ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ನಿರ್ವಹಣೆ ವೈಫಲ್ಯಕ್ಕೆ ಹರ್ಷವರ್ಧನ್ ಕೈಬಿಟ್ಟಿರುವುದೇ ಸಾಕ್ಷಿ; ಡಿಕೆಶಿ

|
Google Oneindia Kannada News

ಕಾರವಾರ, ಜುಲೈ 08: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಹೊರಗುಳಿಸಿರುವುದು, ಕೊರೊನಾ ಸೋಂಕನ್ನು ಸರ್ಕಾರ ಸಮರ್ಥವಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಕೆಲವು ಗಂಟೆಗಳ ಮುನ್ನ ಡಾ. ಹರ್ಷವರ್ಧನ್ ಅವರು ರಾಜೀನಾಮೆ ನೀಡಿದ್ದರು.

ಹೊನ್ನಾವರ ಮೀನುಗಾರರ ಸಮಸ್ಯೆಗೆ ಸದನದಲ್ಲಿ ಹೋರಾಟ: ಡಿಕೆಶಿ ಹೊನ್ನಾವರ ಮೀನುಗಾರರ ಸಮಸ್ಯೆಗೆ ಸದನದಲ್ಲಿ ಹೋರಾಟ: ಡಿಕೆಶಿ

ಈ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್, "ಹರ್ಷವರ್ಧನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರಗೆ ಉಳಿದಿರುವುದು ಕೇಂದ್ರ ಸರ್ಕಾರ ಕೊರೊನಾ ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಆದರೆ ಇದು ಹರ್ಷವರ್ಧನ್ ಅವರೊಬ್ಬರ ಜವಾಬ್ದಾರಿಯಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡರ ಜವಾಬ್ದಾರಿಯೂ ಇದೆ. ಎರಡು ಸರ್ಕಾರಗಳು ಈ ಜವಾಬ್ದಾರಿ ಹೊರಬೇಕಿದೆ. ಜನರ ನೋವಿಗೆ ಸ್ಪಂದಿಸಬೇಕಿದೆ" ಎಂದು ಹೇಳಿದರು.

Harsh Vardhans Exit Proof To Centres Poor Covid Plan Says DK Shivakumar

Recommended Video

ಚಿತ್ರದುರ್ಗದಿಂದ ಮೋದಿ ಸಂಪುಟ ಸೇರಿದ A ನಾರಾಯಣ ಸ್ವಾಮಿ ಹಿನ್ನಲೆ ಏನು..? | Oneindia Kannada

ರಾಜ್ಯದಲ್ಲಿ ಬುಧವಾರದ ಮಾಹಿತಿಯಂತೆ, 2743 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3081 ಸೋಂಕಿತರು ಗುಣಮುಖರಾಗಿದ್ದು, 75 ಮಂದಿ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

English summary
Harsh Vardhan's Exit Testament To Centre's Poor Covid Plan says KPCC President DK Shivakumar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X