Get Updates
Get notified of breaking news, exclusive insights, and must-see stories!

ಗೋಕರ್ಣ: ಈಜಲು ಹೋದ ಇಬ್ಬರು ಬಾಲಕರು ಸಮುದ್ರ ಪಾಲಾದರು

ಕಾರವಾರ, ಸೆಪ್ಟೆಂಬರ್ 17: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕರಿಯಪ್ಪನ ಕಟ್ಟೆ ಕಡಲತೀರ ಪ್ರದೇಶದಲ್ಲಿ ನಡೆದಿದೆ.

ಪ್ರವಾಸಿಗರಾದ ಮೈಸೂರಿನ ಸುಹಾಸ್(17) ಹಾಗೂ ಈತನೊಂದಿಗೆ ಬಂದಿದ್ದ ಮಂಡ್ಯ ಮೂಲದ ಉಲ್ಲಾಸ್ (15) ಸಮುದ್ರದಲ್ಲಿ ಕಾಣಿಯಾದ ಬಾಲಕರಾಗಿದ್ದಾರೆ. ಒಟ್ಟು 8 ಜನರ ತಂಡ ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದರು.

ಈ ವೇಳೆ ಖಾಸಗಿ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಇವರು, ಇಂದು ಬೆಳಿಗ್ಗೆ ಸ್ನಾನಕ್ಕೆಂದು ಸಮುದ್ರಕ್ಕಿಳಿದಿದ್ದರು. ಅಮವಾಸ್ಯೆ ದಿನವಾಗಿದ್ದರಿಂದ ಸಮುದ್ರದಲ್ಲಿ ಅಲೆಗಳ ಸೆಳೆತ ಹೆಚ್ಚಿರುತ್ತದೆ ಹೀಗಾಗಿ ಸಮುದ್ರದಲ್ಲಿ ಇಳಿಯಬೇಡಿ ಎಂದು ಬಾಲಕರಿಗೆ ಎಚ್ಚರಿಸಲಾಗಿತ್ತು.

Gokarna: Two Tourist Boys Died When Swimming In Kariyappana Katte Beach

ಸ್ಥಳೀಯರ ಮಾತಿಗೆ ಬೆಲೆ ನೀಡದೆ ಬಾಲಕರು ಸಮುದ್ರಕ್ಕಿಳಿದಿದ್ದು, ಈ ವೇಳೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹಾಗೂ ಸೆಳೆತ ಹೆಚ್ಚಿದ್ದರಿಂದ ಇಬ್ಬರು ಬಾಲಕರು ಸಮುದ್ರದೊಳಗೆ ಕೊಚ್ಚಿಹೋಗಿದ್ದಾರೆ.

ಇವರನ್ನು ರಕ್ಷಣೆ ಮಾಡುವ ಪ್ರಯತ್ನ ಮಾಡಿದರೂ ಯುವಕ ಸುಹಾಸ್ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಸಾವು ಕಂಡಿದ್ದಾನೆ. ಇನ್ನೋರ್ವ ಬಾಲಕ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಈತನ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಘಟನೆ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+