ದಾಂಡೇಲಿಯಲ್ಲಿ ಫೆ. 2ರಿಂದ ಹಾರ್ನ್ ಬಿಲ್ ಫೆಸ್ಟಿವಲ್!
ಕಾರವಾರ, ಜನವರಿ 23: ಪಕ್ಷಿ ವೀಕ್ಷಣಾಕಾರರಿಗೆ ಉತ್ತರಕನ್ನಡ ಜಿಲ್ಲಾಡಳಿತ "ಹಾರ್ನ್ ಬಿಲ್ ಫೆಸ್ಟ್" ಆಯೋಜಿಸುವ ಮೂಲಕ ಕಾನನದ ನಡುವೆ ಮನೋರಂಜನೆಗೆ ಅವಕಾಶ ಕಲ್ಪಿಸುತ್ತಿದೆ.
ಫೆ.2 ರಿಂದ ಫೆ.4 ರವರೆಗೆ ದಾಂಡೇಲಿಯ ಅರಣ್ಯ ಅತಿಥಿ ಗ್ರಹದ ಆವರಣದಲ್ಲಿ ಉತ್ಸವವನ್ನು ಆಯೋಜಿಸಲಾಗಿದ್ದು, ಉತ್ಸವದಲ್ಲಿ ದೇಶದ ನಾನಾ ಭಾಗಗಳಿಂದ ಪಕ್ಷಿ ತಜ್ಞರು, ಛಾಯಾ ಚಿತ್ರ ತಜ್ಞರು ಆಗಮಿಸಿ ಉಪನ್ಯಾಸ ಹಾಗೂ ಪ್ರಾತ್ಯಕ್ಷಿತೆ ನೀಡಲಿದ್ದಾರೆ.
ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಈ ಹಬ್ಬವನ್ನು ಆಯೋಜಿಸಲಾಗುತ್ತಿದ್ದು, ಎಲ್ಲ ವರ್ಗದ ಜನರಿಗೂ ಅದರಲ್ಲಿಯೂ ಯುವ ಪೀಳಿಗೆಗೆ ಹಾರ್ನ್ ಬಿಲ್ ಹಕ್ಕಿಯ ಕುರಿತು ಮಾಹಿತಿ ಹಾಗೂ ಅರಿವು ಮೂಡಿಸುವುದು ಮತ್ತು ದಾಂಡೇಲಿ ಭಾಗದಲ್ಲಿರುವ ಅಪರೂಪದ ಪಕ್ಷಿಗಳ ಸಂತತಿಯನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಈ ಉತ್ಸವವನ್ನು ಆಯೋಜಿಸಲಾಗುತ್ತಿದೆ.

ಉತ್ಸವದ ನಿಮಿತ್ತ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಹಾರ್ನ್ ಬಿಲ್ ಪಕ್ಷಿಗೆ ಸಂಬಂಧಪಟ್ಟಂತೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜತೆಗೆ ಛಾಯಾ ಚಿತ್ರ, ಚಿತ್ರಕಲೆ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಉತ್ತಮ ಛಾಯಾ ಚಿತ್ರ ಹಾಗೂ ಚಿತ್ರಕಲೆಗೆ ಬಹುಮಾನಗಳನ್ನು ಕೂಡ ನೀಡಲಾಗುತ್ತಿದೆ.
ಫೆ.3 ರಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಅರಣ್ಯ ಸಚಿವ ರಮಾನಾಥ ರೈ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಗಾಲ್ಯಾಂಡಿನ ಕಲಾ ತಂಡದವರು ವಿಶಿಷ್ಟ ನೃತ್ಯ ರೂಪಕವನ್ನು ಹಾಗೂ ಪರಿಸರದ ಕುರಿತು ವಾಸುದೇವ ಅವರು ವಾದ್ಯ ಗೋಷ್ಠಿಯನ್ನು ಮತ್ತು ವಿನಯ ಹೆಗಡೆ ಬಾನಂಗಳದಲ್ಲಿ ಚಿತ್ತಾರ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ದಾಂಡೇಲಿ ಹಾರ್ನ್ ಬಿಲ್ ಸಂರಕ್ಷಿತ ಪ್ರದೇಶ : ದಾಂಡೇಲಿಯ ಅರಣ್ಯ ಪ್ರದೇಶದ ಭಾಗವನ್ನು ಹಾರ್ನ್ ಬಿಲ್ ಸಂರಕ್ಷಿತ ಪ್ರದೇಶ ಎಂದು ಕರೆಯಲಾಗುತ್ತದೆ. ಹಾರ್ನ್ ಬಿಲ್ ಗೆ ಕನ್ನಡದಲ್ಲಿ ಮುಂಗಟ್ಟೆ ಎಂದು ಕರೆಯಲಾಗುತ್ತದೆ.

ಸ್ಥಳೀಯವಾಗಿ ಇದನ್ನು ಕನಾರಿ ಹಾಗೂ ವಿಮಾನ ಪಕ್ಷಿ ಎಂದು ಕೂಡ ಕರೆಯುತ್ತಾರೆ. ಭಾರತದಲ್ಲಿ ಹಾರ್ನ್ ಬಿಲ್ ಗಳ 9 ಪ್ರಭೇದಗಳಿದ್ದು, ಅವುಗಳಲ್ಲಿ 4 ಬಗೆಯ ಹಾರ್ನ್ ಬಿಲ್ ಗಳು ದಾಂಡೇಲಿಯ ಸುತ್ತಮುತ್ತಲಲ್ಲೇ ಕಂಡು ಬರುತ್ತವೆ. ಮಲಬಾರ ಗ್ರೇ ಹಾರ್ನ್ ಬಿಲ್, ಇಂಡಿಯನ್ ಗ್ರೇ ಹಾರ್ನ್ ಬಿಲ್, ಮಲಬಾರ್ ಪೈಡ್ ಹಾರ್ನಬಿಲ್ ಹಾಗೂ ಗ್ರೇಟ್ ಇಂಡಿಯನ್ ಹಾರ್ನಬಿಲ್ ಇಲ್ಲಿ ಕಂಡುಬರುತ್ತವೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications