ಅಂಜುದೀವ್ ದ್ವೀಪಕ್ಕೆ ಪ್ರವೇಶ ನೀಡಲು ಗೋವನ್ನರ ಒತ್ತಾಯ
ಕಾರವಾರ, ಫೆಬ್ರವರಿ 3: ಕಾರವಾರದ ಸೀಬರ್ಡ್ ನೌಕಾನೆಲೆ ಸುಪರ್ದಿಯಲ್ಲಿರುವ ಕಾರವಾರ-ಗೋವಾ ಸಮೀಪದ ಅಂಜುದೀವ್ ದ್ವೀಪಕ್ಕೆ ಗೋವಾ ರಾಜ್ಯದ ಕ್ರೈಸ್ತ ಸಮುದಾಯದವರು ಪ್ರವೇಶ ನೀಡುವಂತೆ ನೌಕಾ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಹಿಂದೆ ಸ್ಥಳೀಯ ಹಿಂದೂ ಹಾಗೂ ಕ್ರಿಶ್ಚಿಯನ್ ಸಮುದಾಯದವರು ಈ ಅಂಜುದೀವ್ ದ್ವೀಪದಲ್ಲಿನ ದೇವಸ್ಥಾನ ಹಾಗೂ ಚರ್ಚ್ಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ನೌಕಾನೆಲೆ ನಿರ್ಮಾಣವಾದ ಬಳಿಕ ಭದ್ರತಾ ದೃಷ್ಟಿಯಿಂದ ದ್ವೀಪಕ್ಕೆ ಸಾರ್ವಜನಿಕರ ಪ್ರವೇಶವನ್ನು ನೌಕಾನೆಲೆ ನಿರ್ಬಂಧಿಸಿತ್ತು. ಆದರೆ ಇದೀಗ ಅದೇ ದ್ವೀಪಕ್ಕೆ ಭೇಟಿ ನೀಡಲು ಅವಕಾಶ ನೀಡುವಂತೆ ಕ್ರಿಶ್ಚಿಯನ್ ಸಮುದಾಯ ಬೇಡಿಕೆ ಇಟ್ಟಿದೆ.

ಆರ್ಯದುರ್ಗಾ ದೇವಿ ದೇವಸ್ಥಾನದಲ್ಲಿ ಪೂಜೆ
ಈ ಹಿಂದೆ ಪೊರ್ಚುಗೀಸರ ಆಡಳಿತ ಇದ್ದ ಸಂದರ್ಭದಲ್ಲಿ ಕಾರವಾರ, ಗೋವಾ ಭಾಗದ ಕ್ರಿಶ್ಚಿಯನ್ನರು ಪ್ರತಿವರ್ಷ ಒಂದು ದಿನ ದ್ವೀಪಕ್ಕೆ ಆಗಮಿಸಿ ಚರ್ಚ್ ನಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತೆರಳುತ್ತಿದ್ದರು. ಅಲ್ಲದೇ ಸ್ಥಳೀಯ ಮೀನುಗಾರರು ಹಾಗೂ ವಿವಿಧ ಸಮುದಾಯದವರು ಇಲ್ಲಿನ ಆರ್ಯದುರ್ಗಾ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದರು.

ಭದ್ರತಾ ದೃಷ್ಟಿಯಿಂದ ದ್ವೀಪಕ್ಕೆ ಸಾರ್ವಜನಿಕರಿಗೆ ನಿರ್ಬಂಧ
1991ರಲ್ಲಿ ಕಾರವಾರದಲ್ಲಿ ಕದಂಬ ನೌಕಾನೆಲೆ ಯೋಜನೆ ವ್ಯಾಪ್ತಿಗೆ ದ್ವೀಪ ಹಸ್ತಾಂತರವಾಗಿದ್ದು, ಕಾಮಗಾರಿ ವೇಳೆ ಸಾರ್ವಜನಿಕರಿಗೆ ದ್ವೀಪಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗಿತ್ತು. ಬಳಿಕ 2000ರ ನಂತರ ಕದಂಬ ನೌಕಾನೆಲೆ ಭದ್ರತಾ ದೃಷ್ಟಿಯಿಂದ ದ್ವೀಪಕ್ಕೆ ಸಾರ್ವಜನಿಕರಿಗೆ ನಿರ್ಬಂಧವನ್ನು ವಿಧಿಸಿತ್ತು.

ಪ್ರಾರ್ಥನೆ ಸಲ್ಲಿಸಿ ತೆರಳಲು ಅವಕಾಶ ನೀಡಬೇಕು
ಅದರಂತೆ ಅಲ್ಲಿನ ಚರ್ಚ್ ಹಾಗೂ ದೇವಸ್ಥಾನಗಳಿಗೂ ಸಾರ್ವಜನಿಕರು ಆಗಮಿಸದಂತೆ ನಿಷೇಧವನ್ನು ಹೇರಿದೆ. ಆದರೆ ಆ ಪ್ರದೇಶ ಧಾರ್ಮಿಕ ಭಾವನೆಯಿಂದ ಕೂಡಿದ್ದು, ವರ್ಷಕ್ಕೆ ಎರಡು ಬಾರಿಯಾದರೂ ತಮಗೆ ಪ್ರಾರ್ಥನೆ ಸಲ್ಲಿಸಿ ತೆರಳಲು ಅವಕಾಶ ನೀಡಬೇಕು ಎಂದು ಗೋವಾ ಮೂಲದ ಕ್ರಿಶ್ಚಿಯನ್ ಸಮುದಾಯದವರು ಮನವಿ ಮಾಡಿದ್ದಾರೆ.
Recommended Video

ನೌಕಾ ದಿನದಂದು ನೌಕಾನೆಲೆ ವೀಕ್ಷಣೆಗೆ ಅವಕಾಶ
ಇಲ್ಲಿ ಪೋರ್ಚುಗೀಸರ ಕಾಲದಲ್ಲಿ ನಿರ್ಮಾಣವಾಗಿದ್ದ ಅವರ್ ಲೇಡಿ ಆಫ್ ಬ್ರೋಥಾಸ್ ಚರ್ಚ್ ಇದ್ದು, ಪ್ರತಿವರ್ಷ ಫೆಬ್ರುವರಿ 2ರಂದು ಗೋವಾ ಕ್ರಿಶ್ಚಿಯನ್ನರು ಹಾಗೂ ಸ್ಥಳೀಯರು ಸೇರಿ ಫೆಸ್ಟ್ ಆಚರಿಸುತ್ತಿದ್ದರು. ಆದರೆ ನೌಕಾನೆಲೆ ಬಂದ ಬಳಿಕ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಧಾರ್ಮಿಕ ಆಚರಣೆಗೆ ಅಡ್ಡಿಯುಂಟಾದಂತಾಗಿದೆ. ವರ್ಷಕ್ಕೊಮ್ಮೆ ನೌಕಾ ದಿನದಂದು ನೌಕಾನೆಲೆ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗುತ್ತದೆ. ಅದರಂತೆ ಫೆಸ್ಟ್ ಸಂದರ್ಭದಲ್ಲಿ ತಮಗೆ ದ್ವೀಪಕ್ಕೆ ಆಗಮಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ನೌಕಾನೆಲೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications