ಹೊನ್ನಾವರ; ಚಿನ್ನದ ಸರ ದೋಚಿದವ 24 ಗಂಟೆಯಲ್ಲಿ ಬಂಧನ!
ಹೊನ್ನಾವರ, ಜುಲೈ 02; 'ಅನ್ನದಾತುರಕ್ಕಿಂತ ಚಿನ್ನದಾತುರ ತೀಕ್ಷ್ಣ' ಎನ್ನುವ ಮಾತಿದೆ. ಚಿನ್ನದ ಮೇಲಿನ ವ್ಯಾಮೋಹದಿಂದ ಅನ್ನ ಹಾಕಿದ ಮನೆಗೆ ಕನ್ನ ಹಾಕಿ 10 ಸಾವಿರ ನಗದು ಹಾಗೂ ಚಿನ್ನದ ನೆಕ್ಲೆಸ್ ದೋಚಿದ್ದ ಆರೋಪಿಯನ್ನು, ಕದ್ದ ಮಾಲು ಸಮೇತ 24 ಗಂಟೆಯಲ್ಲಿ ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಚಿನ್ ವಿರೂಪಾಕ್ಷಪ್ಪ ರಾಮಾಪುರ (21) ಎಂದು ಗುರುತಿಸಲಾಗಿದೆ. ಈತ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿಯ ಕೃಷ್ಣ ಜಟ್ಟಿ ಪಟಗಾರ ಎಂಬುವವರ ಮನೆಯ ಗಾರೆ ಕೆಲಸಕ್ಕಾಗಿ ಏಪ್ರಿಲ್ ತಿಂಗಳಲ್ಲಿ ಬಂದಿದ್ದ.
ಗಾರೆ ಕೆಲಸ ಮಾಡುತ್ತಿದ್ದ ಸಮಯದಲ್ಲಿಯೇ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾದ ಕಾರಣ ಊರಿಗೆ ಹಿಂತಿರುಗಲು ಸಾಧ್ಯವಾಗಲಿಲ್ಲ. ಕೃಷ್ಣ ಪಟಗಾರ ಕುಟುಂಬದವರು ಮಾನವೀಯತೆ ದೃಷ್ಟಿಯಿಂದ ಆತನಿಗೆ ತಮ್ಮ ಮನೆಯಲ್ಲಿಯೇ ಆಶ್ರಯ ಕೊಟ್ಟು, ಊಟ, ತಿಂಡಿ ನೀಡಿದ್ದರು. ಆದರೆ ಮೇ ತಿಂಗಳ ಮೊದಲ ವಾರದಲ್ಲಿ ಈತ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ.

ಅನುಮಾನಗೊಂಡು ಮನೆಯನ್ನು ತಡಕಾಡಿದಾಗ 10 ಸಾವಿರ ನಗದು ಹಾಗೂ 18 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳುವಾಗಿರುವುದು ಕಂಡುಬಂದಿದೆ. ಆದರೂ ಕೆಲಸಕ್ಕೆ ಬಂದವನ ಬಗ್ಗೆ ಅಷ್ಟಾಗಿ ಅನುಮಾನವಿಲ್ಲದ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಿಂದೇಟು ಹಾಕಿದ್ದರು.
ಒಂದು ತಿಂಗಳಾದರೂ ಕಳುವಾದ ಸೊತ್ತು ಸಿಗದ ಹಿನ್ನಲೆಯಲ್ಲಿ 29-06-2021ರಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಿ.ಪಿ.ಐ ಶ್ರೀಧರ ಎಸ್. ಆರ್. ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿಕೊಂಡು ಅಖಾಡಕ್ಕಿಳಿದು ಒಂದೇ ದಿನದಲ್ಲಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೆರೂರಿನ ತನ್ನ ಸ್ವಂತ ಮನೆಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ ಸಾವಿತ್ರಿ ನಾಯಕ, ಪಿ.ಎಸ್.ಐ ಶಶಿಕುಮಾರ್ ಸಿ. ಆರ್. (ಕಾ.ಸು), ಪಿ. ಎಸ್. ಐ. 2 ಮಹಾಂತೇಶ ನಾಯಕ ಮುಂತಾದವರು ಪಾಲ್ಗೊಂಡಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications