ವರನ ಮನೆಯಲ್ಲಿ ವಧುವಿನ ಆಭರಣ ಕಳವು; ಸಿಕ್ಕಿಬಿದ್ದಳು ಚಾಲಾಕಿ!
ಹೊನ್ನಾವರ, ಜುಲೈ 07; ಮದುವೆಯ ದಿನವೇ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯನ್ನು ಪತ್ತೆ ಹಚ್ಚಿರುವ ಹೊನ್ನಾವರ ಪೊಲೀಸರು, ಕದ್ದ ಆಭರಣವನ್ನು ವಶಪಡಿಸಿಕೊಂಡು ಆರೋಪಿಯನ್ನಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೊನ್ನಾವರ ಬಂದರು ರಸ್ತೆಯ ಅಸೂರಖಾನ್ ಗಲ್ಲಿಯ ಶಾಹೀರಾಬಾನು ಪಾಲಕ್ ಕೋಂ ಸಾಧಿಕ್ ಶೇಕ್ (41) ಎಂದು ಗುರುತಿಸಲಾಗಿದೆ. ಏಪ್ರಿಲ್ 4ರಂದು ಮದುವೆಯಾಗಿದ್ದ ಮುಶಾಹೀನ್ ವರನ ಮನೆಯಿರುವ ಹೊನ್ನಾವರ ಪಟ್ಟಣದ ಗಾಂಧಿನಗರಕ್ಕೆ ಬಂದಾಗ ಮದುವೆ ಶಾಸ್ತ್ರಗಳನ್ನು ಪೂರೈಸಿ ಸ್ನಾನಗೃಹಕ್ಕೆ ಹೋಗುವಾಗ ಬೆಡ್ ರೂಮಿನಲ್ಲಿ ತೆಗೆದಿಟ್ಟು ಹೋಗಿದ್ದ ಆಭರಣ ವಾಪಸ್ ಬಂದು ನೋಡುವಷ್ಟರಲ್ಲಿ ಮಾಯವಾಗಿತ್ತು.
ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಗೆ ಕರ್ಕಿಕೋಡಿಯ ಅಬ್ದುಲ್ ಸತ್ತಾರ್ ಮೈನುದ್ದೀನ್ ಶೇಖ್ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಬಂಗಾರದ ಆಭರಣ ಕಳ್ಳತನವಾಗಿದೆ ಎಂಬ ಸಮಯದಲ್ಲಿ ಮನೆಯಲ್ಲಿ ಇದ್ದವರ ಮಾಹಿತಿ ಕಲೆ ಹಾಕಿ ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ಪರಿಶೀಲಿಸಿದಾಗ ಸಿಕ್ಕ ಸುಳಿವುಗಳು ಶಾಹೀರಾಬಾನು ಅತ್ತಲೇ ಬೆರಳು ಮಾಡುತ್ತಿದ್ದವು.

ನಾನವಳಲ್ಲ ನಾನವಳಲ್ಲ; ಮದುಮಗಳಿಗೆ ದೂರದ ಸಂಬಂಧಿಯೂ ಆಗಿದ್ದ ಶಾಹೀರಾಬಾನು ಕದ್ದ ಬಂಗಾರದ ಆಭರಣವನ್ನು ಹುಡುಗನೊಬ್ಬನ ಕೈಗೆ ಕೊಟ್ಟು ಆತನ ಮೂಲಕ ಬ್ಯಾಂಕ್ನಲ್ಲಿ ಅಡವಿಟ್ಟು ಹಣವನ್ನೂ ಪಡೆದುಕೊಂಡಿದ್ದು ತನಿಖೆಯಲ್ಲಿ ಬಹಿರಂಗವಾಗಿದೆ.
ಸಾಕಷ್ಟು ಸಾಕ್ಷಿಗಳನ್ನು ಕಲೆಹಾಕಿದಮೇಲೆಯೇ ಆರೋಪಿಯ ತನಿಖೆಗೆ ಪೊಲೀಸರು ಮುಂದಾದಾಗಲೂ ನಾನವಳಲ್ಲ, ನಾನಂತವಳಲ್ಲ, ನನಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವಾದಿಸುತ್ತ ಬಂದಾಕೆ ತಾನು ಈ ಕೇಸ್ನಲ್ಲಿ ಸಿಕ್ಕಿಹಾಕಿಕೊಳ್ಳುವುದು ಪಕ್ಕಾ ಅನ್ನಿಸಿದಾಗ ಆಭರಣ ಮನೆಯೆದುರು ಬಿದ್ದಿತ್ತು ಎಂದು ಪೊಲೀಸರ ತನಿಖೆಯ ದಿಕ್ಕುತಪ್ಪಿಸಲು ಯತ್ನಿಸಿದ್ದಳು.
ಶಾಹೀರಾಬಾನುನಂತ ಸಾವಿರಾರು ಮಂದಿಯ ನವರಂಗಿ ಆಟವನ್ನು ಕಂಡಿದ್ದ ಪೊಲೀಸರು ಪಟ್ಟು ಸಡಿಲಿಸದೇ ಸಾಕ್ಷ್ಯಗಳನ್ನು ಕಲೆಹಾಕಿ ಕೇಡಿ ಲೇಡಿಯ ಕೈಗೆ ಕೋಳ ತೊಡಿಸಿ ಕಂಬಿಯ ಹಿಂದೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳತನ ಪ್ರಕರಣವನ್ನು ಬೇಧಿಸಿದ ಸಿ.ಪಿ.ಐ ಶ್ರೀಧರ. ಎಸ್. ಆರ್ ನೇತೃತ್ವದ, ಅಪರಾಧ ವಿಭಾಗದ ಪಿ.ಎಸ್.ಐ ಸಾವಿತ್ರಿ ನಾಯಕ, ಪಿ.ಎಸ್.ಐ(ಕಾ.ಸು) ಶಶಿಕುಮಾರ್ ಸಿ. ಆರ್ ಮುಂತಾದವರ ಕಾರ್ಯಕ್ಕೆ ಎಸ್ಪಿ ಶಿವಪ್ರಕಾಶ ದೇವರಾಜು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications