ಯುರೋಪ್ ಪ್ರವಾಸಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ.ದಾಮೋದರ್ ಆಯ್ಕೆ
ಕಾರವಾರ, ಜೂನ್.18: ಲಕ್ಷದ್ವೀಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ ದಾಮೋದರ ನಾಯ್ಕ ಅವರು ಪ್ರಧಾನಿ ನರೇಂದ್ರ ಮೋದಿಯವರು ಆಯ್ಕೆ ಮಾಡಿದ ಮೂವರು ಕೇಂದ್ರ ಸಂಪುಟ ಸಚಿವರು ಹಾಗೂ ದೇಶದ ಹಿರಿಯ ಅಧಿಕಾರಿಗಳನ್ನೊಳಗೊಂಡ 16 ಜನ ಸದಸ್ಯರ ತಂಡದಲ್ಲಿ ಆಯ್ಕೆಯಾಗಿ ಜೂನ್ 28 ರಿಂದ ಜಲೈ 9 ರವರೆಗೆ ಯೂರೋಪ್ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ತಂಡವು ದೇಶದ ರೈತರ ಅಭಿವೃದ್ಧಿ ಮತ್ತು ಕೃಷಿ ಕ್ಷೇತ್ರದಲ್ಲಿ ಪಾಶ್ಚಿಮಾತ್ಯ ದೇಶಗಳ ಆಧುನಿಕ ತಂತ್ರಜ್ಞಾನ ಹಾಗೂ ನೀರಾವರಿ ವಿಧಾನಗಳನ್ನು ಅಳವಡಿಸಿಕೊಂಡು ದೇಶದ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಸಲುವಾಗಿ ಹಾಗೂ ಆಸ್ಟ್ರೇಲಿಯಾದ ದೇಶದ ವಿಯೆಟ್ನಾಂನಲ್ಲಿ ಜುಲೈ 1 ರಂದು ಆಯೋಜನೆಗೊಂಡ ಅಂತರಾಷ್ಟ್ರೀಯ ಕೃಷಿ ಆಣೆಕಟ್ಟು ಸಮಾವೇಶ ಮತ್ತು ವಿವಿಧ ದೇಶಗಳೊಂದಿಗೆ ಆಯೋಜನೆಗೊಂಡ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ.
ನಂತರ ದೇಶದ ಪ್ರವಾಸೋದ್ಯಮ ಅಭಿದ್ಧಿಯ ಸಲುವಾಗಿ ಆಯೋಜನೆಗೊಂಡ ವಿವಿಧ ಕಾರ್ಯಾಗಾರದಲ್ಲಿ ಭಾಗವಹಿಸಿ, ಯೂರೋಪ್ ನ ವಿವಿಧ ಸ್ಥಳ ಪ್ರಾತ್ಯಕ್ಷಿಕೆಯನ್ನು ಭೇಟಿ ನೀಡಲಿದ್ದಾರೆ.

ದಾಮೋದರ ಅವರು ಪ್ರಸ್ತುತ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದಲ್ಲಿ ದೇಶದ ಅತಿ ಕಿರಿಯ ವಯಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿ ಕೃಷಿ, ಹಣಕಾಸು, ಆರೋಗ್ಯ ಮೀನುಗಾರಿಕೆ, ಲೋಕೋಪಯೋಗಿ, ಪರಿಸರ, ಪಶುಸಂಗೋಪನೆ, ಆಹಾರ ಮತ್ತು ನಾಗರಿಕ ಸರಬರಾಜು, ಸಹಕಾರ, ಪ್ರವಾಸೋದ್ಯಮ, ಕಾರ್ಮಿಕ, ಅರಣ್ಯ, ಉದ್ಯೊಗ ಮತ್ತು ತರಭೇತಿ, ಮಾಹಿತಿ ತಂತ್ರಜ್ಞಾನ, ಕಾನೂನು ಹಾಗೂ ವಾರ್ತಾ ಮತ್ತು ಪ್ರಸಾರ ಇಲಾಖೆಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ.
ಮೂಲತಃ ಕೃಷಿ ಕುಟುಂಬದವರಾಗಿ, ಕೃಷಿಯಲ್ಲಿ ಸ್ನಾತಕೋತ್ತರ ಪದವೀಧರರಾದ ದಾಮೋದರ ಅವರಿಗೆ ಕೃಷಿಯಲ್ಲಿ ಅಪಾರ ಆಸಕ್ತಿ. ದೇಶದ ರೈತವರ್ಗದವರ ಕುರಿತು ವಿಶೇಷ ಕಾಳಜಿಯನ್ನೂ ಅವರು ಹೊಂದಿದ್ದಾರೆ.
ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷದ್ವೀಪದಲ್ಲಿ ಈಗಾಗಲೇ ಸಾವಯವ ಕೃಷಿ ಮತ್ತು ಇಸ್ರೇಲ್ ದೇಶದ ಆಧುನಿಕ ಹೈಡ್ರೋಪಾನಿಕ್ಸ್ (ಪೋಶಕಾಂಶಯುಕ್ತ ನೀರಿನಲ್ಲಿ ನೇರ ಕೃಷಿ) ವಿಧಾನಗಳನ್ನು ಅಭಿವೃದ್ದಿಪಡಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ.

ದಾಮೋದರ ಅವರು ಸಿದ್ಧಪಡಿಸಿದ ಕವರತ್ತಿ ಸ್ಮಾರ್ಟ್ ಸಿಟಿ ಯೋಜನೆಗೆ ಈಗಾಗಲೇ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆಯ ಹೆಚ್ಚಿನ ತರಬೇತಿಯ ಸಂಬಂಧ ಜುಲೈ 16 ರಿಂದ ಆಗಸ್ಟ್ 2 ರ ತನಕ ಜಪಾನ್ ದೇಶದ ಪ್ರವಾಸವನ್ನು ಕೂಡ ದಾಮೋದರ ಅವರು ಕೈಗೊಳ್ಳಲಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪ ಭೇಟಿ ನೀಡಿದ್ದ ಸಂದರ್ಭದಲ್ಲಿ ಎ.ಟಿ ದಾಮೋದರ ನಾಯ್ಕ ಅವರು ಪ್ರಸ್ತುತ ಪಡಿಸಿದ್ದ ಪ್ರವಾಸೋದ್ಯಮ ಯೋಜನೆಯ ಕುರಿತಾಗಿ ಮೋದಿಯವರ ಪ್ರಶಂಸೆಗೆ ಪಾತ್ರರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications