ಮುಂಜಾಗ್ರತೆ ವಹಿಸಿ ಮೀನುಗಾರಿಕೆಗೆ ಅವಕಾಶ ನೀಡಲಿ: ಅಸ್ನೋಟಿಕರ್
ಕಾರವಾರ, ಏಪ್ರಿಲ್ 05: ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಲಾಕ್ ಡೌನ್ ಮಾಡಲಾಗಿದ್ದು, ಮೀನುಗಾರಿಕೆ ಮಾಡದಂತೆ ಆದೇಶ ಮಾಡಿರುವುದರಿಂದ ಮೀನುಗಾರರು ದುಡಿಮೆ ಇಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಿ, ಮುಂಜಾಗ್ರತಾ ಕ್ರಮ ಕೈಗೊಂಡು ಮೀನುಗಾರಿಕೆಗೆ ಅವಕಾಶ ನೀಡಲಿ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಆಗ್ರಹಿಸಿದ್ದಾರೆ.
ಮೂರ್ನಾಲ್ಕು ಮೀನುಗಾರರು ತೆರಳಿ ಮೀನುಗಾರಿಕೆ ಮಾಡಿಕೊಂಡು ಬರಲು ಮುಂಜಾಗ್ರತಾ ಕ್ರಮ ಕೈಗೊಂಡು ಅವಕಾಶ ಕೊಡಬೇಕು. ಇದರೊಟ್ಟಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನುಗಾರ ಮಹಿಳೆಯರಿಗೆ ಮೀನು ಮಾರಲು ಅವಕಾಶ ಮಾಡಿಕೊಡಿ. ಮೀನುಗಾರಿಕೆ ಪ್ರಾರಂಭಿಸಿದರೆ ತಾಜಾ ಮೀನುಗಳನ್ನು ಮನೆ ಮನೆಗೆ ಹೋಗಿ ಮಹಿಳೆಯರು ಮಾರಾಟ ಮಾಡಿ ಜೀವನ ಸಾಗಿಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.
""ಕರಾವಳಿ ಭಾಗಕ್ಕೆ ಮೀನುಗಾರರೇ ಅನ್ನದಾತರು. ಕರಾವಳಿ ಭಾಗದಲ್ಲಿ ಕೃಷಿ ಕಡಿಮೆ. ಮತ್ಸ್ಯ ಕೃಷಿಯೇ ಹೆಚ್ಚಾಗಿರುವುದರಿಂದ ಮೀನುಗಾರರನ್ನು ಕೃಷಿಕರೆಂದು ಪರಿಗಣಿಸಬೇಕು. ಈ ಬಾರಿ ಹವಾಮಾನ ವೈಪರೀತ್ಯದಿಂದ ಮೀನುಗಾರಿಕೆ ಸರಿಯಾಗದೆ, ಮೀನುಗಾರಿಕೆಗೆ ತೆರಳಿದಾಗಲೂ ಮೀನು ಬೀಳದೆ ಜಿಲ್ಲೆಯ ಎಲ್ಲಾ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೋಟ್, ಬಲೆ ಖರೀದಿಗೆ ಸಾಲ ಮಾಡಿ ಹಣ ಕಟ್ಟಲು ಆಗದೇ ಆತಂಕದಲ್ಲಿದ್ದಾರೆ'' ಎಂದು ಹೇಳಿದ್ದಾರೆ.

""ಸರ್ಕಾರ ಈ ಬಗ್ಗೆ ಗಮನಹರಿಸಿ ಮೀನುಗಾರರ ಸಾಲ ಮನ್ನಾ ಮಾಡಬೇಕು. ಅಲ್ಲದೇ ಕೊರೊನಾ ವೈರಸ್ ತುರ್ತು ಪರಿಸ್ಥಿತಿ ಇರುವ ಸಂದರ್ಭದಲ್ಲಿ ಮೀನುಗಾರ ಕುಟುಂಬದವರು ದುಡಿಮೆ ಇಲ್ಲದೇ ಸಂಕಷ್ಟದಲ್ಲಿರುವುದರಿಂದ ಅವರಿಗೆ ಆರ್ಥಿಕ ಸಹಾಯ ಮಾಡಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು'' ಎಂದು ಆಗ್ರಹಿಸಿದ್ದಾರೆ.
""ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಗಣಪತಿ ಮಾಂಗ್ರೆ ಹಾಗೂ ಇತರೆ ಮೀನುಗಾರಿಕಾ ಸಂಘಟನೆಯ ಅಧ್ಯಕ್ಷರುಗಳು, ಮುಖಂಡರುಗಳು ಎಲ್ಲರೂ ಆತಂಕದಲ್ಲಿರುವ ಮೀನುಗಾರರಿಗೆ ಧೈರ್ಯ ತುಂಬಬೇಕು'' ಎಂದು ಮನವಿ ಮಾಡಿಕೊಂಡಿರುವ ಅವರು,

""ನಾನು ಸಹ ಪ್ರತಿನಿತ್ಯ ಹಲವು ಮೀನುಗಾರರಿಗೆ ಕರೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಮೀನುಗಾರರ ಜೊತೆ, ಅವರ ನೋವಿಗೆ ನಮ್ಮ ಕುಟುಂಬ ಸದಾ ಇರುತ್ತದೆ. ಸರ್ಕಾರ ಕೂಡಲೇ ಸಂಕಷ್ಟದಲ್ಲಿರುವ ಮೀನುಗಾರರ ನೆರವಿಗೆ ಬರಬೇಕು'' ಎಂದು ಒತ್ತಾಯಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications