ಭಟ್ಕಳದಲ್ಲಿ ಮೀನಿಗಾಗಿ ಹಾಕಿದ್ದ ಬಲೆಯಲ್ಲಿ ಸಿಕ್ಕಿದ್ದೇನು ಗೊತ್ತಾ?
ಕಾರವಾರ, ಆಗಸ್ಟ್ 19: ಭಟ್ಕಳದ ಅಳ್ವೆಕೋಡಿ ಕಡಲತೀರದಲ್ಲಿ ಮೀನಿಗಾಗಿ ಹಾಕಿದ್ದ ಬಲೆಯಲ್ಲಿ ಬೃಹತ್ ಮೊಸಳೆಯೊಂದು ಸಿಕ್ಕಿಬಿದ್ದಿದೆ.
Recommended Video
ಮೀನುಗಾರರು ಮೀನು ಹಿಡಿಯಲೆಂದು ಅಳ್ವೆಕೋಡಿಯ ಸಮುದ್ರದ ಭಾಗದಲ್ಲಿ ಕೈ ರಂಪಣಿ ಬಲೆ ಹಾಕಿ ಬಿಟ್ಟಿದ್ದರು. ಇಂದು ಬಲೆಯನ್ನು ಎಳೆದು ಮೀನುಗಳನ್ನು ತೆಗೆಯಲೆಂದು ಮೀನುಗಾರರು ಮುಂದಾದಾಗ ಅದರಲ್ಲಿ ಮೊಸಳೆ ಸಿಕ್ಕಿಬಿದ್ದಿದೆ. ಮೊಸಳೆಯನ್ನು ಕಂಡು ಅಚ್ಚರಿಗೊಂಡಿದ್ದಾರೆ.
ಸಮುದ್ರದ ಅಬ್ಬರ ಹೆಚ್ಚಿರುವ ಕಾರಣ ವೆಂಕಟಾಪುರ ಹೊಳೆಯ ಹಿನ್ನೀರಿನಿಂದ ಈ ಮೊಸಳೆ ಸಮುದ್ರಕ್ಕೆ ಬಂದಿತ್ತು ಎನ್ನಲಾಗಿದೆ. ಮೀನುಗಳ ರಾಶಿಯೊಂದಿಗೆ ಸಿಕ್ಕಿದ ಭಾರೀ ಗಾತ್ರದ ಮೊಸಳೆಯನ್ನು ಬಲೆಯಿಂದ ಬಿಡಿಸಿದ ಮೀನುಗಾರರು, ಅರಣ್ಯ ಇಲಾಖೆಯ ಅಧಿಕಾರಿಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಮೊಸಳೆಗಳು ಉಪ್ಪು ನೀರಿನಲ್ಲಿ, ಅದರಲ್ಲೂ ಸಮುದ್ರದಲ್ಲಿ ಕಾಣ ಸಿಗುವುದು ಅತಿ ವಿರಳ. ಆದರೆ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹೆಚ್ಚಿದ ನೀರಿನ ಹರಿವಿನಿಂದಾಗಿ ಸಮೀಪದ ವೆಂಕಟಾಪುರ ಹೊಳೆಯ ಹಿನ್ನೀರಿನಿಂದ ಸಮುದ್ರಕ್ಕೆ ಮೊಸಳೆ ಕೊಚ್ಚಿಕೊಂಡು ಬಂದಿರಬಹುದು ಎಂದು ಅರಣ್ಯ ಅಧಿಕಾರಿಗಳು ಶಂಕಿಸಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications