ಫೋಟೋ ವೈರಲ್ : ಸರ್ಕಾರಿ ಕಾರು ಮದುವೆ ಕಾರ್ಯಕ್ರಮಕ್ಕೆ ಬಳಕೆ
ಕಾರವಾರ, ಜೂನ್.19 : ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಕಾರೊಂದು ನಗರದಲ್ಲಿ ಮದುವೆ ದಿಬ್ಬಣಕ್ಕೆ ಬಳಕೆಯಾಗಿರುವ ಕುರಿತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಎ 30 ಎ1787 ನೋಂದಣಿ ಸಂಖ್ಯೆ ಹೊಂದಿರುವ ಕಾರು ಮದುವೆಯ ಬೋರ್ಡ್ ಅಳವಡಿಸಿಕೊಂಡು ನಗರದಲ್ಲಿ ಸಂಚಾರ ನಡೆಸಿದೆ. ಅಷ್ಟಕ್ಕೂ ಈ ಕಾರು ಯಾವಾಗ ಬಳಕೆಯಾಗಿದೆ? ಯಾರು ಬಳಸಿಕೊಂಡಿದ್ದಾರೆ? ಇದು ಮಾಲೀಕರಿಗೆ ತಿಳಿದೇ ಆಗಿದೆಯೇ ಅಥವಾ ಚಾಲಕನೇ ದುರುಪಯೋಗ ಪಡಿಸಿಕೊಂಡಿದ್ದಾನೆಯೇ ಎನ್ನುವುದು ಈವರೆಗೆ ತಿಳಿದು ಬಂದಿಲ್ಲ.
ಇಲ್ಲಿನ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ವಿ.ಎಂ.ಹೆಗಡೆ ಅವರ ಕರ್ತವ್ಯಕ್ಕೆ ಈ ಕಾರನ್ನು ಹೊರಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳಲಾಗಿದೆ. ಹೀಗಾಗಿ 'ರಾಜ್ಯ ಸರ್ಕಾರದ ಸೇವೆಯಲ್ಲಿ' ಎಂಬ ಹಸಿರು ಬೋರ್ಡ್ ಅನ್ನು ಈ ಕಾರಿಗೆ ಅಳವಡಿಸಲಾಗಿದೆ.

ಆದರೆ, ಖಾಸಗಿ ಕಾರ್ಯಕ್ರಮಕ್ಕೆ ಸರ್ಕಾರಿ ಕರ್ತವ್ಯಕ್ಕೆ ನಿಯೋಜಿತ ವಾಹನ ಬಳಕೆ ಆಗಿದೆ ಎಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆರೋಪಿಸಿದ್ದಾರೆ.
ಹೊರಗುತ್ತಿಗೆಯ ಈ ಕಾರು ಪ್ರತಿ ತಿಂಗಳು 2,500ಕಿ.ಮೀ ಓಡಬೇಕು. ಇಷ್ಟು ಓಡಿಲ್ಲವೆಂದರೆ ಅವರ ಮಾಸಿಕ 29,500 ರೂ. ಬಾಡಿಗೆಗೆಯಲ್ಲಿ ಕಡಿತ ಮಾಡಲಾಗುತ್ತದೆಯಂತೆ. ಆದರೆ, ಅಧಿಕಾರಿಗಳು ಪ್ರತಿ ತಿಂಗಳು ಇಷ್ಟು ದೂರ ಓಡಾಡುವುದಿಲ್ಲ. ಹೀಗಾಗಿ, ನಿಗದಿತ ದೂರವನ್ನು ಕ್ರಮಿಸಲು ಚಾಲಕರು ಈ ರೀತಿ ಖಾಸಗಿ ಕಾರ್ಯಕ್ರಮಗಳಿಗೆ ವಾಹನವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
ಇದೀಗ ಟೆಂಡರ್ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಕಾರಿನ ಮಾಲೀಕರಿಗೆ ನೋಟಿಸ್ ಕಳುಹಿಸಲು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ತಿಳಿಸಿದ್ದಾರೆ. ಜತೆಗೆ, ಸರ್ಕಾರಿ ವಾಹನಗಳು ಹಾಗೂ ಚಾಲಕರ ಮೇಲೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications