ಕುಮಟಾದಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ಅನಿಲ ಸೋರಿಕೆ
ಕುಮಟಾ, ಸೆಪ್ಟೆಂಬರ್ 26: ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿರುವ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ ಹಂದಿಗೋಣ ಗ್ರಾಮದ ಬಳಿ ನಡೆದಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ. ಹೀಗಾಗಿ ಯಾರನ್ನೂ ಸಮೀಪ ಬಿಡುತ್ತಿಲ್ಲ. ಇದರೊಂದಿಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸಲಾಗುತ್ತಿಲ್ಲ.
ಟ್ಯಾಂಕರ್ ಬಿದ್ದ ಸ್ಥಳದಿಂದ ಎರಡೂ ಕಡೆ ಅರ್ಧ ಕಿಲೋ ಮೀಟರ್ ದೂರದಲ್ಲಿ ವಾಹನಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಸುಮಾರು 4 ಕಿ.ಮೀ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಮುಂಜಾಗ್ರತಾ ಕ್ರಮವಾಗಿ ಸಮೀಪದ ಮನೆಗಳಲ್ಲಿ ವಿದ್ಯುತ್ ಉಪಕರಣಗಳನ್ನು ಬಳಸದಂತೆ ಹಾಗೂ ಬೆಂಕಿ ಹಚ್ಚದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications