ಹಾನಗಲ್ ಉಪ ಚುನಾವಣೆ; ಶಿವರಾಮ್ ಹೆಬ್ಬಾರ್ ಗೆ ಪ್ರತಿಷ್ಠೆ
ಕಾರವಾರ, ಅಕ್ಟೋಬರ್ 28; ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಚಿವ ಶಿವರಾಮ್ ಹೆಬ್ಬಾರ್ಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಆಪರೇಷನ್ ಕಮಲದ ಮೂಲಕ ಬಂದು ಸರ್ಕಾರದಲ್ಲಿ ಸಚಿವರಾದವರಿಗೆ ಬಿಜೆಪಿ ಈ ಉಪಚುನಾವಣೆಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಟಾರ್ಗೆಟ್ ನೀಡಿದೆ ಎಂಬ ಸುದ್ದಿ ಹಬ್ಬಿದೆ.
ಶಾಸಕರಾಗಿದ್ದ ಸಿ. ಎಂ. ಉದಾಸಿ ಅಕಾಲಿಕ ನಿಧನದಿಂದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಗುರುವಾರ ಸಂಜೆ ಅಂತ್ಯಗೊಳ್ಳಲಿದೆ. ನವೆಂಬರ್ 2ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಈಗಾಗಲೇ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡು ಬಿರುಸಿನ ಪ್ರಚಾರ ನಡೆಸುತ್ತಿದೆ. ಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾರ್ಮಿಕ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸಹ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲೇಬೇಕು ಎನ್ನುವ ಪ್ರತಿಷ್ಠೆಗೆ ಬಿದ್ದಿದ್ದಾರೆ.

ಚುನಾವಣೆ ಘೋಷಣೆಯಾಗಿ ಪ್ರಚಾರ ಕಾರ್ಯ ಪ್ರಾರಂಭ ಮಾಡಿದಾಗಿನಿಂದ ಶಿವರಾಮ್ ಹೆಬ್ಬಾರ್ ಹಾನಗಲ್ ಕ್ಷೇತ್ರದಲ್ಲಿಯೇ ಬೀಡುಬಿಟ್ಟಿದ್ದಾರೆ. ಕ್ಷೇತ್ರದ ಬೊಮ್ಮನಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪ್ರದೇಶದ ಉಸ್ತುವಾರಿ ಹೊತ್ತಿರುವ ಹೆಬ್ಬಾರ್, ತನ್ನ ವ್ಯಾಪ್ತಿಯಲ್ಲಿ ಅಧಿಕ ಮತಗಳನ್ನು ಪಕ್ಷದ ಅಭ್ಯರ್ಥಿಗೆ ಬರುವಂತೆ ಶತಾಯಗತಾಯ ಪ್ರಯತ್ನಕ್ಕೆ ಇಳಿದಿದ್ದಾರೆ.
ಸಚಿವ ಹೆಬ್ಬಾರ್ಗೆ ಉಸ್ತುವಾರಿ ಕೊಟ್ಟಿರುವ ಕ್ಷೇತ್ರದಲ್ಲಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯೆ ಕಾಂಗ್ರೆಸ್ ಪಕ್ಷದವರಾಗಿದ್ದು, ಎರಡು ತಾಲೂಕು ಪಂಚಾಯತ್ ಕ್ಷೇತ್ರದ ಸದಸ್ಯರು ಕೂಡ ಕಾಂಗ್ರೆಸ್ ಪಕ್ಷದವರೇ ಆಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ. ಎಂ. ಉದಾಸಿಗೆ ಈ ಭಾಗದಲ್ಲಿ ಮತ ಹೆಚ್ಚಾಗಿ ಬಿದ್ದಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತವಾಗಿತ್ತು. ಸದ್ಯ ಹೆಬ್ಬಾರ್ಗೆ ಇದೇ ಕ್ಷೇತ್ರ ಉಸ್ತುವಾರಿ ನೀಡಿದ್ದು, ಕಳೆದ ಆರು ದಿನಗಳಿಂದ ಅಲ್ಲೇ ಉಳಿದುಕೊಂಡು ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನೊಂದೆಡೆ ಕೆಲ ದಿನಗಳ ಹಿಂದಿನವರೆಗೆ ರಾಜ್ಯ ಬಿಜೆಪಿ ಎಂದರೆ ಬಿ. ಎಸ್. ಯಡಿಯೂರಪ್ಪ ಎನ್ನುವಂತಿತ್ತು. ಆದರೆ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ. ವೈ. ವಿಜಯೇಂದ್ರ ಚುನಾವಣೆ ಪ್ರಕ್ರಿಯೆಯಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಕೆಲ ಮುಖಂಡರೇ ಯಡಿಯೂರಪ್ಪ ಹಾಗೂ ವಿಜಯೇಂದ್ರರನ್ನು ದೂರ ಇಡುವಂತೆ ಮಾಡಿದ್ದು, ಇದೇ ಕಾರಣಕ್ಕೆ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬಂದು ಮಂತ್ರಿಯಾದವರಿಗೆ ಕ್ಷೇತ್ರದ ಚುನಾವಣೆಯ ಟಾರ್ಗೆಟ್ ನೀಡಿದ್ದಾರೆ ಎನ್ನುವ ಮಾತಿದೆ.
ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರಿದ ಶಿವರಾಮ್ ಹೆಬ್ಬಾರ್ ಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳ್ಳುತ್ತಾ ಬಂದಿದ್ದು, ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಜವಬ್ದಾರಿಯನ್ನು ಪಕ್ಷ ನೀಡಿದೆ.
ಮೂಲಗಳ ಪ್ರಕಾರ ಕ್ಷೇತ್ರದ ಪ್ರಚಾರದ ಖರ್ಚನ್ನು ಸಹ ಸಚಿವರೇ ಕೊಡುವಂತೆ ಪಕ್ಷ ತಿಳಿಸಿದೆ ಎಂಬ ಮಾಹಿತಿ ಇದ್ದು, ಆಪರೇಷನ್ ಕಮಲದ ಮೂಲಕ ಬಂದ ನಾಯಕರಿಂದಲೇ ಚುನಾವಣೆಯನ್ನು ಗೆಲ್ಲಿಸಿ, ಯಡಿಯೂರಪ್ಪ ಇಲ್ಲದಿದ್ದರೂ ಬಿಜೆಪಿ ರಾಜ್ಯದಲ್ಲಿ ವರ್ಚಸ್ಸು ಕಳೆದುಕೊಂಡಿಲ್ಲ ಎಂಬುದನ್ನು ಸಾಬೀತುಪಡಿಸುವ ಚಿಂತನೆ ಪಕ್ಷದ್ದಾಗಿದೆ ಎನ್ನುವುದು ಕಾರ್ಯಕರ್ತರ ಅಭಿಪ್ರಾಯ.
ಸದ್ಯ ಶಿವರಾಮ್ ಹೆಬ್ಬಾರ್ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಒಂದೊಮ್ಮೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾದರೆ ಅದು ಸಹ ಸಚಿವರ ಮೇಲೆ ಪರಿಣಾಮ ಬೀರಲಿದೆ, ಇದೇ ಕಾರಣಕ್ಕೆ ಹಾನಗಲ್ ಉಪಚುನಾವಣೆ ಹೆಬ್ಬಾರ್ ಪಾಲಿಗೆ ಪ್ರತಿಷ್ಠೆಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications