ಸರ್ಕಾರಕ್ಕೆ ಸೆಡ್ಡು ಹೊಡೆದ ಹಾಡಗೇರಿಯ ಸ್ವಾಭಿಮಾನಿಗಳು; ಮರುನಿರ್ಮಾಣವಾಯ್ತು ಗ್ರಾಮಸೇತು
ಕಾರವಾರ, ಜೂನ್ 29: ಸಂಪರ್ಕ ಸಾಧನವಾಗಿದ್ದ ಕಾಲು ಸಂಕ ಮಳೆಯ ನೀರಿಗೆ ಕೊಚ್ಚಿಹೋಗಿ ಊರಿಗೆ ಊರೇ ಕಷ್ಟದಲ್ಲಿರುವಾಗ ಜನರ ಕೈ ಹಿಡಿಯಬೇಕಿದ್ದ ಆಳುವ ಸರ್ಕಾರ ಅಸಡ್ಡೆ ಮಾಡಿತಾದರೂ, ಇದರಿಂದ ವಿಚಲಿತರಾಗಿ ಕೈಕಟ್ಟಿ ಕೂರದ ಯುವಕರು ಸರ್ಕಾರಕ್ಕೇ ಸೆಡ್ಡು ಹೊಡೆದು ಶ್ರಮದಾನದ ಮೂಲಕ ತಮ್ಮೂರಿನ ಹೊಳೆಗೆ ಮರದ ಸೇತುವೆ ನಿರ್ಮಿಸಿ ಸ್ವಾಭಿಮಾನ ಮೆರೆದಿದ್ದಾರೆ.
ಇಂತಹದ್ದೊಂದು ಘಟನೆ ನಡೆದಿದ್ದು ಬೇರಾವುದೋ ರಾಜ್ಯದಲ್ಲಲ್ಲ. ನಮ್ಮದೇ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಗರಬಸ್ತಿಕೇರಿ ಪಂಚಾಯತ ವ್ಯಾಪ್ತಿಗೆ ಸೇರಿದ ಹಾಡಗೇರಿಯಲ್ಲಿ. ಪಶ್ಚಿಮಘಟ್ಟದ ಸೆರಗಿನಲ್ಲಿ ಸೂರ್ಯನ ಕಿರಣ ನೆಲಕ್ಕೆ ತಾಗದಷ್ಟು ದಟ್ಟವಾಗಿರುವ ಕಾಡಿನ ನಡುವೆ ಕಳೆದುಹೋದಂತಿರುವ ಊರಿನಲ್ಲಿ ಬದುಕು ಕಟ್ಟಿಕೊಂಡವರ ಕಷ್ಟ ಮನೆಬಾಗಿಲಿಗೆ ರಸ್ತೆ, ನೀರು ಸವಲತ್ತಿರುವವರಿಗೆ ಸುಲಭವಾಗಿ ಅರ್ಥವಾಗುವುದಿಲ್ಲ.

ಮಳೆಗಾಲ ಆರಂಭದಲ್ಲಿಯೇ ಆಘಾತ
ಹಲವು ಇಲ್ಲಗಳನ್ನು ಬೆನ್ನಿಗೆ ಕಟ್ಟಿಕೊಂಡು ದಿನದೂಡುತ್ತಿದ್ದವರಿಗೆ ಈ ವರ್ಷದ ಮಳೆಗಾಲ ಆರಂಭದಲ್ಲಿಯೇ ಆಘಾತವನ್ನುಂಟು ಮಾಡಿತ್ತು. ಹೊಳೆ ದಾಟುವುದಕ್ಕೆ ಗ್ರಾಮಸ್ಥರೇ ಸ್ವತಃ ಕಟ್ಟಿಕೊಂಡಿದ್ದ ಮರದ ಸೇತುವೆಯ ಮೇಲೆ ಬೃಹತ್ ಮರ ಉರುಳಿ ಸಂಕ ನೆಲಸಮವಾಗಿತ್ತು. ಮಾತ್ರವಲ್ಲ, ಪೂರ್ತಿ ಸಂಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು.

40 ಮಂದಿ ಮೂರು ದಿನ ಹಗಲು- ರಾತ್ರಿ ಶ್ರಮಪಟ್ಟರು
ಊರಿಗೆ ಸಂಪರ್ಕ ಕಡಿತವಾದಾಗ ಒಂದೆರಡು ದಿನ ಮನೆಯಲ್ಲಿಯೇ ಕುಳಿತ ಜನರು ನಂತರ ಮಳೆ ಕಡಿಮೆಯಾಗಿ ಸ್ವಲ್ಪ ನೀರಿಳಿದಾಗ ಬೈಕ್ನ್ನು ಮರದ ತುಂಡಿಗೆ ಕಟ್ಟಿಕೊಂಡು ಆರೇಳು ಜನ ಸೇರಿ ಸೊಂಟಮಟ್ಟ ನೀರನ್ನು ಹಾದು ಆಚೆ ದಡ ಸೇರುವ ಸಾಹಸ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈಗಿನ್ನೂ ಮಳೆಗಾಲದ ಆರಂಭ ಮಾತ್ರ ಹೊಳೆಯನ್ನು ಹಾದು ಆಚೆಗೆ ಹೋಗುವಂತಹ ಹುಚ್ಚು ಸಾಹಸಗಳನ್ನು ಹೆಚ್ಚು ದಿನ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಮನಗಂಡು, ಊರವರೆಲ್ಲಾ ಒಂದಾಗಿ ಸುಮಾರು 40 ಮಂದಿ ಮೂರು ದಿನ ಹಗಲು- ರಾತ್ರಿ ಶ್ರಮಪಟ್ಟು ಹೊಸ ಕಾಲು ಸಂಕವನ್ನು ನಿರ್ಮಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮಸ್ಥರಿಗೆ ನೆರವಾದ ಉದಯ ನಾಯ್ಕ
ಅದೆಷ್ಟೇ ಕಷ್ಟಪಟ್ಟರೂ ಜನರ ಕೈ ಸೋಲುತ್ತಿದ್ದಾಗ ಉದಯ ನಾಯ್ಕ ಎಂಬ ಮಹಾನುಭಾವ ಜನರೊಟ್ಟಿಗೆ ಗಟ್ಟಿಯಾಗಿ ನಿಂತು ಗ್ರಾಮಸೇತುವೆ ಪೂರ್ಣಗೊಳ್ಳಲು ನೆರವಾಗಿದ್ದನ್ನು, ಅಗತ್ಯವಿರುವ ಕಟ್ಟಿಗೆಯನ್ನು ಕಾಡಿನಿಂದ ಬಳಸಿಕೊಳ್ಳಲು ಸಹಕಾರ ನೀಡಿದ ಅರಣ್ಯ ಇಲಾಖೆಯ ನೆರವನ್ನು ಗ್ರಾಮಸ್ಥರು ಕೃತಜ್ಞತೆಯಿಂದ ಸ್ಮರಿಸುತ್ತಾರೆ. ಆಳುವ ಸರ್ಕಾರ, ಆಡಳಿತಯಂತ್ರ ಯಾವುದೊಂದೂ ಕಣ್ಣೆತ್ತಿ ನೋಡದಿದ್ದರೂ ಕೊಚ್ಚಿಹೋದ ಸೇತುವೆಯನ್ನು ಅದೇ ಜಾದಲ್ಲಿ ಕಟ್ಟಿ ನಿಲ್ಲಿಸಿದ ಹಳ್ಳಿ ಹೈದರು, ಜನಸಾಮಾನ್ಯರ ಉದ್ಧಾರಕರು ತಾವು ಎಂದು ಹೇಳಿಕೊಂಡು ತಿರುಗುವವರೇ ನಾಚಿಕೆಪಟ್ಟುಕೊಳ್ಳಬೇಕು ಅಂತಹ ಅದ್ಭುತ ಸಾಧನೆ ಮಾಡಿದ್ದಾರೆನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
Recommended Video

ಪುಟ್ಟ ಪುಟ್ಟ ಸೇತುವೆಗಳ ಅಗತ್ಯ ಜಿಲ್ಲೆಗಿದೆ
ಸಂಪೂರ್ಣ ಕರಾವಳಿಯೂ ಅಲ್ಲದ ಅತ್ತ ಪೂರ್ತಿ ಮಲೆನಾಡೂ ಅಲ್ಲದ ಜಿಲ್ಲೆಯಲ್ಲಿ ಊರಿಗೊಂದು, ಮಾರಿಗೊಂದು ಹಳ್ಳವಿದೆ, ಹೊಳೆಗಳಿವೆ. ಬೇಸಿಗೆಯಲ್ಲಿ ಪೊರೆ ಬಿಟ್ಟ ಹಾವಿನಂತೆ ತಣ್ಣಗೆ ಸಪ್ಪಳವಿಲ್ಲದೆ ಹರಿಯುವ ನೀರು ಮಳೆಗಾಲದಲ್ಲಿ ಸಾವಿರ ಪಟ್ಟು ಹೆಚ್ಚು ಶಕ್ತಿಯನ್ನು ಪಡೆದು ಎದುರಿಗೆ ಸಿಕ್ಕ ಎಲ್ಲವನ್ನೂ ಆಪೋಶನ ತೆಗೆದುಕೊಳ್ಳುವ ರಭಸದಲ್ಲಿ ಮುನ್ನುಗ್ಗುವ ನೀರಿನ ಅಪಾಯ ಎದುರಾಗುವುದು ಏನಿದ್ದರೂ ಮಳೆಗಾಲದಲ್ಲಿಯೇ.
ಹಾಗಾಗಿಯೇ ಮಳೆಗಾಲದಲ್ಲಿ ಜೋರಾಗಿ ಕೇಳಿಬರುವ ಕಾಲುಸಂಕ, ಸೇತುವೆಗಳ ಬೇಡಿಕೆ ಬೇಸಿಗೆಯಲ್ಲಿ ತಣ್ಣಗಾಗುತ್ತದೆ. ಮುಂದಿನ ದಿನಗಳಲ್ಲಾದರೂ ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ಲಕ್ಷಣವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚೆಚ್ಚು ಕಾಲುಸಂಕ, ಸಣ್ಣ ಸಣ್ಣ ಸೇತುವೆಗಳನ್ನು ನಿರ್ಮಿಸಿ ಜನರಿಗೆ ಅನುಕೂಲ ಮಾಡಿಕೊಡುವತ್ತ ಜಿಲ್ಲಾಡಳಿತ, ಸಂಬಂಧಪಟ್ಟ ಶಾಸಕರು, ಸಚಿವರು ಆಸಕ್ತಿ ವಹಿಸಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications