ಉತ್ತರಕನ್ನಡದಲ್ಲಿ ಮಳೆ ಆರ್ಭಟ; ಮರ ಮನೆಮೇಲೆ ಬಿದ್ದು 6 ಮಂದಿಗೆ ಗಾಯ
ಕಾರವಾರ, ಜುಲೈ 4 : ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಮಳೆ ಆರ್ಭಟ ಜೋರಾಗಿದೆ. ಸೋಮವಾರ ದಿನವಿಡಿ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಹೊನ್ನಾವರದಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ 6 ಮಂದಿ ಗಾಯಗೊಂಡಿದ್ದಾರೆ. ಗೋವಾ-ಅನಮೋಡ ರಾಷ್ಟ್ರೀಯ ಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಕೊಂಚ ಬಿಡುವು ನೀಡಿದ್ದ ಮಳೆ ಸೋಮವಾರ ಮುಂಜಾನೆಯಿಂದ ಸಂಜೆವರೆಗೂ ವ್ಯಾಪಕವಾಗಿ ಮಳೆಯಾಗಿದೆ. ಪರಿಣಾಮ ಹೊನ್ನಾವರದ ಬಗ್ರಾಣಿ ಕ್ರಾಸ್ ಬಳಿ ಬೃಹತ್ ಅಶ್ವತ್ಥ ಮರ ಮನೆ ಮೇಲೆ ಬಿದ್ದು ಮನೆಯಲ್ಲಿ ವಾಸವಾಗಿದ್ದ 6 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇನ್ನು ಈ ಆಲದಮರ ಬಿದ್ದ ಪರಿಣಾಮ 8 ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಬೀಳುವ ಸ್ಥಿತಿಯಲ್ಲಿದ್ದ ಇನ್ನೊಂದು ಮರವನ್ನು ಸಹ ತೆರವುಗೊಳಿಸುವ ಮೂಲಕ ಮುಂಜಾಗೃತೆ ವಹಿಸಲಾಗಿದೆ.

ರಸ್ತೆ ಸಂಪರ್ಕ ಕಡಿತ
ಇನ್ನು ಸಿದ್ದಾಪುರ ತಾಲ್ಲೂಕಿನ ಕಾನಸೂರು- ಮಾದ್ನಕಳ್ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಹೊಸ ಸೇತುವೆ ಕೆಲಸ ಮುಗಿಯದ ಕಾರಣ ಬದಲಿ ವ್ಯವಸ್ಥೆ ಮಾಡಲಾಗಿತ್ತು. ಆದರೆ ವ್ಯಾಪಕ ಮಳೆಯಿಂದಾಗಿ ಕಾನಸೂರು ಹೊಳೆ ತುಂಬಿ ಹರಿಯುತ್ತಿದ್ದು, ಮಾದ್ನಕಳ್, ಶ್ರೀನಗರ, ಅಮ್ಮಚ್ಚಿ, ದೇವಿಸರ, ಅರೆಹಳ್ಳ, ಕೊಪ್ಪ, ಗಟ್ಟಿಕೈ ಸೇರದಿದಂತೆ ಇನ್ನಿತರ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಈ ಭಾಗದ ವಿದ್ಯಾರ್ಥಿಗಳು ಸೇರಿದಂತೆ ಉದ್ಯೋಗಕ್ಕೆ ತೆರಳುವವರು ತೊಂದರೆ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಗುಡ್ಡ ಕುಸಿತ, ವಾಹನ ಸಂಚಾರ ಅಸ್ತವ್ಯಸ್ತ
ಇನ್ನು ಗೋವಾ-ಅನಮೋಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾದ ಕಾರಣ ಈ ಮಾರ್ಗದ ಸಂಚಾರ ಸಂಪೂರ್ಣ ಕಡಿತಗೊಂಡಿದೆ. ಗೋವಾ ಗಡಿಯಲ್ಲಿ ಗುಡ್ಡಕುಸಿತವಾಗಿದ್ದು, ಜೆಸಿಬಿ ಮೂಲಕ ಕುಸಿದ ಮಣ್ಣು ಹಾಗೂ ಕಲ್ಲುಗಳನ್ನು ತೆರವು ಮಾಡುವ ಕಾರ್ಯಾಚರಣೆ ಸಂಜೆವರೆಗೂ ನಡೆದಿದೆ. ಈ ಮಾರ್ಗದ ಮೂಲಕ ಸಂಚಾರ ಮಾಡುತ್ತಿದ್ದ ವಾಹನಗಳ ಸಂಚಾರ ಸಂಜೆವರೆಗೂ ಅಸ್ತವ್ಯಸ್ತವಾಗಿದೆ.

ಜಿಲ್ಲೆಯಲ್ಲಿ 531.3 ಮಿ.ಮೀ ಮಳೆ
ಶಿರಸಿಯಲ್ಲಿ 105ಮಿ.ಮೀ, ಹೊನ್ನಾವರ 75.3 ಮೀ.ಮೀ ಮಳೆಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 531.3 ಮೀ.ಮೀ ಮಳೆಯಾಗಿದೆ. ಕರಾವಳಿ ಹಾಗೂ ಘಟ್ಟದ ಮೆಲ್ಭಾಗದ ಅಲ್ಲಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಇನ್ನು ಹಳಿಯಾಳದಲ್ಲಿ ಕೆರೆಯ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಮಂಜುನಾಥ್ ಮೋರೆ ಎಂಬುವವನು ಸಾತ್ನಳ್ಳಿ ಕೆರೆಯ ನೀರಿನಲ್ಲಿ ಮುಳುಗಿ ಸಾವುಕಂಡಿದ್ದಾನೆ. ಸ್ಥಳಕ್ಕೆ ತೆರಳಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 8ರವರೆಗೆ ಮಳೆ
ಉತ್ತರಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಜು.8 ರವರೆಗೂ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜು.8 ರವರೆಗೆ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರೀ ಗಾಳಿ ಸಹಿತ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಗಾಳಿಯು ಪ್ರತಿ ಗಂಟೆಗೆ 40- 50 ಕಿ.ಮೀ. ವೇಗದಲ್ಲಿ ಬೀಸಲಿದೆ ಎನ್ನಲಾಗಿದ್ದು, ಕಡಲತೀರ, ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನಲೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications