ್ರ ಸಚಿವರಿಂದ ಸ್ಪಂದನೆಯೂ ಸಿಕ್ಕಿತು.

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಅಂಕೋಲಾದ ವಿಠ್ಠಲ ಘಾಟ್, ಭಟ್ಕಳ ತಾಲೂಕಿನ ಮೂಡಭಟ್ಕಳ ಮತ್ತು ಕಾಯ್ಕಿಣಿ ಬಳಿ ಅಂಡರ್ಪಾಸ್ ನಿರ್ಮಾಣಕ್ಕೆ 47.48 ಕೋಟಿ ರೂಪಾಯಿ ಮಂಜೂರಾತಿ ದೊರಕಿದ್ದು, ಸದ್ಯದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಕುಮಟಾ ತಾಲೂಕಿನ ಹೊನ್ಮಾಂವ್ ಮತ್ತು ಮಾನೀರ ಸಮೀಪ ಹೊಸ ಸೇತುವೆ ನಿರ್ಮಾಣಕ್ಕೆ 9.1 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆಗಳನ್ನೂ ಅಂತಿಮಗೊಳಿಸಲಾಗಿದೆ ಎಂದು ಜನತೆಗೆ ತಿಳಿಸಬಯಸುತ್ತೇನೆ ಎಂದರು.
ಇದಲ್ಲದೇ ಕಾರವಾರದಲ್ಲಿ ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಕುಸಿದು ಬಿದ್ದಿದ್ದ ಕಾಳಿ ಸೇತುವೆಯ ಅವಶೇಷಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲಾಗಿದೆ. ಇಲ್ಲಿಯೂ ಹೊಸ ಸೇತುವೆ ನಿರ್ಮಾಣಕ್ಕೆ ಆದಷ್ಟು ಶೀಘ್ರದಲ್ಲಿ ಮಂಜೂರಾತಿ ಪಡೆದುಕೊಳ್ಳಲು ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.
ಇನ್ನು ಜಿಲ್ಲೆಯ ಜನರ ಆಶೋತ್ತರಗಳಿಗೆ ಕೇಂದ್ರ ಸರ್ಕಾರದ ಭಾಗವಾಗಿ ನಾನು ಸದಾಕಾಲ ಸ್ಪಂದಿಸುತ್ತಿದ್ದು, ಕೇಂದ್ರ ಸರ್ಕಾರದ ಚತುಷ್ಪಥ ಹೆದ್ದಾರಿ ಕಾಮಗಾರಿ ಯೋಜನೆ ಪೂರ್ಣರೂಪದಲ್ಲಿ ಸಾಕಾರಗೊಳ್ಳಲು ಜನತೆಯ ಸಹಕಾರ ಕೋರುತ್ತೇನೆ. ಅದರಂತೆಯೆ ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ರಾಜ್ಯ ಸರಕಾರದಿಂದ ಅಗತ್ಯ ಸಹಕಾರ ಕಾಮಗಾರಿ ಮುಂದುವರಿಯಲು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೂಡ ಸಹಕಾರ ನೀಡಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications