ಸರ್ಕಾರಕ್ಕೆ ಸೆಡ್ಡು ಹೊಡೆದ ಹಾಡಗೇರಿಯ ಸ್ವಾಭಿಮಾನಿಗಳು; ಮರುನಿರ್ಮಾಣವಾಯ್ತು ಗ್ರಾಮಸೇತು
ಕಾರವಾರ, ಜೂನ್ 29: ಸಂಪರ್ಕ ಸಾಧನವಾಗಿದ್ದ ಕಾಲು ಸಂಕ ಮಳೆಯ ನೀರಿಗೆ ಕೊಚ್ಚಿಹೋಗಿ ಊರಿಗೆ ಊರೇ ಕಷ್ಟದಲ್ಲಿರುವಾಗ ಜನರ ಕೈ ಹಿಡಿಯಬೇಕಿದ್ದ ಆಳುವ ಸರ್ಕಾರ ಅಸಡ್ಡೆ ಮಾಡಿತಾದರೂ, ಇದರಿಂದ ವಿಚಲಿತರಾಗಿ ಕೈಕಟ್ಟಿ ಕೂರದ ಯುವಕರು ಸರ್ಕಾರಕ್ಕೇ ಸೆಡ್ಡು ಹೊಡೆದು ಶ್ರಮದಾನದ ಮೂಲಕ ತಮ್ಮೂರಿನ ಹೊಳೆಗೆ ಮರದ ಸೇತುವೆ ನಿರ್ಮಿಸಿ ಸ್ವಾಭಿಮಾನ ಮೆರೆದಿದ್ದಾರೆ.
ಇಂತಹದ್ದೊಂದು ಘಟನೆ ನಡೆದಿದ್ದು ಬೇರಾವುದೋ ರಾಜ್ಯದಲ್ಲಲ್ಲ. ನಮ್ಮದೇ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಗರಬಸ್ತಿಕೇರಿ ಪಂಚಾಯತ ವ್ಯಾಪ್ತಿಗೆ ಸೇರಿದ ಹಾಡಗೇರಿಯಲ್ಲಿ. ಪಶ್ಚಿಮಘಟ್ಟದ ಸೆರಗಿನಲ್ಲಿ ಸೂರ್ಯನ ಕಿರಣ ನೆಲಕ್ಕೆ ತಾಗದಷ್ಟು ದಟ್ಟವಾಗಿರುವ ಕಾಡಿನ ನಡುವೆ ಕಳೆದುಹೋದಂತಿರುವ ಊರಿನಲ್ಲಿ ಬದುಕು ಕಟ್ಟಿಕೊಂಡವರ ಕಷ್ಟ ಮನೆಬಾಗಿಲಿಗೆ ರಸ್ತೆ, ನೀರು ಸವಲತ್ತಿರುವವರಿಗೆ ಸುಲಭವಾಗಿ ಅರ್ಥವಾಗುವುದಿಲ್ಲ.

ಮಳೆಗಾಲ ಆರಂಭದಲ್ಲಿಯೇ ಆಘಾತ
ಹಲವು ಇಲ್ಲಗಳನ್ನು ಬೆನ್ನಿಗೆ ಕಟ್ಟಿಕೊಂಡು ದಿನದೂಡುತ್ತಿದ್ದವರಿಗೆ ಈ ವರ್ಷದ ಮಳೆಗಾಲ ಆರಂಭದಲ್ಲಿಯೇ ಆಘಾತವನ್ನುಂಟು ಮಾಡಿತ್ತು. ಹೊಳೆ ದಾಟುವುದಕ್ಕೆ ಗ್ರಾಮಸ್ಥರೇ ಸ್ವತಃ ಕಟ್ಟಿಕೊಂಡಿದ್ದ ಮರದ ಸೇತುವೆಯ ಮೇಲೆ ಬೃಹತ್ ಮರ ಉರುಳಿ ಸಂಕ ನೆಲಸಮವಾಗಿತ್ತು. ಮಾತ್ರವಲ್ಲ, ಪೂರ್ತಿ ಸಂಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು.

40 ಮಂದಿ ಮೂರು ದಿನ ಹಗಲು- ರಾತ್ರಿ ಶ್ರಮಪಟ್ಟರು
ಊರಿಗೆ ಸಂಪರ್ಕ ಕಡಿತವಾದಾಗ ಒಂದೆರಡು ದಿನ ಮನೆಯಲ್ಲಿಯೇ ಕುಳಿತ ಜನರು ನಂತರ ಮಳೆ ಕಡಿಮೆಯಾಗಿ ಸ್ವಲ್ಪ ನೀರಿಳಿದಾಗ ಬೈಕ್ನ್ನು ಮರದ ತುಂಡಿಗೆ ಕಟ್ಟಿಕೊಂಡು ಆರೇಳು ಜನ ಸೇರಿ ಸೊಂಟಮಟ್ಟ ನೀರನ್ನು ಹಾದು ಆಚೆ ದಡ ಸೇರುವ ಸಾಹಸ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈಗಿನ್ನೂ ಮಳೆಗಾಲದ ಆರಂಭ ಮಾತ್ರ ಹೊಳೆಯನ್ನು ಹಾದು ಆಚೆಗೆ ಹೋಗುವಂತಹ ಹುಚ್ಚು ಸಾಹಸಗಳನ್ನು ಹೆಚ್ಚು ದಿನ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಮನಗಂಡು, ಊರವರೆಲ್ಲಾ ಒಂದಾಗಿ ಸುಮಾರು 40 ಮಂದಿ ಮೂರು ದಿನ ಹಗಲು- ರಾತ್ರಿ ಶ್ರಮಪಟ್ಟು ಹೊಸ ಕಾಲು ಸಂಕವನ್ನು ನಿರ್ಮಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮಸ್ಥರಿಗೆ ನೆರವಾದ ಉದಯ ನಾಯ್ಕ
ಅದೆಷ್ಟೇ ಕಷ್ಟಪಟ್ಟರೂ ಜನರ ಕೈ ಸೋಲುತ್ತಿದ್ದಾಗ ಉದಯ ನಾಯ್ಕ ಎಂಬ ಮಹಾನುಭಾವ ಜನರೊಟ್ಟಿಗೆ ಗಟ್ಟಿಯಾಗಿ ನಿಂತು ಗ್ರಾಮಸೇತುವೆ ಪೂರ್ಣಗೊಳ್ಳಲು ನೆರವಾಗಿದ್ದನ್ನು, ಅಗತ್ಯವಿರುವ ಕಟ್ಟಿಗೆಯನ್ನು ಕಾಡಿನಿಂದ ಬಳಸಿಕೊಳ್ಳಲು ಸಹಕಾರ ನೀಡಿದ ಅರಣ್ಯ ಇಲಾಖೆಯ ನೆರವನ್ನು ಗ್ರಾಮಸ್ಥರು ಕೃತಜ್ಞತೆಯಿಂದ ಸ್ಮರಿಸುತ್ತಾರೆ. ಆಳುವ ಸರ್ಕಾರ, ಆಡಳಿತಯಂತ್ರ ಯಾವುದೊಂದೂ ಕಣ್ಣೆತ್ತಿ ನೋಡದಿದ್ದರೂ ಕೊಚ್ಚಿಹೋದ ಸೇತುವೆಯನ್ನು ಅದೇ ಜಾದಲ್ಲಿ ಕಟ್ಟಿ ನಿಲ್ಲಿಸಿದ ಹಳ್ಳಿ ಹೈದರು, ಜನಸಾಮಾನ್ಯರ ಉದ್ಧಾರಕರು ತಾವು ಎಂದು ಹೇಳಿಕೊಂಡು ತಿರುಗುವವರೇ ನಾಚಿಕೆಪಟ್ಟುಕೊಳ್ಳಬೇಕು ಅಂತಹ ಅದ್ಭುತ ಸಾಧನೆ ಮಾಡಿದ್ದಾರೆನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
Recommended Video

ಪುಟ್ಟ ಪುಟ್ಟ ಸೇತುವೆಗಳ ಅಗತ್ಯ ಜಿಲ್ಲೆಗಿದೆ
ಸಂಪೂರ್ಣ ಕರಾವಳಿಯೂ ಅಲ್ಲದ ಅತ್ತ ಪೂರ್ತಿ ಮಲೆನಾಡೂ ಅಲ್ಲದ ಜಿಲ್ಲೆಯಲ್ಲಿ ಊರಿಗೊಂದು, ಮಾರಿಗೊಂದು ಹಳ್ಳವಿದೆ, ಹೊಳೆಗಳಿವೆ. ಬೇಸಿಗೆಯಲ್ಲಿ ಪೊರೆ ಬಿಟ್ಟ ಹಾವಿನಂತೆ ತಣ್ಣಗೆ ಸಪ್ಪಳವಿಲ್ಲದೆ ಹರಿಯುವ ನೀರು ಮಳೆಗಾಲದಲ್ಲಿ ಸಾವಿರ ಪಟ್ಟು ಹೆಚ್ಚು ಶಕ್ತಿಯನ್ನು ಪಡೆದು ಎದುರಿಗೆ ಸಿಕ್ಕ ಎಲ್ಲವನ್ನೂ ಆಪೋಶನ ತೆಗೆದುಕೊಳ್ಳುವ ರಭಸದಲ್ಲಿ ಮುನ್ನುಗ್ಗುವ ನೀರಿನ ಅಪಾಯ ಎದುರಾಗುವುದು ಏನಿದ್ದರೂ ಮಳೆಗಾಲದಲ್ಲಿಯೇ.
ಹಾಗಾಗಿಯೇ ಮಳೆಗಾಲದಲ್ಲಿ ಜೋರಾಗಿ ಕೇಳಿಬರುವ ಕಾಲುಸಂಕ, ಸೇತುವೆಗಳ ಬೇಡಿಕೆ ಬೇಸಿಗೆಯಲ್ಲಿ ತಣ್ಣಗಾಗುತ್ತದೆ. ಮುಂದಿನ ದಿನಗಳಲ್ಲಾದರೂ ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ಲಕ್ಷಣವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚೆಚ್ಚು ಕಾಲುಸಂಕ, ಸಣ್ಣ ಸಣ್ಣ ಸೇತುವೆಗಳನ್ನು ನಿರ್ಮಿಸಿ ಜನರಿಗೆ ಅನುಕೂಲ ಮಾಡಿಕೊಡುವತ್ತ ಜಿಲ್ಲಾಡಳಿತ, ಸಂಬಂಧಪಟ್ಟ ಶಾಸಕರು, ಸಚಿವರು ಆಸಕ್ತಿ ವಹಿಸಬೇಕಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications