ಹೊನ್ನಾವರ; ಚಿನ್ನದ ಸರ ದೋಚಿದವ 24 ಗಂಟೆಯಲ್ಲಿ ಬಂಧನ!
ಹೊನ್ನಾವರ, ಜುಲೈ 02; 'ಅನ್ನದಾತುರಕ್ಕಿಂತ ಚಿನ್ನದಾತುರ ತೀಕ್ಷ್ಣ' ಎನ್ನುವ ಮಾತಿದೆ. ಚಿನ್ನದ ಮೇಲಿನ ವ್ಯಾಮೋಹದಿಂದ ಅನ್ನ ಹಾಕಿದ ಮನೆಗೆ ಕನ್ನ ಹಾಕಿ 10 ಸಾವಿರ ನಗದು ಹಾಗೂ ಚಿನ್ನದ ನೆಕ್ಲೆಸ್ ದೋಚಿದ್ದ ಆರೋಪಿಯನ್ನು, ಕದ್ದ ಮಾಲು ಸಮೇತ 24 ಗಂಟೆಯಲ್ಲಿ ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಚಿನ್ ವಿರೂಪಾಕ್ಷಪ್ಪ ರಾಮಾಪುರ (21) ಎಂದು ಗುರುತಿಸಲಾಗಿದೆ. ಈತ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿಯ ಕೃಷ್ಣ ಜಟ್ಟಿ ಪಟಗಾರ ಎಂಬುವವರ ಮನೆಯ ಗಾರೆ ಕೆಲಸಕ್ಕಾಗಿ ಏಪ್ರಿಲ್ ತಿಂಗಳಲ್ಲಿ ಬಂದಿದ್ದ.
ಗಾರೆ ಕೆಲಸ ಮಾಡುತ್ತಿದ್ದ ಸಮಯದಲ್ಲಿಯೇ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾದ ಕಾರಣ ಊರಿಗೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಕೃಷ್ಣ ಪಟಗಾರ ಕುಟುಂಬದವರು ಮಾನವೀಯತೆ ದೃಷ್ಟಿಯಿಂದ ಆತನಿಗೆ ತಮ್ಮ ಮನೆಯಲ್ಲಿಯೇ ಆಶ್ರಯ ಕೊಟ್ಟು, ಊಟ, ತಿಂಡಿ ನೀಡಿದ್ದರು. ಆದರೆ ಮೇ ತಿಂಗಳ ಮೊದಲ ವಾರದಲ್ಲಿ ಈತ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ.

ಅನುಮಾನಗೊಂಡು ಮನೆಯನ್ನು ತಡಕಾಡಿದಾಗ 10 ಸಾವಿರ ನಗದು ಹಾಗೂ 18 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳುವಾಗಿರುವುದು ಕಂಡುಬಂದಿದೆ. ಆದರೂ ಕೆಲಸಕ್ಕೆ ಬಂದವನ ಬಗ್ಗೆ ಅಷ್ಟಾಗಿ ಅನುಮಾನವಿಲ್ಲದ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಿಂದೇಟು ಹಾಕಿದ್ದರು.
ಒಂದು ತಿಂಗಳಾದರೂ ಕಳುವಾದ ಸೊತ್ತು ಸಿಗದ ಹಿನ್ನಲೆಯಲ್ಲಿ 29-06-2021ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಿ.ಪಿ.ಐ ಶ್ರೀಧರ ಎಸ್. ಆರ್. ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿಕೊಂಡು ಅಖಾಡಕ್ಕಿಳಿದು ಒಂದೇ ದಿನದಲ್ಲಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೆರೂರಿನ ತನ್ನ ಸ್ವಂತ ಮನೆಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ ಸಾವಿತ್ರಿ ನಾಯಕ, ಪಿ.ಎಸ್.ಐ ಶಶಿಕುಮಾರ್ ಸಿ. ಆರ್. (ಕಾ.ಸು), ಪಿ. ಎಸ್. ಐ. 2 ಮಹಾಂತೇಶ ನಾಯಕ ಮುಂತಾದವರು ಪಾಲ್ಗೊಂಡಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications