ದಾಂಡೇಲಿಯಲ್ಲಿ ಫೆ. 2ರಿಂದ ಹಾರ್ನ್ ಬಿಲ್ ಫೆಸ್ಟಿವಲ್!
ಕಾರವಾರ, ಜನವರಿ 23: ಪಕ್ಷಿ ವೀಕ್ಷಣಾಕಾರರಿಗೆ ಉತ್ತರಕನ್ನಡ ಜಿಲ್ಲಾಡಳಿತ "ಹಾರ್ನ್ ಬಿಲ್ ಫೆಸ್ಟ್" ಆಯೋಜಿಸುವ ಮೂಲಕ ಕಾನನದ ನಡುವೆ ಮನೋರಂಜನೆಗೆ ಅವಕಾಶ ಕಲ್ಪಿಸುತ್ತಿದೆ.
ಫೆ.2 ರಿಂದ ಫೆ.4 ರವರೆಗೆ ದಾಂಡೇಲಿಯ ಅರಣ್ಯ ಅತಿಥಿ ಗ್ರಹದ ಆವರಣದಲ್ಲಿ ಉತ್ಸವವನ್ನು ಆಯೋಜಿಸಲಾಗಿದ್ದು, ಉತ್ಸವದಲ್ಲಿ ದೇಶದ ನಾನಾ ಭಾಗಗಳಿಂದ ಪಕ್ಷಿ ತಜ್ಞರು, ಛಾಯಾ ಚಿತ್ರ ತಜ್ಞರು ಆಗಮಿಸಿ ಉಪನ್ಯಾಸ ಹಾಗೂ ಪ್ರಾತ್ಯಕ್ಷಿತೆ ನೀಡಲಿದ್ದಾರೆ.
ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಈ ಹಬ್ಬವನ್ನು ಆಯೋಜಿಸಲಾಗುತ್ತಿದ್ದು, ಎಲ್ಲ ವರ್ಗದ ಜನರಿಗೂ ಅದರಲ್ಲಿಯೂ ಯುವ ಪೀಳಿಗೆಗೆ ಹಾರ್ನ್ ಬಿಲ್ ಹಕ್ಕಿಯ ಕುರಿತು ಮಾಹಿತಿ ಹಾಗೂ ಅರಿವು ಮೂಡಿಸುವುದು ಮತ್ತು ದಾಂಡೇಲಿ ಭಾಗದಲ್ಲಿರುವ ಅಪರೂಪದ ಪಕ್ಷಿಗಳ ಸಂತತಿಯನ್ನು ಉಳಿಸಿ, ಬೆಳೆಸುವ ದೃಷ್ಟಿಯಿಂದ ಈ ಉತ್ಸವವನ್ನು ಆಯೋಜಿಸಲಾಗುತ್ತಿದೆ.

ಉತ್ಸವದ ನಿಮಿತ್ತ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಹಾರ್ನ್ ಬಿಲ್ ಪಕ್ಷಿಗೆ ಸಂಬಂಧಪಟ್ಟಂತೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜತೆಗೆ ಛಾಯಾ ಚಿತ್ರ, ಚಿತ್ರಕಲೆ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಉತ್ತಮ ಛಾಯಾ ಚಿತ್ರ ಹಾಗೂ ಚಿತ್ರಕಲೆಗೆ ಬಹುಮಾನಗಳನ್ನು ಕೂಡ ನೀಡಲಾಗುತ್ತಿದೆ.
ಫೆ.3 ರಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಅರಣ್ಯ ಸಚಿವ ರಮಾನಾಥ ರೈ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಗಾಲ್ಯಾಂಡಿನ ಕಲಾ ತಂಡದವರು ವಿಶಿಷ್ಟ ನೃತ್ಯ ರೂಪಕವನ್ನು ಹಾಗೂ ಪರಿಸರದ ಕುರಿತು ವಾಸುದೇವ ಅವರು ವಾದ್ಯ ಗೋಷ್ಠಿಯನ್ನು ಮತ್ತು ವಿನಯ ಹೆಗಡೆ ಬಾನಂಗಳದಲ್ಲಿ ಚಿತ್ತಾರ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ದಾಂಡೇಲಿ ಹಾರ್ನ್ ಬಿಲ್ ಸಂರಕ್ಷಿತ ಪ್ರದೇಶ : ದಾಂಡೇಲಿಯ ಅರಣ್ಯ ಪ್ರದೇಶದ ಭಾಗವನ್ನು ಹಾರ್ನ್ ಬಿಲ್ ಸಂರಕ್ಷಿತ ಪ್ರದೇಶ ಎಂದು ಕರೆಯಲಾಗುತ್ತದೆ. ಹಾರ್ನ್ ಬಿಲ್ ಗೆ ಕನ್ನಡದಲ್ಲಿ ಮುಂಗಟ್ಟೆ ಎಂದು ಕರೆಯಲಾಗುತ್ತದೆ.

ಸ್ಥಳೀಯವಾಗಿ ಇದನ್ನು ಕನಾರಿ ಹಾಗೂ ವಿಮಾನ ಪಕ್ಷಿ ಎಂದು ಕೂಡ ಕರೆಯುತ್ತಾರೆ. ಭಾರತದಲ್ಲಿ ಹಾರ್ನ್ ಬಿಲ್ ಗಳ 9 ಪ್ರಭೇದಗಳಿದ್ದು, ಅವುಗಳಲ್ಲಿ 4 ಬಗೆಯ ಹಾರ್ನ್ ಬಿಲ್ ಗಳು ದಾಂಡೇಲಿಯ ಸುತ್ತಮುತ್ತಲಲ್ಲೇ ಕಂಡು ಬರುತ್ತವೆ. ಮಲಬಾರ ಗ್ರೇ ಹಾರ್ನ್ ಬಿಲ್, ಇಂಡಿಯನ್ ಗ್ರೇ ಹಾರ್ನ್ ಬಿಲ್, ಮಲಬಾರ್ ಪೈಡ್ ಹಾರ್ನಬಿಲ್ ಹಾಗೂ ಗ್ರೇಟ್ ಇಂಡಿಯನ್ ಹಾರ್ನಬಿಲ್ ಇಲ್ಲಿ ಕಂಡುಬರುತ್ತವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications