ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರ; ಪ್ರೇಯಸಿಯನ್ನೇ ಅಪಹರಿಸಿದ ಪ್ರಿಯಕರ!

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜೂನ್ 1: ತಮ್ಮ ಪ್ರೀತಿಗೆ ಕುಟುಂಬ ಸದಸ್ಯರು ಒಪ್ಪಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ತಾನು ಪ್ರೀತಿಸಿದ ಯುವತಿಯನ್ನು ಮನೆಯವರ ಕಣ್ಣುತಪ್ಪಿಸಿ ಯುವಕನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಕೊಡ್ನಣಿ ಗ್ರಾಮದಲ್ಲಿ ನಡೆದಿದೆ.

ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಯುವತಿಯ ಪೋಷಕರು ದೂರು ದಾಖಲಿಸಿದ್ದು, ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ.

ಕಾರವಾರ: ವೈದ್ಯರ ನಿರ್ಲಕ್ಷ್ಯಕ್ಕೆ, ಜ್ವರದಿಂದ ಬಳಲುತ್ತಿದ್ದ ನವ ವಿವಾಹಿತೆ ಸಾವು ಕಾರವಾರ: ವೈದ್ಯರ ನಿರ್ಲಕ್ಷ್ಯಕ್ಕೆ, ಜ್ವರದಿಂದ ಬಳಲುತ್ತಿದ್ದ ನವ ವಿವಾಹಿತೆ ಸಾವು

ಹುಲೇಕಲ್ ಗ್ರಾಮದ ಯುವತಿ ಮತ್ತು ಕುಮಟಾ ತಾಲೂಕಿನ ಕೋಡ್ಕಣಿ ಗ್ರಾಮದ ಸುಬ್ರಹ್ಮಣ್ಯ ಭಂಡಾರಿ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ವಿಷಯ ಮನೆಯವರಿಗೆ ಗೊತ್ತಾಗಿದ್ದು, ಇಬ್ಬರನ್ನೂ ಬೇರ್ಪಡಿಸಿದ್ದರು. ಇದರಿಂದ ಕೆರಳಿದ ಯುವಕ ತನ್ನ ಪ್ರೇಯಸಿಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎನ್ನುವುದು ಪೋಷಕರ ಆರೋಪವಾಗಿದೆ.

 Girl Kidnapped by her Lover in Uttar Kannada: Parents file Complaint

ಸಂಬಂಧಿಕರ ಮನೆಗೆ ತೆರಳಿದಾಗ ಎಸ್ಕೇಪ್: ಕಳೆದ ಮೇ 31ರಂದು ಯುವತಿ ತನ್ನ ಸಂಬಂಧಿಕರ ಮನೆಗೆ ತೆರಳಿದ್ದರು. ಇದೇ ಸಮಯವನ್ನು ಕಾಯುತ್ತಿದ್ದ ಯುವಕ ಮನೆಯಲ್ಲಿದ್ದ ವೃದ್ಧನ ಮೇಲೆ ಹಲ್ಲೆ ಮಾಡಿ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ಸೆರೆಗೆ ಬಲೆ ಬೀಸಿದ ಪೊಲೀಸರು: ಯುವತಿ ಪೋಷಕರು ನೀಡಿರುವ ಅಪಹರಣದ ಕೇಸ್ ದಾಖಲಿಸಿಕೊಂಡಿರುವ ಕುಮಟಾ ಠಾಣೆ ಪೊಲೀಸರು ಆರೋಪಿ ಸುಬ್ರಹ್ಮಣ್ಯ ಭಂಡಾರಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಇನ್ನೊಂದು ಕಡೆ ಕಿಡ್ನಾಪ್ ಆಗಿರುವ ಯುವತಿಯ ಪತ್ತೆಗೂ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

Recommended Video

U. T. Khader: ಹಿಜಾಬ್ ವಿವಾದ; 'ವಿದ್ಯಾರ್ಥಿನಿಯರಿಗೆ ಬುದ್ದಿ ಹೇಳಲು ನಾವ್ಯಾರು? | #Politics |OneIndia Kannada

English summary
Girl Kidnapped by her Lover in Uttar Kannada: Parents file Complaint. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X