ಕಾರವಾರ ಬಂದರು ಅಭಿವೃದ್ಧಿ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ
ಕಾರವಾರ, ಜನವರಿ 23: ಈಚೆಗೆ ಬಹು ಚರ್ಚಿತವಾದ, ಹಾಗೆಯೇ ಮೀನುಗಾರರ ಬೃಹತ್ ಹೋರಾಟಕ್ಕೆ ಕಾರಣವಾಗಿದ್ದ ಕಾರವಾರ ವಾಣಿಜ್ಯ ಬಂದರು ಅಭಿವೃದ್ಧಿಯ ಎರಡನೇ ಹಂತದ ವಿಸ್ತರಣೆಗೆ ಹೈಕೋರ್ಟ್ ತಡೆ ನೀಡಿದೆ.
ವಾಣಿಜ್ಯ ಬಂದರು ಅಭಿವೃದ್ಧಿಯ 2ನೇ ಹಂತದ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಬೈತ್ ಕೋಲ್ ಬಂದರು ನಿರಾಶ್ರಿತ ಮೀನುಗಾರರ ಸಹಕಾರ ಸಂಘ ಈ ಕಾಮಗಾರಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.
ಕಾಮಗಾರಿಗೆ ಮುನ್ನ ಪರಿಸರ ಪರಿಣಾಮ ಅಧ್ಯಯನ ಪ್ರಾಧಿಕಾರದ ಅನುಮತಿ ಪಡೆದಿಲ್ಲದಿರುವುದರ ಕುರಿತು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದರೂ ಕಾಮಗಾರಿ ಮುಂದುವರಿಸಿದ್ದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕಡಲತೀರವನ್ನು ಹಿಂದಿದ್ದಂತೆ ಮರುಸ್ಥಾಪಿಸಲು ಆದೇಶೀಸಿದೆ.

ಸಾಗರ ಮಾಲಾ ಯೋಜನೆಯು ವಾಣಿಜ್ಯ ಬಂದರನ್ನು ರಾಷ್ಟ್ರಮಟ್ಟದಲ್ಲಿ ಮೇಲ್ದರ್ಜೆಗೆ ಏರಿಸುವ ಬಂದರು ವಿಸ್ತರಣೆ ಯೋಜನೆಯಾಗಿದ್ದು, ಕಾರವಾರದ ವಾಣಿಜ್ಯ ಬಂದರನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಸಾಗರ ಮಾಲಾ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗಿತ್ತು. ಈ ಕಾರಣಕ್ಕೆ ಸ್ಥಳೀಯ ಮೀನುಗಾರರ ವಿರೋಧದ ನಡುವೆಯೂ ಪೊಲೀಸ್ ಬಂದೋಬಸ್ತ್ ನಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿತ್ತು.
ಕಾಮಗಾರಿಗೆ ಮುಂದಾಗುತ್ತಿದ್ದಂತೆ ಮೀನುಗಾರರ ಪ್ರತಿಭಟನೆಯೂ ತೀವ್ರ ಸ್ವರೂಪ ಪಡೆದಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯ್ಕ ಜನರಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.
ಈ ಯೋಜನೆಯಿಂದಾಗಿ ತಮ್ಮ ಸ್ಥಳ ಕಳೆದುಕೊಳ್ಳುವ ಜೊತೆ ಸಾಂಪ್ರದಾಯಿಕ ಮೀನುಗಾರಿಕೆಗೆ ಹೊಡೆತ ಬೀಳುತ್ತದೆ ಎಂಬ ಕಾರಣಕ್ಕೆ ಮೀನುಗಾರರು ಈ ಯೋಜನೆಯನ್ನು ವಿರೋಧಿಸುತ್ತಿದ್ದರು. ಜೊತೆಗೆ ಈ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಿ, ಮೀನುಗಾರರ ಉದ್ಯೋಗ ಕೂಡ ಕಡಿತವಾಗುತ್ತದೆ ಎನ್ನುವುದು ಮೀನುಗಾರರ ಆತಂಕವಾಗಿತ್ತು
ಇದೀಗ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಹಾಗೂ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ವಿಭಾಗೀಯ ಪೀಠವು ಕಾಮಗಾರಿಗೆ ಮಧ್ಯಂತರ ತಡೆ ನೀಡಿ ಆದೇಶವನ್ನು ಹೊರಡಿಸಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications