ಹೊನ್ನಾವರ ಮೀನುಗಾರರ ಸಮಸ್ಯೆಗೆ ಸದನದಲ್ಲಿ ಹೋರಾಟ: ಡಿಕೆಶಿ
ಕಾರವಾರ, ಜುಲೈ 07; "ಮೀನುಗಾರರ ಸಮಸ್ಯೆಗೆ ಸದನದಲ್ಲಿ ಕಾಂಗ್ರೆಸ್ ಪಕ್ಷದಿಂದ ಹೋರಾಟ ಮಾಡುವ ಮೂಲಕ ಧ್ವನಿಯಾಗುತ್ತೇವೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರವಸೆ ನೀಡಿದರು.
ಬುಧವಾರ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದಲ್ಲಿ ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಪ್ರದೇಶಕ್ಕೆ ಅವರು ಭೇಟಿ ನೀಡಿದರು. ಸ್ಥಳೀಯ ಮೀನುಗಾರರ ಅಳಲು ಆಲಿಸಿದರು. "ಖಾಸಗಿಯವರಿಗೆ ಬೇರೆ ಎಲ್ಲಿ ಬೇಕಾದರೂ ಜಾಗ ಕೊಡಬಹುದು. ಆದರೆ ತಲೆಮಾರುಗಳಿಂದ ವಾಸ್ತವ್ಯದಲ್ಲಿದ್ದು, ಜೀವನ ಕಟ್ಟಿಕೊಂಡಿರುವ ಮೀನುಗಾರರನ್ನು ಒಕ್ಕಲೆಬ್ಬಿಸಬಾರದು" ಎಂದರು.
"ಕಾಸರಕೋಡ ವಾಣಿಜ್ಯ ಬಂದರಿನ ಕುರಿತು ಕಾಗದ ಪತ್ರಗಳನ್ನು ತರಿಸಿಕೊಂಡು ಅಧ್ಯಯನ ಮಾಡಿ ಮೀನುಗಾರರಿಗೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ವಾಣಿಜ್ಯ ಬಂದರು ನಿರ್ಮಾಣಕ್ಕೆ ಅವಕಾಶ ನೀಡಲ್ಲ. ಮೀನುಗಾರರ ಬದುಕನ್ನು ಕಸಿದು ಬಂದರು ನಿರ್ಮಾಣಕ್ಕೆ ಸರಕಾರಕ್ಕೆ ಬಿಡಲ್ಲ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

"ಮೀನುಗಾರರನ್ನು ಒಕ್ಕಲೆಬ್ಬಿಸಲು ಮುಂದಾದಲ್ಲಿ ಸಿದ್ದರಾಮಯ್ಯ, ದೇಶಪಾಂಡೆ ಜತೆ ಬಂದರು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಬಂದು ಧರಣಿ ನಡೆಸಲಿದ್ದೇವೆ" ಎಂದು ಡಿ. ಕೆ. ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.
ಏನಿದು ವಿವಾದ?; ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾ ಪ್ರದೇಶದಲ್ಲಿ ವಾಣಿಜ್ಯ ಬಂದರು ನಿರ್ಮಾಣ ಮಾಡಲು ಒಪ್ಪಿಗೆ ಸಿಕ್ಕಿದೆ. ಸುಮಾರು 93 ಎಕರೆ ಪ್ರದೇಶದಲ್ಲಿ 650 ಕೋಟಿ ವೆಚ್ಚದಲ್ಲಿ ಖಾಸಗಿ ಬಂದರು ನಿರ್ಮಾಣವಾಗುತ್ತಿದೆ. ವಾಣಿಜ್ಯ ಬಂದರಿಗೆ ಮೀನುಗಾರರು ವಿರೋಧ ವ್ಯಕ್ತಪಡಿಸಿದ್ದಾರೆ.
ಬಂದರು ನಿರ್ಮಾಣವಾದರೆ ಶರಾವತಿ ಟೊಂಕಾ ಪ್ರದೇಶದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೊಂದರೆಯಾಗಲಿದೆ. ನೂರಾರು ಕುಟುಂಬ ಬೀದಿಗೆ ಬೀಳಲಿದೆ ಎಂದು ಮೀನುಗಾರರು ಕಾಮಗಾರಿ ವಿರೋಧಿಸುತ್ತಿದ್ದಾರೆ.

ಕೆಲವು ದಿನದ ಹಿಂದೆ ಈ ಬಂದರು ಕಾಮಗಾರಿಗಾಗಿ ಮನೆಗಳ ತೆರವಿಗೆ ಅಧಿಕಾರಿಗಳು ಆಗಮಿಸಿದ್ದರು. ಆಗ ಮೀನುಗಾರ ಯುವಕರು ಸಮುದ್ರಕ್ಕೆ ಹಾರಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿ, ಪ್ರತಿಭಟನೆ ನಡೆಸಿದ್ದರು.
ಕುಟುಂಬಕ್ಕೆ ಸಾಂತ್ವನ; ಡಿ. ಕೆ. ಶಿವಕುಮಾರ್ ಇತ್ತೀಚೆಗೆ ಮೃತಪಟ್ಟ ಮೀನುಗಾರ ಉದಯ ತಾಂಡೇಲ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ಧನಸಹಾಯ ಮಾಡಿದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications