ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಭಿವೃದ್ಧಿ ವಿರೋಧಿಸಿ ಪ್ರತಿಭಟನೆ: ಇಂಟರ್ಲಾಕ್ ಕಿತ್ತೆಸೆದು ಆಕ್ರೋಶ
ಹಳಿಯಾಳದ ಪುರಸಭೆ ವ್ಯಾಪ್ತಿಯ ಮರಡಿ ಗುಡ್ಡದ ಬಳಿ ಇರುವ ಮಸೀದಿಯ ಎದುರು ಬನ್ನಿ ಮಂಟಪವಿದ್ದು, ಈ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಭಿವೃದ್ಧಿ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾರವಾರ, ಫೆಬ್ರವರಿ 10: ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಹಳಿಯಾಳ ಪುರಸಭೆಯಿಂದ ಅಭಿವೃದ್ಧಿ ಕಾಮಗಾರಿ ನಡೆಸಿರುವುದನ್ನು ವಿರೋಧಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಗಳು ದೇವಸ್ಥಾನ ಜಾಗದಲ್ಲಿನ ಇಂಟರ್ ಲಾಕ್ ಕಿತ್ತು ಪ್ರತಿಭಟಿಸಿದ ಘಟನೆ ನಡೆದಿದೆ.
ಹಳಿಯಾಳದ ಪುರಸಭೆ ವ್ಯಾಪ್ತಿಯ ಮರಡಿ ಗುಡ್ಡದ ಬಳಿ ಇರುವ ಮಸೀದಿಯ ಎದುರು ಬನ್ನಿ ಮಂಟಪವಿದ್ದು, ಇಲ್ಲಿ ಪುರಸಭೆಯಿಂದ ಹಾಸು ಹುಲ್ಲು ಹಾಗೂ ಇಂಟರ್ ಲಾಕ್ಗಳನ್ನು ಅಳವಡಿಸಲಾಗಿತ್ತು. ಆದರೆ ಈ ಅಭಿವೃದ್ಧಿ ಕಾಮಗಾರಿಗಳನ್ನು ಪುರಸಭೆಯು ಒಂದು ಕೋಮಿಗೆ ಅನುಕೂಲವಾಗುವಂತೆ ಮಾಡುತ್ತಿದ್ದು, ಇದರಿಂದ ಹಿಂದೂಗಳ ಧಾರ್ಮಿಕ ಕಾರ್ಯಗಳಿಗೆ ಅಡ್ಡಿಯಾಗಲಿದೆ ಎಂದು ಹಿಂದೂ ಪರ ಕಾರ್ಯಕರ್ತರು ಆರೋಪಿಸಿದ್ದರು. ಆದರೂ ಹಳಿಯಾಳ ಪುರಸಭೆಯಿಂದ ಇಂಟರಲಾಕ್ ಅಳವಡಿಸಿ ಅಭಿವೃದ್ಧಿ ಪಡಿಸಲು ಮುಂದಾಗಿತ್ತು.
ಎದುರು ಮಸೀದಿ ಇದ್ದು ಮುಂದಿನ ದಿನಗಳಲ್ಲಿ ಈ ಪ್ರದೇಶವನ್ನು ಬಳಕೆ ಮಾಡಿಕೊಳ್ಳುವ ಆತಂಕದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸಿ ಕಳೆದ 15 ದಿನಗಳ ಮೊದಲೆ ಮನವಿಗಳನ್ನು ಸಲ್ಲಿಸಿದ್ದರು. ಪುರಸಭೆಯ ಸಭೆಯಲ್ಲೂ ಆಕ್ಷೇಪ ವ್ಯಕ್ತವಾಗಿತ್ತು. ಆದರೂ ಅಭಿವೃದ್ಧಿ ಕಾಮಗಾರಿ ನಡೆಸಿದ ಹಿನ್ನೆಲೆಯಲ್ಲಿ ಗ್ರಾಮದೇವಿ ಟ್ರಸ್ಟ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಬಂದ್ಗೆ ಕರೆ ನೀಡಲಾಗಿತ್ತು.

ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಗ್ರಾಮದೇವಿ ಟ್ರಸ್ಟ್ ಅಧ್ಯಕ್ಷ ಮಂಗೇಶ ದೇಶಪಾಂಡೆ ನೇತೃತ್ವದಲ್ಲಿ ಶುಕ್ರವಾರ ಮುಂಜಾನೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಮಂದಿ ಬಳಿಕ ಪ್ರತಿಭಟನಾ ರ್ಯಾಲಿ ಮೂಲಕ ದೇವಸ್ಥಾನ ಜಾಗಕ್ಕೆ ತೆರಳಲು ಮುಂದಾಗಿದ್ದರು. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದರು ನೂರಾರು ಪ್ರತಿಭಟನಾಕಾರರ ಮುಂದೆ ಕೆಲವೇ ಮಂದಿ ಇದ್ದ ಪೊಲೀಸರನ್ನು ಬೇದಿಸಿ ದೇವಸ್ಥಾನದ ಜಾಗಕ್ಕೆ ಪ್ರತಿಭಟನಾಕಾರರು ನುಗ್ಗಿದ್ದರು.
ಬಳಿಕ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಮಾತುಕತೆ ನಡೆಸುವಂತೆ ಸೂಚಿಸಿದರೂ ಕೇಳದೆ ಜಾಗದಲ್ಲಿ ಅಳವಡಿಸಿದ್ದ ಇಂಟರ್ ಲಾಕ್ ಕಿತ್ತು ಪ್ರತಿಭಟನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿ ಭಗವಾ ಧ್ವಜ ನೆಟ್ಟಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, "ಹಳಿಯಾಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಎರಡು ತುಕಡಿಗಳ ಮೂಲಕ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಬಂದ್ ಕರೆ ನೀಡಿದ್ದ ಮಾಹಿತಿ ಇಲ್ಲ. ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದಾಗಿ" ಪ್ರತಿಕ್ರಿಯಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications