ಲೋಕಲ್ ಫೈಟ್: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿ
ಕಾರವಾರ, ಡಿಸೆಂಬರ್ 30: ಉತ್ತರ ಕನ್ನಡ ಜಿಲ್ಲೆಯ 227 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ನಡೆದಿದ್ದ ಚುನಾವಣೆಯ ಮತ ಎಣಿಕೆ ಸದ್ಯ ಪ್ರಗತಿಯಲ್ಲಿದೆ. ಈಗಾಗಲೇ ಬಂದಿರುವ ಫಲಿತಾಂಶಗಳ ಆಧಾರದಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಕ್ಷಗಳು ಬರುವುದಿಲ್ಲವಾದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೆಂಬಲಿತರು ಪಕ್ಷೇತರರಾಗಿ ಪಕ್ಷದ ತೀರ್ಮಾನದಂತೆ ಸ್ಪರ್ಧಾ ಕಣದಲ್ಲಿದ್ದರು. ಈ ಪೈಕಿ ಸಾಕಷ್ಟು ಮಂದಿ ಬಂಡಾಯ ಅಭ್ಯರ್ಥಿಗಳೂ ಕಣದಲ್ಲಿದ್ದು, ಪಕ್ಷದ ತೀರ್ಮಾನದಂತೆ ಕಣಕ್ಕಿಳಿದಿದ್ದವರಿಗೆ ಪಕ್ಷಗಳ ಕಾರ್ಯಕರ್ತರು ಪ್ರಚಾರ ನಡೆಸಿ, ಗೆಲುವಿಗಾಗಿ ಶ್ರಮಿಸಿದ್ದರು.
ಒಟ್ಟು 2,662 ಸ್ಥಾನಗಳ ಪೈಕಿ 184 ಮಂದಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದರು. 11 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯಾಗಿದೇ ಖಾಲಿ ಉಳಿದಿದ್ದು, 2,467 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ 7,187 ಅಭ್ಯರ್ಥಿಗಳಿಗೆ ಮತದಾರರು ನೀಡಿದ್ದ ಮತಗಳ ಎಣಿಕೆ ಪ್ರಗತಿಯಲ್ಲಿದೆ.

ಈಗಾಗಲೇ ಶೇ.30ರಷ್ಟು ಮತ ಎಣಿಕೆ ಕಾರ್ಯ ಮುಗಿದಿದ್ದು, ಈ ಪೈಕಿ ಬಹುತೇಕ ಕಡೆ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಮೊದಲಿನಂದಲೂ ಬಹುತೇಕ ಕ್ಷೇತ್ರಗಳಲ್ಲಿ ಸ್ಥಾನಗಳನ್ನು ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಈ ಬಾರಿ ದ್ವಿತೀಯ ಸ್ಥಾನಕ್ಕೆ ಇಳಿದಿದೆ. ಜೆಡಿಎಸ್ ನಗಣ್ಯವಾಗಿದ್ದು, ಅತೀ ಕಡಿಮೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಒಟ್ಟಾರೆಯಾಗಿ ರಾತ್ರಿಯ ಹೊತ್ತಿಗೆ ಮತ ಎಣಿಕೆಯ ಸ್ಪಷ್ಟ ಚಿತ್ರಣ ಸಿಗಲಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ಯಾರಿಗೆ ಗೆಲುವು, ಯಾರಿಗೆ ಸೋಲು ಎಂಬುದು ತಿಳಿದು ಬರಲಿದೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications