ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಭಿವೃದ್ಧಿ ವಿರೋಧಿಸಿ ಪ್ರತಿಭಟನೆ: ಇಂಟರ್ಲಾಕ್ ಕಿತ್ತೆಸೆದು ಆಕ್ರೋಶ
ಹಳಿಯಾಳದ ಪುರಸಭೆ ವ್ಯಾಪ್ತಿಯ ಮರಡಿ ಗುಡ್ಡದ ಬಳಿ ಇರುವ ಮಸೀದಿಯ ಎದುರು ಬನ್ನಿ ಮಂಟಪವಿದ್ದು, ಈ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಭಿವೃದ್ಧಿ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾರವಾರ, ಫೆಬ್ರವರಿ 10: ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಹಳಿಯಾಳ ಪುರಸಭೆಯಿಂದ ಅಭಿವೃದ್ಧಿ ಕಾಮಗಾರಿ ನಡೆಸಿರುವುದನ್ನು ವಿರೋಧಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು ದೇವಸ್ಥಾನ ಜಾಗದಲ್ಲಿನ ಇಂಟರ್ ಲಾಕ್ ಕಿತ್ತು ಪ್ರತಿಭಟಿಸಿದ ಘಟನೆ ನಡೆದಿದೆ.
ಹಳಿಯಾಳದ ಪುರಸಭೆ ವ್ಯಾಪ್ತಿಯ ಮರಡಿ ಗುಡ್ಡದ ಬಳಿ ಇರುವ ಮಸೀದಿಯ ಎದುರು ಬನ್ನಿ ಮಂಟಪವಿದ್ದು, ಇಲ್ಲಿ ಪುರಸಭೆಯಿಂದ ಹಾಸು ಹುಲ್ಲು ಹಾಗೂ ಇಂಟರ್ ಲಾಕ್ಗಳನ್ನು ಅಳವಡಿಸಲಾಗಿತ್ತು. ಆದರೆ ಈ ಅಭಿವೃದ್ಧಿ ಕಾಮಗಾರಿಗಳನ್ನು ಪುರಸಭೆಯು ಒಂದು ಕೋಮಿಗೆ ಅನುಕೂಲವಾಗುವಂತೆ ಮಾಡುತ್ತಿದ್ದು, ಇದರಿಂದ ಹಿಂದೂಗಳ ಧಾರ್ಮಿಕ ಕಾರ್ಯಗಳಿಗೆ ಅಡ್ಡಿಯಾಗಲಿದೆ ಎಂದು ಹಿಂದೂ ಪರ ಕಾರ್ಯಕರ್ತರು ಆರೋಪಿಸಿದ್ದರು. ಆದರೂ ಹಳಿಯಾಳ ಪುರಸಭೆಯಿಂದ ಇಂಟರಲಾಕ್ ಅಳವಡಿಸಿ ಅಭಿವೃದ್ಧಿ ಪಡಿಸಲು ಮುಂದಾಗಿತ್ತು.
ಎದುರು ಮಸೀದಿ ಇದ್ದು ಮುಂದಿನ ದಿನಗಳಲ್ಲಿ ಈ ಪ್ರದೇಶವನ್ನು ಬಳಕೆ ಮಾಡಿಕೊಳ್ಳುವ ಆತಂಕದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸಿ ಕಳೆದ 15 ದಿನಗಳ ಮೊದಲೆ ಮನವಿಗಳನ್ನು ಸಲ್ಲಿಸಿದ್ದರು. ಪುರಸಭೆಯ ಸಭೆಯಲ್ಲೂ ಆಕ್ಷೇಪ ವ್ಯಕ್ತವಾಗಿತ್ತು. ಆದರೂ ಅಭಿವೃದ್ಧಿ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ಗ್ರಾಮದೇವಿ ಟ್ರಸ್ಟ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಬಂದ್ಗೆ ಕರೆ ನೀಡಲಾಗಿತ್ತು.

ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಗ್ರಾಮದೇವಿ ಟ್ರಸ್ಟ್ ಅಧ್ಯಕ್ಷ ಮಂಗೇಶ ದೇಶಪಾಂಡೆ ನೇತೃತ್ವದಲ್ಲಿ ಶುಕ್ರವಾರ ಮುಂಜಾನೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಮಂದಿ ಬಳಿಕ ಪ್ರತಿಭಟನಾ ರ್ಯಾಲಿ ಮೂಲಕ ದೇವಸ್ಥಾನ ಜಾಗಕ್ಕೆ ತೆರಳಲು ಮುಂದಾಗಿದ್ದರು. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದರು ನೂರಾರು ಪ್ರತಿಭಟನಾಕಾರರ ಮುಂದೆ ಕೆಲವೇ ಮಂದಿ ಇದ್ದ ಪೊಲೀಸರನ್ನು ಬೇದಿಸಿ ದೇವಸ್ಥಾನದ ಜಾಗಕ್ಕೆ ಪ್ರತಿಭಟನಾಕಾರರು ನುಗ್ಗಿದ್ದರು.
ಬಳಿಕ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಮಾತುಕತೆ ನಡೆಸುವಂತೆ ಸೂಚಿಸಿದರೂ ಕೇಳದೆ ಜಾಗದಲ್ಲಿ ಅಳವಡಿಸಿದ್ದ ಇಂಟರ್ ಲಾಕ್ ಕಿತ್ತು ಪ್ರತಿಭಟನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿ ಭಗವಾ ಧ್ವಜ ನೆಟ್ಟಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, "ಹಳಿಯಾಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಎರಡು ತುಕಡಿಗಳ ಮೂಲಕ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಬಂದ್ ಕರೆ ನೀಡಿದ್ದ ಮಾಹಿತಿ ಇಲ್ಲ. ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದಾಗಿ" ಪ್ರತಿಕ್ರಿಯಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications